Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಡಲು ನೋಡಲು ಹೋದವಳ ನವಿರು ಭಾವಗಳು

ಮರುದಿನ ಬೆಳಗಾದರೂ ಆ ಚೀತ್ಕಾರ ನನ್ನ ಕಿವಿಯಲ್ಲಿ ಇನ್ನೂ‌ ಮೊರೆದಂತಾಗುತ್ತಿತ್ತು, ಜಿಎಸ್ಎಸ್ ಅವರ ಕಾಣದ ಕಡಲಿನಂತೆ. ಕಾಲು ಸಾವಕಾಶವಾಗಿ ಆ ರೂಮಿನತ್ತ ಚಲಿಸಿದವು. ಮೆಲ್ಲನೆ ಬಾಗಿಲು ಬಡಿದು ಒಳ ಸರಿದೆ. ಒಂದು ಬದಿಗೆ ಸರಿದು ಮಲಗಿದ್ದ ಅಜ್ಜಿ ಸದ್ದಿಗೆ ಬೆಚ್ಚಿ ಬಿದ್ದವರಂತೆ ತಿರುಗಲು ಪ್ರಯತ್ನಿಸಿದರು, ವಿಚಿತ್ರ ವಾಸನೆಗೆ ಹೊಟ್ಟೆ ತೊಳಸಿದಂತಾಯಿತು. ತುಂಬಾ ಕಷ್ಟದಿಂದ ವಾಂತಿಯಾಗದಂತೆ ತಡೆದುಕೊಂಡೆ. ಒಂದು ಅಪನಂಬಿಕೆಯ ಎಳೆಯನ್ನು ಮಾತಲ್ಲಿಟ್ಟುಕೊಂಡೇ ಅಜ್ಜಿ ಮೇಜಿನ‌ ಮೇಲಿದ್ದ ಮುಸಂಬಿ ಕಡೆ ಕೈ ತೋರಿಸಿ “ಅದರ ಸಿಪ್ಪೆ ಬಿಡಿಸಿ ಕೊಡುತ್ತೀಯಾ?” ಕೇಳಿದರು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಚಿತ್ತಾಲರ ಕಾದಂಬರಿ ಪ್ರಪಂಚದಲ್ಲಿ ಒಂದೆರಡು ಹೆಜ್ಜೆ

ಕಥಾನಾಯಕ ಪುರುಷೋತ್ತಮ, ಆತನ ತಾಯಿ ಮತ್ತು ಬಳಗದ ನಡುವೆ ನಡೆಯುವ ಕಥಾನಕಗಳೇ ಈ ಕಾದಂಬರಿಯ ವಸ್ತು. ಜೊತೆಗೆ ಒಂದು ಮಹಾನಗರ ಮತ್ತೂ ದೊಡ್ಡದಾಗಿ ವಿಸ್ತರಣೆಯಾಗಬೇಕಾದರೆ ನಡೆಯುವ ತಲ್ಲಣಗಳು, ಹಣ ಅಧಿಕಾರದ ಮುಂದೆ ಮಾನವೀಯತೆ ಗೌಣವಾಗಿ ತನ್ನ ಸ್ವಾರ್ಥಕ್ಕಾಗಿ ಯಾವ ಕೆಲಸಕ್ಕೂ ಇಳಿಯಬಹುದಾದ ಮನುಜನ ಕ್ರೂರತನ, ತನ್ನ ಪ್ರೀತಿಯ ನೆಲವನ್ನು ಉಳಿಸಿಕೊಳ್ಳಲು ಎಲ್ಲಾ ಸ್ವಾರ್ಥಗಳ ಬಿಟ್ಟು ಮಾಡುವ ಹೋರಾಟ ಎಲ್ಲವೂ ಬಹಳ ಸುಂದರವಾಗಿ‌ ನಿರೂಪಿತಗೊಂಡಿದೆ
ಓದುವ ಸುಖ ಅಂಕಣದಲ್ಲಿ ಯಶವಂತ ಚಿತ್ತಾಲರ ಮೂರು ಕೃತಿಗಳ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ಜೋಕು ಮಾಡಲು ಬಳಸುತ್ತಿದ್ದ ಪದದ ನಿಜ ಅರ್ಥ ತಿಳಿಯಿತು

ಮೋಹನ ಸ್ವಾಮಿ ಒಂದು ಕಥಾ ಸಂಕಲನವಾದರೂ ನಿಧಾನವಾಗಿ LGBT ಸಮುದಾಯದೆಡೆಗಿನ ನನ್ನ ಮನೋಭಾವನೆಯನ್ನು ಬದಲಾಯಿಸಿಕೊಳ್ಳಲು ಸಹಾಯಮಾಡಿತು. ನನ್ನೆದುರು ಆ ಸಮುದಾಯದ ವ್ಯಕ್ತಿಗಳು ಸಿಕ್ಕಾಗ ಮಾಮೂಲಿ ಗಂಡು ಹೆಣ್ಣುಗಳ ಹಾಗೇ ಮಾತನಾಡಲು, ಹರಟೆ ಹೊಡೆಯಲು ಸಾಧ್ಯವಾಯಿತು. ಹಾಗಾದರೆ ನಾನು ಈ ವಿಚಾರಲ್ಲಿ ನನ್ನ ಯೋಚನೆಯನ್ನು ನೂರಕ್ಕೆ ನೂರು ಬದಲಿಸಿಕೊಂಡೆನೇ? ಎಂದು ಕೇಳಿದರೆ ಉತ್ತರ ಗೊತ್ತಿಲ್ಲ, ಅಥವಾ ಇಲ್ಲವೆನ್ನಿಸುತ್ತದೆ.
ಓದುವ ಸುಖ ಅಂಕಣದಲ್ಲಿ ವಸುಧೇಂದ್ರರ “ಮೋಹನಸ್ವಾಮಿ” ಕೃತಿಯ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ರಾಜಕೀಯ ಹಾದಿಯಲ್ಲಿ ಕಂಡ ಪ್ರಾಮಾಣಿಕ ನುಡಿಗಳು

ಬಿ.ಎ. ಮೊಹಿದೀನ್ ಅವರು ಜೀವನದಲ್ಲಿ ಇಟ್ಟುಕೊಂಡ ಮೌಲ್ಯಗಳು ಅನುಕರಣೀಯವಾದುದು. ತಾನು ಚುನಾವಣೆಗೆ ನಿಂತಾಗ ಮಸೀದಿ ದೇವಾಲಯ ಚರ್ಚುಗಳಿಗೆ ಮತಕೇಳಲು ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಅದನ್ನು ಹಟಬಿಡದೇ ಪಾಲಿಸಿದವರು ಅವರು. ತಾವು ಹುಟ್ಟಿಬಂದ ಸಮುದಾಯದ ಏಳಿಗೆಗಾಗಿ ಮೊಹಿದೀನ್ ಅವರಿಗಿದ್ದ ಕಾಳಜಿ ಪ್ರಶ್ನಾತೀತವಾದುದು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಅಧಿಕಾರವೆಂಬ ಮುಳ್ಳಿನ ಹಾದಿಯಲ್ಲಿ..

ಡಾ. ವೈ.ವಿ.  ಅವರು ತೆಲುಗಿನಲ್ಲಿ ಬರೆದ  ‘ನಾ ಜ್ಞಾಪಕಾಲು’ ಅನ್ನುವ ಆತ್ಮಕಥೆಯಲ್ಲಿ ತಮ್ಮ ಜೀವನದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದ ಪುಸ್ತಕವು, ದೇಶದ ಆರ್ಥಿಕತೆಯ ಬಗೆಗಿನ ಸಂಕೀರ್ಣ ವಿಷಯಗಳನ್ನು ಒಳಗೊಂಡಿದೆ. ಇವೆರಡನ್ನು ಒಟ್ಟುಗೂಡಿಸಿ, ಹಣಕಾಸು ವಿಷಯದಲ್ಲಿ ಜ್ಞಾನ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸುವುದು ಖಂಡಿತವಾಗಿಯೂ ಸುಲಭದ ವಿಷಯವಲ್ಲ. ಎಂ.ಎಸ್. ಶ್ರೀರಾಮ್ ಈ ಕೆಲಸವನ್ನುಯಶಸ್ವಿಯಾಗಿ ಮಾಡಿದ್ದಾರೆ.  ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ