Advertisement

ಡಾ. ಎಸ್‌. ವಿ. ನರಸಿಂಹನ್

ಹಳ್ಳಿಯ ಸಹವಾಸವೇ ಬೇಡ…!

ಕಾರ್ಪೊರೇಟ್ ಜಗತ್ತಿನಲ್ಲಿ ನಡೆಯುವ ರಾಜಕೀಯಗಳಿಂದ ರೋಸಿ ಹೋಗಿ ಕೆಲಸ ಬಿಟ್ಟು ಬಂದು ಹಳ್ಳಿಯಲ್ಲಿ ನೆಮ್ಮದಿ ಕಾಣಬೇಕು ಅಂದರೆ ಇಲ್ಲಿ ಇನ್ನೂ ಹದಗೆಟ್ಟ ಪರಿಸ್ಥಿತಿ ಇದೆ ಅನಿಸಿತು. ಸುಳ್ಳುಗಳು, ಜಾತಿ, ಕಳುವು ಇನ್ನೂ ಏನೇನು ನೋಡೋದು ಇದೆಯೋ ಇಲ್ಲಿ ಅನಿಸಿತು. ಅತ್ತೆ ಮಾವ ನಮ್ಮ ಸಂಬಂಧಿಯೇ ಆಗಿದ್ದರೂ ಅವರು ನಮ್ಮ ಪರವಾಗಿ ನಿಲ್ಲಲಾರರು ಎಂಬ ಕಟು ಸತ್ಯದ ಅರಿವು ಆಗಿತ್ತು. ಎಷ್ಟೇ ಅಂದರೂ ಅಲ್ಲಿನ ಜನರ ಜೊತೆಗೆ ಬದುಕುವ ಅವರು, ಎಲ್ಲಿಂದಲೋ ಬಂದ ಯಾವಾಗಲೋ ಒಮ್ಮೆ ಬಂದು ಹೋಗುವ ನನ್ನ ಪರವಾಗಿ ಹೇಗೆ ತಾನೇ ನಿಂತಾರು?
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 18ನೇ ಕಂತು

Read More

ಇದ್ದ ಮೂವರಲ್ಲಿ ಕದ್ದವರು ಯಾರು?

ಹಿಂದೊಮ್ಮೆ ಹುಸೇನ್ ಸಾಬ್‌ಗೆ ಹೊಲ ಮಾಡಲು ಕೊಟ್ಟಾಗ ಸುತ್ತಲೂ ಒಂದೈವತ್ತು ಅಪ್ಪೆ ಮಿಡಿ ಗಿಡಗಳನ್ನು ನೆಟ್ಟಿದ್ದೆ. ಸ್ವಲ್ಪ ಬೆಳೆದಾದ ಮೇಲೆ ಪೂರ್ತಿ ಗಿಡಗಳನ್ನು ಬೆಂಕಿ ಹಚ್ಚಿ ಇಲ್ಲದಂತೆ ಮಾಡಿದ್ದರು. ಬೆಂಕಿ ಹಚ್ಚಿದ್ದು ಯಾರು ಅಂತ ಕೊನೆಗೂ ಗೊತ್ತಾಗಲಿಲ್ಲ. ಒಬ್ಬರ ಮೇಲೆ ಒಬ್ಬರು ಹಾಕಿ ನನ್ನನ್ನು ಮಂಗ ಮಾಡಿದ್ದರು! ಇಲ್ಲಿನವರೆ ಕಳ್ಳರು, ಆ ಜಾತಿಯವರನ್ನು ನಂಬಬಾರದು ಅಂತೆಲ್ಲ ಹೇಳೋದೆಲ್ಲ ತಪ್ಪು. ಕಳ್ಳರದೇ ಒಂದು ಪ್ರತ್ಯೇಕ ಜಾತಿ! ಏನಾಗುತ್ತೋ ನೋಡೋಣ ಅಂತ ಸುಮ್ಮನಾದೆ. ಆದರೂ ಮುಂದೊಮ್ಮೆ ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಬೇಕು ಅಂತ ನಿರ್ಧರಿಸಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣದ 17ನೇ ಕಂತು

Read More

ಕಳೆ ಕತ್ತರಿಸುವ ಯಂತ್ರ ಎಂಬ ಅದ್ಭುತ ಸಾಧನ

ನನ್ನ ಕಾರ್‌ನಲ್ಲಿ ಹಿಂದಿನ ಸೀಟು ಖಾಲಿ ಇತ್ತು. ಹಾಗೆಯೇ ಹೋಗುತ್ತಾ ನಾಲ್ಕು ಹುಡುಗರಿಗೆ ಶಾಲೆಯವರೆಗೆ ಲಿಫ್ಟ್ ಕೊಡೋಣ ಅನಿಸಿತು. ಒಂದು ಹುಡುಗರ ಗುಂಪಿನ ಪಕ್ಕ ಗಕ್ಕಂತ ನಿಲ್ಲಿಸಿದೆ. ನಾನು ಏನೋ ಹೇಳುವಷ್ಟರಲ್ಲಿ ಒಬ್ಬ ಹುಡುಗ ಹಿಂದೆ ಓಡಲು ಶುರು ಮಾಡಿದ. ಅವನ ಜೊತೆಗೆ ಉಳಿದ ಹುಡುಗರೂ ಓಡತೊಡಗಿದರು! ಅಯ್ಯೊ ದೇವ್ರೆ ನನ್ನನ್ನ ಕಿಡ್ನ್ಯಾಪರ್‌ ಅಂದುಕೊಂಡರೋ ಏನೋ!? ಉಪಕಾರ ಮಾಡೋದು ಬೇಡವೇ ಬೇಡ ಅಂತ ನಾನು ಮುಂದೆ ಹೊರಟೆ. ನನ್ನ ಮುಖವನ್ನು ಕಾರಿನ ಕನ್ನಡಿಯಲ್ಲಿ ನೋಡಿಕೊಂಡೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ