Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ನವಿರು ಹಾಸ್ಯದ ನುಡಿತೋರಣ

ಈ ಪುಸ್ತಕದ ನಿಜವಾದ ಸತ್ವ ಇರುವುದು ಅಮೆರಿಕಾದ ಜಾಗಗಳ ವರ್ಣನೆಯಲ್ಲಲ್ಲ. ಅವರು ಅಮೆರಿಕಾ ಮತ್ತು ಕೆನಡಾ ಪ್ರವಾಸವನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಂಡರು ಅನ್ನುವುದರಲ್ಲಿ. ಅವರ ಪ್ರತಿ ನಡೆ ನುಡಿಯಲ್ಲೂ ಅವರ ವ್ಯಕ್ತಿತ್ವದ ದರ್ಶನವಾಗುತ್ತದೆ. ಹಾಗಂತ ಎಲ್ಲವೂ ಗಂಭೀರವಾಗಿಯೇ ಸಾಗುತ್ತದೆ ಅಂತ ಅಲ್ಲ, ತಪ್ಪಿ ಅವರು ಕೆಎಫ್‌ಸಿ ಚಿಕನ್ ತಿನ್ನಲು ಹೋದ ಪ್ರಸಂಗ, ಆಮೇಲೆ ಡೋನಟ್ ಪರಿಚಯವಿಲ್ಲದ ಅವರು ಅನುಮಾನವೇ ಬೇಡವೆಂದು ತಿನ್ನದಿರುವುದು .. ಹೀಗೆ ಅಲ್ಲಿನ ಅನೇಕ ಘಟನೆಗಳನ್ನು ನವಿರು ಹಾಸ್ಯದಿಂದ ವರ್ಣಿಸುತ್ತಾರೆ.

Read More

ನಿಂತಲ್ಲಿ ಕುಂತಲ್ಲಿ ಕಾಡುವ ಕಥೆ ಬರೆದ ದಾದಾ

ಇಲ್ಲಿರುವ ಎಲ್ಲಾ ಕತೆಗಳಿಗಿಂತ ಕೊನೆಯ ಕತೆ ‘ಎಲ್ಲೋ ಯಲ್ಲೋ’
ಕಥೆಯೇ ಯಾಕೆ ಜಾಸ್ತಿ ಇಷ್ಟವಾಯಿತು ಅಂದುಕೊಂಡರೂ ಯಾವುದ್ಯಾವುದೋ ಕಾರಣಗಳು ತೋಚುತ್ತವೆ. ಆದರೆ ಮುಖ್ಯವಾಗಿ ಇಷ್ಟವಾಗಿದ್ದು ಒಂದು ಗಂಡು ಮತ್ತು ಹೆಣ್ಣಿನ ನಡುವೆ ಇರಬಹುದಾದ ಸಹಜವಾದ ಗೆಳೆತನದ ರೀತಿ ಮತ್ತು ಒಬ್ಬಳು ಶಿಕ್ಷಕಿಯ ಗಂಡನಾಗಿ ಅವರ ಕಷ್ಟ‌ನಷ್ಟಗಳ ಬಗ್ಗೆ ಅರಿವಿರುವುದು. ಹೇಗೆ ಹುಡುಗ ಹುಡುಗ ಆತ್ಮೀಯ ಗೆಳೆಯರಾಗಿರಲು ಸಾಧ್ಯವೋ ಅದೇ ರೀತಿ ಹುಡುಗ ಹುಡುಗಿ ಕೂಡಾ ಅದೇ ಆತ್ಮೀಯತೆಯಲ್ಲಿರಲು ಸಾಧ್ಯ. ಸಮಾಜ ಈ ವಿಷಯದಲ್ಲಿ ಮುಂಚಿನಷ್ಟು ಮಡಿವಂತಿಕೆ ಇಟ್ಟುಕೊಂಡಿಲ್ಲವಾದರೂ ಪೂರ್ತಿ ಬದಲಾಗಿಯೂ ಇಲ್ಲ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಸಮಾನತೆಯ ಆಶಯವನ್ನು ಒರೆಗೆ ಹಚ್ಚುವ ಕತೆ

ಸಿದ್ಧಾಂತಗಳು ಎಷ್ಟೇ ಉದಾತ್ತವಾಗಿದ್ದರೂ ಅದನ್ನು ಜಾರಿಗೊಳಿಸುವ ವಿಧಾನ ಸರಿಯಿಲ್ಲದಿದ್ದರೆ ಎಲ್ಲಾ ಅನರ್ಥವೇ ಆಗುತ್ತದೆ ಎಂಬುದು ಇದರ ಮುಖ್ಯ ಸಾರ. ಒಂದು ತೋಟದಲ್ಲಿರುವ ಪ್ರಾಣಿಗಳೆಲ್ಲಾ ದುಷ್ಟ ಒಡೆಯನ ವಿರುದ್ಧ ಬಂಡೆದ್ದು ತೋಟವನ್ನು ವಶಪಡಿಸಿಕೊಂಡು ಸಮಾನತೆಯ ಸಮಾಜ ಕಟ್ಟಲು ಹೊರಡುವ ಕತೆಯಿದು. ಆದರೆ ಕಾಲಕಳೆಯುತ್ತಾ ಹೋದಂತೆ ನಾಯಕನ ಆದರ್ಶಗಳೆಲ್ಲಾ ಮಣ್ಣುಪಾಲಾಗಿ ಅವನೂ ಒಬ್ಬ ಭ್ರಷ್ಟನೇ ಆಗುತ್ತಾನೆ. ಒಂದು ಕೆಟ್ಟ ಸಮಾಜದಲ್ಲಿನ ಎಲ್ಲಾ ಗುಣಗಳು ಅಲ್ಲೂ ಬರುತ್ತದೆ. ಪ್ರಬಲರಾದ ಹುದ್ದೆಯಲ್ಲಿರುವವರಿಂದ ದುರ್ಬಲರ ಶೋಷಣೆ ನಿರಂತರವಾಗಿ ನಡೆಯುತ್ತದೆ. ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಮರುಭೂಮಿಯ ಹೂ ರಕ್ಷಿಸಿದ “ಸಫಾ” ಎಂಬ ಮತ್ತೊಂದು ಹೂ

ವಾರಿಸ್ ಜಿಬೂತಿಗೆ ಬಂದಾಗ ಸಫಾಳಿಗೆ ಅವಳ ಸಾಂಗತ್ಯ ಸ್ವರ್ಗವನ್ನೇ ಸಿಕ್ಕಿದ ಹಾಗೆ ಮಾಡುತ್ತದೆ. ಹೋಟೆಲಿನಲ್ಲಿ ಸಿಗುವ ಬರ್ಗರ್ ಮತ್ತು ಇತರೇ ಮಾಂಸದ ಅಡುಗೆಗಳು ಅವಳಿಗೆ ತೀರಾ ಕೈಗೆಟುಕದ ವಸ್ತುಗಳಾಗಿದ್ದ ಕಾರಣ ಅತ್ಯಂತ ಖುಷಿಯಿಂದ ಆಸ್ವಾದಿಸುತ್ತಾಳೆ. ಆದರೆ ಅವಳು ಹೋಟೆಲಿನ ಈಜುಕೊಳದಲ್ಲಿ ಈಜುಡುಗೆ ಧರಿಸಿ ಈಜುವುದನ್ನು ನೋಡಿದಾಗ ಅಚಾನಕ್ಕಾಗಿ ಬಂದ ಅವಳ ತಂದೆ ಕ್ರುದ್ಧನಾಗುತ್ತಾನೆ. ಆದರೆ ಹಣ ಅವನ ಬಾಯನ್ನು ಸುಲಭವಾಗಿ‌ ಮುಚ್ಚಿಸುತ್ತದೆ. ನಿಧಾನಕ್ಕೆ ಸಫಾಳ ಕುಟುಂಬದ ಮನವೊಲಿಸುವಲ್ಲಿ ಯಶಸ್ವಿಯಾದ ವಾರಿಸ್ ಸಫಾಳನ್ನು ಕರೆದೊಯ್ಯುವ ಪ್ರಯತ್ನ ಮುಂದುವರೆಸುತ್ತಾರೆ.
ಗಿರಿಧರ್‌ ಗುಂಜಗೋಡು ಬರೆಯುವ “ಓದುವ ಸುಖ” ಅಂಕಣ

Read More

ಅಳಿವಿನಂಚಿನಲ್ಲಿರುವ ಪದ್ಧತಿಗಳ ನೇಯ್ಗೆ

ಇದು ಅನಿರೀಕ್ಷಿತ ತಿರುವುಗಳಿಲ್ಲದ, ಊಹಿಸಲಾಧ್ಯವಾದ ಸಂಗತಿಗಳಿರುವ ಕಾದಂಬರಿಯೂ ಅಲ್ಲ. ಪ್ರಧಾನ ಕತೆ ಒಂದು ಕಾದಂಬರಿಯಾಗಿ ಸಾಗಲು ಒಂದು ನೆಪವಷ್ಟೇ. ಮುಖ್ಯವಾಗಿ ಮಧ್ಯಘಟ್ಟ ಆ ಭಾಗದ ಮಲೆನಾಡಿನ ೭೦-೮೦ ವರ್ಷಗಳ‌ ಹಿಂದಿನ ಜೀವನ ಪದ್ಧತಿ, ನಿಸರ್ಗದ ಜೊತೆಗಿನ ಸಂಬಂಧ, ಆಹಾರ ಪದ್ಧತಿ, ಕಷ್ಟ ಸುಖಗಳು, ವಿವಿಧ ಸಮುದಾಯಗಳು‌ ಮತ್ತು ಆ ಸಮುದಾಯಗಳ‌ ನಡುವಣ ಅನುಬಂಧ, ವಿಶಿಷ್ಟವಾದ ನಾಟೀ ಔಷಧಿಗಳು ಇತ್ಯಾದಿಗಳ ಕುರಿತು ಬಹಳ ಆಪ್ತವಾಗಿ ಹೇಳುತ್ತಾ ಹೋಗುತ್ತದೆ‌.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ