Advertisement

ಡಾ. ಎಸ್‌. ವಿ. ನರಸಿಂಹನ್

ರೈತನ ಮಿತ್ರ ಎರೆಹುಳು ಆದರೆ ಅದರ ವೈರಿ…?

ಮಾನವನ ಪ್ರಕೃತಿಯ ಮೇಲಿನ ದಬ್ಬಾಳಿಕೆಗೆ ಇದೊಂದು ಸಣ್ಣ ಉದಾಹರಣೆ ಅಷ್ಟೆ. ಟ್ರಾಕ್ಟರ್‌ನಂತಹ ಯಂತ್ರ ಎಲ್ಲರಂತೆಯೇ ಜೀವಿಸುವ ಹಕ್ಕಿರುವ ಹಾವಿನ ಜೀವಕ್ಕೆ ಕುತ್ತು ತಂದಿತ್ತು. ಹಾವು ಕಣ್ಣಿಗೆ ಕಾಣುವ ಜೀವ. ಇನ್ನೂ ಸೂಕ್ಷ್ಮವಾಗಿರುವ ಕಣ್ಣಿಗೆ ಕಾಣದ ಎಷ್ಟೋ ಜೀವಗಳು ಮಣ್ಣಿನಲ್ಲಿ ಬೆರೆತು ವಾಸ ಮಾಡುತ್ತವೆ. ಅವುಗಳನ್ನೆಲ್ಲ ಬುಡಮೇಲು ಮಾಡಿ ಕತ್ತರಿಸಿ ಹಾಕಲು ನಮಗೆ ಹಕ್ಕಿದೆಯೆ? ಅಲ್ಲೊಂದು ನಮಗರಿವಿಲ್ಲದೆ ಉಸಿರಾಡುತ್ತಿರುವ ಜಗತ್ತು ಇದೆ. ಅವುಗಳಿಂದ ನಮ್ಮ ಗಿಡ ಮರಗಳಿಗೆ ಪೋಷಣೆಯೂ ನಿರಂತರವಾಗಿ ಸಿಗುತ್ತಿದೆ.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಸರಿರಾತ್ರಿಯಲಿ.. ಹುಳ ಹುಪ್ಪಟೆಗಳ ಸಂಗದಲಿ…

ಮನೆಗೆ ಒಂದು ಗಂಡು ಬೇಕು ಅನ್ನುವ ಮೋಹ ಜನರಿಗೆ ಇನ್ನೂ ಕಡಿಮೆಯಾಗಿಲ್ಲ. ವಯಸ್ಸಾದ ಮೇಲೆ ನೋಡಿಕೊಳ್ಳುತ್ತಾರೆ ಎಂಬ ಭ್ರಮೆ ಹಳ್ಳಿಯಲ್ಲಿ ಇನ್ನೂ ಇದೆ. ಎಷ್ಟೋ ವಯಸ್ಸಾದವರನ್ನು ಒಂದೋ ಹೊರ ಹಾಕಿದ್ದಾರೆ ಇಲ್ಲವೇ ಮಕ್ಕಳೇ ಹಳ್ಳಿ ಬಿಟ್ಟು ದೂರ ಇದ್ದಾರೆ. ಇದು ಗಂಡು ಹಡೆದವರ ಭಾಗ್ಯ! ಹಾಗಂತ ಎಲ್ಲ ಗಂಡು ಮಕ್ಕಳು ಹಾಗಿಲ್ಲ ಬಿಡಿ. ಹೆಣ್ಣು ಕರುಳಿನ ಗಂಡು ಹುಡುಗರು ಇನ್ನೂ ಇರುವುದಕ್ಕೆ ಮಳೆ ಬೆಳೆ ಆಗುತ್ತಿರುವುದು!
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಕೃಷಿಯ ಖುಷಿ ಬಲ್ಲವರೇ ಬಲ್ಲರು…

ಬೆಂಗಳೂರಿನಲ್ಲಿ ಇನ್ನೂ ಕೆಲಸದಲ್ಲಿದ್ದ ಅವರಿಗೆ ಕೃಷಿಯ ಹುಚ್ಚು. ಅವರಿಗೆ ಮನೆಯಲ್ಲಿ ಹೊಲ ಇದ್ದರೂ ಕೂಡ ಮಾಡಲಾಗದ ಪರಿಸ್ಥಿತಿ. ಅವರ ತಂದೆ ಹೊಲ ಮಾಡಲು ಕೊಡುತ್ತಿರಲಿಲ್ಲ. ಬೆಂಗಳೂರಿನಲ್ಲಿ ಆರಾಮಾಗಿ ಇರು, ನಮ್ಮ ಹಾಗೆ ಯಾಕೆ ಕಷ್ಟ ಪಡುತ್ತೀಯ ಎಂಬುದು ಒಂದು ಕಾರಣವಾದರೆ, ಅವರಿಗೆ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದರು ಅನ್ನುವುದು ಇನ್ನೊಂದು ಬಲವಾದ ಕಾರಣ! ಕೃಷಿಕ ಅಂತ ಗೊತ್ತಾದರೆ ಅವರ ಮದುವೆ ಆಗಲು ಸಾಧ್ಯವೇ ಇರಲಿಲ್ಲ! ಅರೆ ಯಕಶ್ಚಿತ ಒಬ್ಬ ರೈತನನ್ನು ಮದುವೆಯಾಗಲು ಹುಡುಗಿಯರಿಗೇನು ಹುಚ್ಚೆ?!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ