Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಸಾವೇ ಇಲ್ಲದ ಗಿಡ ಮತ್ತು ಹ್ಯುಮಸ್ಸು

ಆ ಮಣ್ಣಿನ ದಾರಿಯ ಆಚೀಚೆ ಬೇರೆಯವರ ಹೊಲಗಳು ಇವೆ. ಎಲ್ಲರೂ ಸಣ್ಣ ಸಣ್ಣ ಹಿಡುವಳಿದಾರರು. ಅಲ್ಲಿರ್ಪ ಗುತ್ತೆಪ್ಪ, ದುರ್ಗಪ್ಪ, ಬಸಪ್ಪ, ಮಾಲತೇಶ ಹೀಗೇ ಒಬ್ಬೊಬ್ಬರೇ ಕ್ರಮೇಣ ಪರಿಚಯವಾದರು. ನಡೆದುಕೊಂಡು ಹೋದರೆ ಇದೊಂದು ಲಾಭ ಅಲ್ಲವೇ? ಅಲ್ಲಿನ ಬಹಳಷ್ಟು ರೈತರು ಬೆಳೆಯುವ ಬೆಳೆಗಳು ಒಂದೋ ಭತ್ತ, ಮುಸುಕಿನ ಜೋಳ ಇಲ್ಲವೆ ಶುಂಠಿ. ಅಡಿಕೆಗೆ ಬೆಲೆ ಬರುತ್ತಿದೆ ಅಂತ ಕೆಲವರು ಇತ್ತೀಚಿಗೆ ತಮ್ಮ ಗದ್ದೆಯನ್ನು ತೋಟವನ್ನಾಗಿ ಮಾಡುತ್ತಿದ್ದರು. ಆದರೆ ಯಾರೂ ಕೂಡ ಅಲ್ಲಿ ಸಮಗ್ರ ಕೃಷಿ ಮಾಡಿರಲಿಲ್ಲ. ಎಲ್ಲರದೂ ಒಂದೇ ಬೆಳೆ. ಬೆಲೆ ಬಂದರೆ ಲಾಟರಿ ಇಲ್ಲವಾದರೆ ದೇವರೇ ಗತಿ ರೀ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಓದಿ ತಿಳಿ ಗಿಡವ ನೆಟ್ಟು ಕಲಿ

ಮಣ್ಣು ನಿರ್ಜೀವ ವಸ್ತು ಅಲ್ಲ ಅದು ಜೀವಂತ! ಅದರಲ್ಲಿ ಎಷ್ಟೋ ಕ್ರಿಮಿ ಕೀಟಗಳು, ಶಿಲೀಂದ್ರಗಳು, ಬಹುಮುಖ್ಯವಾಗಿ ಎರೆ ಹುಳುಗಳು ಇವೆಲ್ಲ ಇರಲೇಬೇಕು, ಅವುಗಳನ್ನು ಹೇಗೆ ಹೆಚ್ಚಿಸಬೇಕು, ಮಣ್ಣಿಗೆ ಹೊದಿಕೆ ಹೇಗೆ ಮಾಡಬೇಕು, ಸಸ್ಯಗಳನ್ನು ಸಹಜವಾಗಿ ಹೇಗೆ ಪೋಷಿಸಬೇಕು ಎಂಬೆಲ್ಲ ಹೊಸ ಹೊಸ ವಿಷಯಗಳ ಅರಿವು ನನಗೆ ಈ ಮಹಾನುಭಾವರು ಬರೆದ ಪುಸ್ತಕಗಳ ಮೂಲಕ ತಿಳಿದಿತ್ತು. ಇನ್ನೂ ಹಲವಾರು ಟಿಪ್ಪಣಿ ಮಾಡಿಟ್ಟುಕೊಂಡ ನನ್ನ ಹೊತ್ತಿಗೆಗಳು ಬೃಹದಾಕಾರವಾಗಿ ಬೆಳೆದಿದ್ದವು. ಈಗ ಗಿಡಗಳನ್ನು ಬೆಳೆಯುವ ಸಮಯ ಬಂದಿತ್ತು! ಇದು ಹೊಸದಾಗಿ ರೈತರಾಗುವವರಿಗೆ ಎದುರಾಗುವ ಸಮಸ್ಯೆ. ಸಿಕ್ಕಾಪಟ್ಟೆ ಮಾಹಿತಿಗಳ ಕೇಳಿ ತಬ್ಬಿಬ್ಬಾಗಿ ಬಿಡುತ್ತಾರೆ.  ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಅಂಕಣ “ಗ್ರಾಮ ಡ್ರಾಮಾಯಣ”

Read More

ಹಾವು ಬಾವಲಿಗಳ ಸ್ನೇಹಕ್ಕೆ ಕಾಯುತ್ತ

ತೋಟದ ಮನೆಯಲ್ಲಿ ಎಲ್ಲವೂ ಆಹ್ಲಾದಕರವಾಗಿರಲಿಲ್ಲ! ಹಲವಾರು ಹೆದರಿಕೆ ಬರುವ ಸಂಗತಿಗಳೂ ಇದ್ದವು. ಬಯಲುಸೀಮೆಯಲ್ಲಿ ಹುಟ್ಟಿ ಬೆಳೆದಿದ್ದ ನನಗೆ ತುಂಬಾ ಪರಿಚಿತ ಪ್ರಾಣಿಗಳೆಂದರೆ ಮಂಗಗಳು. ನಮ್ಮ ಮೂಲವಾದ ಕುರ್ತಕೋಟಿ, ಕೆಂಪು ಮಂಗಗಳಿಗೆ ಎಷ್ಟು ಪ್ರಸಿದ್ಧ ಅಂದ್ರೆ ಅವಕ್ಕೆ “ಕುರ್ತಕೋಟಿ ಮಂಗ್ಯ” ಅಂತಲೇ ಬ್ರಾಂಡು. ಅದರ ಜೊತೆಗೆ ಹಾವುಗಳನ್ನು ಬಾಲ್ಯದಲ್ಲಿ ಲಕ್ಷ್ಮೇಶ್ವರದಲ್ಲಿದ್ದಾಗ ಆಗೀಗ ನೋಡಿದ್ದೆನಾದರೂ ಅವುಗಳ ಬಗ್ಗೆ ಭಯವಂತೂ ಇದ್ದೆ ಇತ್ತು. ಗುರುಪ್ರಸಾದ ಕುರ್ತಕೋಟಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ