ಮಿಸ್ಟರ್ ಇಡ್ಲಿಯ ಮನಸಿನ ಮಾತು… : ಗುರುರಾಜ ಕುಲಕರ್ಣಿ ಪ್ರಬಂಧ
ಒಂದು ಕಾಲ್ಪನಿಕ ಸಂದರ್ಭದಲ್ಲಿ ಜಗತ್ತಿನ ಎಲ್ಲರೂ ಅಳಿದು, ಒಬ್ಬನೇ ಮನುಷ್ಯನು ಉಳಿದನೆಂದು ಕಲ್ಪಿಸಿಕೊಳ್ಳಿ. ಅವನಿಗೆ ‘ಸರಳ ತಿನಿಸಾದ’ ಇಡ್ಲಿಯನ್ನು ತಯಾರಿಸಲು ಸಾಧ್ಯವಾಗುತ್ತದೆಯಾ? ಊಹೂಂ.. ಇಲ್ಲ. ಯಾಕೆಂದರೆ ನನ್ನ ತಯಾರಿಕೆಯ ಪೂರ್ಣ ಚಿತ್ರಣ ಒಬ್ಬನಿಗೂ ಪೂರ್ತಿಯಾಗಿ ತಿಳಿದಿಲ್ಲ. ಎಲ್ಲರಿಗೂ ತಮ್ಮ ಭಾಗ ಮಾತ್ರ ಗೊತ್ತು.. ರೈತನಿಗೆ ಇಡ್ಲಿ ತಟ್ಟೆಯ ತಯಾರಿಕೆ ತಿಳಿದಿಲ್ಲ, ಗಣಿಗಾರನಿಗೆ ಸಾಂಬಾರಿನ ಮಸಾಲೆಯ ಕತೆ ಗೊತ್ತಿಲ್ಲ, ಇಂಧನ ಒದಗಿಸಿದವನಿಗೆ ಹುಳಿಯಾಗುವಿಕೆಯ ವಿಜ್ಞಾನ ತಿಳಿದಿಲ್ಲ. ಕೆಲವರಿಗೆ ಇಡ್ಲಿಯೆಂದರೆ ಏನೆಂದೇ ಗೊತ್ತಿಲ್ಲ! ಈ ಜನರು ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಾರೆ, ವಿಭಿನ್ನ ಭಾಷೆಗಳನ್ನು ಮಾತನಾಡುತ್ತಾರೆ, ವಿಭಿನ್ನ ಧರ್ಮಗಳನ್ನು ಪಾಲಿಸುತ್ತಾರೆ.
ಗುರುರಾಜ್ ಕೆ. ಕುಲಕರ್ಣಿ ಪ್ರಬಂಧ ನಿಮ್ಮ ಓದಿಗೆ
