Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ'  (ಸಣ್ಣಕಥಾ ಸಂಕಲನ) ‘ಪರ್ಯಾಪ್ತ’ ಪ್ರಕಟಿತ ಕಥಾ ಸಂಕಲನಗಳು.

ನಾಲ್ಕು ರಾಜ್ಯಗಳ ಏಳಿಗೆಯ ಅವಲೋಕನ

ಕೃತಿಯು ಮುಖ್ಯವಾಗಿ ಶಿಕ್ಷಣ ಮತ್ತು ಆರೋಗ್ಯ ಸೂಚ್ಯಂಕಗಳನ್ನು ಆದರ್ಶವಾಗಿರಿಸಿಕೊಂಡು ಕಳೆದ ನೂರು ವರ್ಷಗಳಿಂದ ಆದ ಬದಲಾವಣೆಗಳ ಬಗ್ಗೆ ಅಧ್ಯಯನ ನಡೆಸಲಾಗಿದೆ. ನೂರು ವರ್ಷಗಳ ಮುಂಚೆ ಪರಿಗಣನೆಗೆ ತೆಗೆದುಕೊಂಡ ನಾಲ್ಕೂ ರಾಜ್ಯಗಳು ಹೆಚ್ಚುಕಮ್ಮಿ ಒಂದೇ ಪರಿಸ್ಥಿತಿಯಲ್ಲಿದ್ದವು. ಆದರೆ ಉಪರಾಷ್ಟ್ರೀಯತೆಯ ಪ್ರಜ್ಞೆ ಬೆಳೆಸಿಕೊಂಡ ತಮಿಳುನಾಡು ಮತ್ತು ಕೇರಳ ಪ್ರಗತಿ ಹೊಂದಿದರೆ ಆ ಪ್ರಜ್ಞೆ ಬೆಳೆಸಿಕೊಳ್ಳಲು ವಿಫಲವಾದ ರಾಜ್ಯಗಳು ಹೇಗೆ ಹಿಂದುಳಿದಿವೆ ಅನ್ನುವುದನ್ನು ವಿವರಿಸಲಾಗಿದೆ.

Read More

ಸಾಸಿವೆ ತಂದವಳ ಅಕ್ಷರಗಳಲ್ಲಿ ಕಂಡ ಜೀವಚೈತನ್ಯ

ನೋವಿನಲ್ಲೂ ನಗುವನ್ನು ಹುಡುಕುವ, ಅಷ್ಟು ಯಾತನಾಮಯವಾದ ಬರಹಗಳನ್ನು ಬರೆಯುವಾಗಲೂ ನಮ್ಮನ್ನು ನಗಿಸಲು ಪ್ರಯತ್ನಿಸುವ ಅವರ ಬರಹಗಳ ಮೆಚ್ಚಲೇಬೇಕು. ಇದು ಅವರ ಯಾತನಾಮಯವಾದ ಒಂದು ವರ್ಷದ ವಿವರಣೆ ಮಾತ್ರವಲ್ಲ. ಹೇಗೆ ಅವರು ಅದನ್ನು ಎದುರಿಸಿ ಎದ್ದು‌ನಿಂತರು, ಹೇಗೆ ಮನೋಬಲ ಬೆಳೆಸಿಕೊಂಡರು, ನಂತರ ಹೆದರಿ ಮನೆಯಲ್ಲಿ ಕೂರದೇ, ತಮ್ಮ ವೃತ್ತಿಗೆ ತೆರೆದುಕೊಂಡರು, ಬರೆಯಲಾರದಷ್ಟು ನಿಶ್ಯಕ್ತಿಯಿದ್ದರೂ ಕತೆ ಕವನಗಳ ಬರೆದರು, ತಮ್ಮ ಹವ್ಯಾಸಗಳನ್ನು ಕೂಡಾ…

Read More

ಡೈರಿ ಆಫ್‌ ಅ ವಿಂಪಿ ಕಿಡ್ : ನಮ್ಮಂತೆಯೇ ಅವರು, ಅವರಂತೆಯೇ ನಾವು

ಅವನು ಒಂದು ದಿನ ಹೀಗೆ ಯೋಚಿಸುತ್ತಾನೆ: ತಾನು ಮಂದೆ ದೊಡ್ಡವನಾದಮೇಲೆ ಬಹಳ ಪ್ರಸಿದ್ಧ ವ್ಯಕ್ತಿಯಾದರೆ ಹೇಗಿರಬಹುದು, ಜನರೆಲ್ಲಾ ತನ್ನನ್ನು ಗುರುತಿಸುತ್ತಾರೆ, ಎಲ್ಲರಿಗೂ ತಾನೆಂದರೆ ಯಾರು ಅಂತ ತಿಳಿದಿರುತ್ತದೆ. ಹಾಗೆ ತನ್ನ ಹುಟ್ಟಿದ ಹಬ್ಬದಂದು ರಜಾ ದಿನ ಕೂಡಾ ಘೋಷಣೆಯಾಗಬಹುದು. ಅದು ಸಂತಸದ ವಿಷಯವೇ ಆದರೂ ಕೆಲವು ತನಗೆ ಮುಜುಗರ ತರಿಸಬಹುದು. ಉದಾಹರಣೆಗೆ – ‘ಗ್ರೆಗ್ ದಿನದ ಮೆಗಾ ಸೇಲ್. ಕಾಚಾ ಬನಿಯನ್ ಮೇಲೆ ಎಷ್ಟೋ ಪ್ರತಿಶತ ಕಡಿತ’ ಅನ್ನೋ ತರಹದ ಜಾಹಿರಾತುಗಳು ಬಂದು ತನ್ನ ಹುಟ್ಟುಹಬ್ಬಕ್ಕೆ ಬೆಲೆಯೇ ಇರದ ಸನ್ನಿವೇಶ ಬರಬಹುದು ಎಂದೂ ಚಿಂತಿಸುತ್ತಾನೆ.
‘ಓದುವ ಸುಖ’ ಅಂಕಣದಲ್ಲಿ “ಡೈರಿ ಆಫ್‌ ಅ ವಿಂಪಿ ಕಿಡ್ಸ್‌” ಸರಣಿಯ ಕುರಿತು ಗಿರಿಧರ್ ಗುಂಜಗೋಡು ಬರಹ

Read More

ನನಗೆ ಜಗತ್ತನ್ನು ಪರಿಚಯಿಸಿದ ಮಿಲೇನಿಯಂ ಸರಣಿ

ಆ ಸಮಯದಲ್ಲಿ ನನ್ನ ತರ್ಕ ಬಹಳ ಸರಳವಾಗಿತ್ತು. ಯಾರ್ಯಾರು ಮಕ್ಕಳ ಕಥೆ ಬರೆಯುತ್ತಾರೋ, ನನಗೆ ಅರ್ಥವಾಗುವಂತಹ ಪರಿಸರ, ವಿಜ್ಞಾನ ಇತ್ಯಾದಿ ವಿಷಯಗಳ ಬಗ್ಗೆ ಸರಳವಾಗಿ ಬರೆಯುತ್ತಾರೋ ಅವರೆಲ್ಲಾ ಚಿಕ್ಕ ಲೇಖಕರು. ಯಾರ ಬರಹಗಳು ಅರ್ಥವಾಗುವುದಿಲ್ಲವೋ, ಒಂದು ಪ್ಯಾರಾಕ್ಕಿಂತಲೂ ಜಾಸ್ತಿ ಓದಿಸಿಕೊಂಡು ಹೋಗುವುದಿಲ್ಲವೋ ಅವರೆಲ್ಲಾ ದೊಡ್ಡ ಲೇಖಕರು ಅನ್ನೋ ನಂಬಿಕೆಯಲ್ಲಿದ್ದೆ. ಆದರೆ ತೇಜಸ್ವಿಯವರ ಬರಹಗಳು ಈ ನಂಬಿಕೆಯನ್ನು ಸಡಿಲಗೊಳಿಸಿದವು.

Read More

ಓದುವ ಸುಖ: ಗಿರಿಧರ್‌ ಗುಂಜಗೋಡ್‌ ಹೊಸ ಅಂಕಣ ಆರಂಭ

‘ದೇಶ ಸುತ್ತು ಕೋಶ ಓದು’ ಎಂಬುದು ಹಿರಿಯರ ನಾಣ್ಣುಡಿ. ನಾಣ್ಣುಡಿ ಎಂದಮೇಲೆ ಅದೆಂದೂ ಸುಳ್ಳಾಗುವ ಮಾತಿಲ್ಲವಲ್ಲ. ಓದಿನ ಬಲವು ಸುತ್ತಾಟವನ್ನು ಇನ್ನಷ್ಟು ಆಪ್ತವಾಗಿಸುತ್ತದೆ. ಸುತ್ತಾಟದ ಅನುಭವವು ಓದಿಗೆ  ಮತ್ತಷ್ಟು ಪ್ರೇರಣೆ ನೀಡುತ್ತದೆ. ಹೀಗೆ ಪರಸ್ಪರ ಪೂರಕವಾಗಿರುವ ಇವು ಒಟ್ಟಾಗಿ ಮನುಷ್ಯನ ವ್ಯಕ್ತಿತ್ವವನ್ನು ವಿಕಾಸಗೊಳಿಸುತ್ತವೆ. ಓದು ಮತ್ತು ಪ್ರವಾಸವನ್ನು ಏಕಕಾಲಕ್ಕೇ ಇಷ್ಟಪಡುವ ಗಿರಿಧರ್ ಗುಂಜಗೋಡು, ತಮ್ಮ ಓದಿನ ಹಿನ್ನೆಲೆಯನ್ನಿಟ್ಟುಕೊಂಡು ಬರಹಗಳನ್ನು ಬರೆಯಲಿದ್ದಾರೆ.  ಪುಸ್ತಕಗಳ ಓದಿನ  ಹೂರಣಕ್ಕಷ್ಟೇ ಸೀಮಿತವಾಗದೇ ವಿಸ್ತಾರವಾದ ಹರವಿನೊಂದಿಗೆ ಅವರು ಬರೆಯುವ…

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ