Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಹೊಸ ಹಾದಿ ಹಿಡಿದ ಬರವಣಿಗೆ…: ಎಚ್. ಗೋಪಾಲಕೃಷ್ಣ  ಸರಣಿ

ಗೆಳೆಯರ ಪರಿಚಯದ ಮೊದಲನೇ ಭೇಟಿಯಲ್ಲೇ ಅವರು ಒಬ್ಬ ಬರಹಗಾರರು ಎಂದು ತಿಳಿಯಿತು. ಆಗಲೇ ಸುಮಾರು ಕತೆಗಳು ಮತ್ತು ಹಾಸ್ಯ ಲೇಖನ ಬರೆದಿದ್ದರು. ಸುದ್ದಿ ಹಾಗೇ ನನ್ನ ಬರವಣಿಗೆಯತ್ತ ತಿರುಗಿತು. ಒಂದೋ ಎರಡೋ ಕತೆ ಬರೆದಿರುವ ಸಂಗತಿಯನ್ನು ಕೊಂಚ ನಾಚಿಕೆಯಿಂದ ಹೇಳಿಕೊಂಡೆ. ಬರಹಗಾರರಿಗೆ ಮುಖೇಡಿತನ ಹೆಚ್ಚಾಗಿಯೇ ಇರುತ್ತದೆ ಎನ್ನುವುದು ಅನುಭವವಾಗಿತ್ತು. ಮತ್ತು ನನಗಂತೂ ಈಗಲೂ ಅದು ಮೆದುಳಿನ ಮೇಲಿನ ಸ್ತರದಲ್ಲಿ ಅಂಟಿಕೊಂಡು ಬಿಟ್ಟಿದೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೩ನೇ ಬರಹ ನಿಮ್ಮ ಓದಿಗೆ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಅರ್ಧ ಕತೆಯೇ ಪ್ರಕಟಗೊಂಡಿತ್ತು: ಎಚ್. ಗೋಪಾಲಕೃಷ್ಣ ಸರಣಿ

ಆ ಗುಂಪಿನ ತಮಿಳರನ್ನು ನೋಡಿ ಕೆಲವು ಸಲ ಹೊಟ್ಟೆ ಉರಿಯೋದು. ಆ ಭಾಷೆಯಲ್ಲಿ ಬರುವ ಎಲ್ಲಾ ಪತ್ರಿಕೆಗಳನ್ನು ತರಿಸೋರು ಮತ್ತು ಹತ್ತು ಹದಿನೈದು ಜನ ಗ್ರೂಪ್ ಮಾಡಿಕೊಂಡು ಅದರ ಖರ್ಚು ಶೇರ್ ಮಾಡುತ್ತಿದ್ದರು. ಇನ್ನೂ ವಿಶೇಷ ಅಂದರೆ ಡಿ ಎಂ ಕೆ ಅವರು ತರಿಸುತ್ತಿದ್ದ ಪತ್ರಿಕೆ ಡಿ ಎಂ ಕೆ ವಿರೋಧಿಗಳು ತರಿಸುತ್ತಾ ಇರಲಿಲ್ಲ. ಅವರು ಇವರು ಪರಸ್ಪರ ಮಾತು ಕತೆ ಸಹ ಇಲ್ಲ! ಕೆಲವು ಸಲ ಇದೇ ವಿಷಯವಾಗಿ ತಮಿಳಿನಲ್ಲಿ ಜೋರು ಜೋರು ಮಾತುಕತೆ ಜಗಳ ಆಗುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೧ನೇ ಬರಹ ನಿಮ್ಮ ಓದಿಗೆ

Read More

ಹೊಸ ಮನೆ… ಹೊಸ ಏರಿಯಾ.. ಹೊಸ ಸಮಸ್ಯೆಗಳು…: ಎಚ್. ಗೋಪಾಲಕೃಷ್ಣ ಸರಣಿ

ಅವತ್ತು ಜೋರು ಮಳೆ. ಮಳೆ ಬಂದು ನಿಂತ ನಂತರ ನಮ್ಮ ಸೈಕಲ್ ಜಾಥಾ ಶುರು ಆಯಿತು. ರಾಮಚಂದ್ರಪುರದ ಕಿರು ರಸ್ತೆಗೆ ಬಂದೆವು. ಕತ್ತಲಿನಲ್ಲಿ ಒಬ್ಬ ಮಧ್ಯ ವಯಸ್ಕರು ಕೈಯಲ್ಲಿ ಒಂದು ಟಾರ್ಚ್ ಹಿಡಿದು ನಿಂತಿದ್ದರು. ಸ್ವಾಮೀ ನಿಲ್ಲಿ, ನಿಲ್ಲಿ ಸಾರ್ ಅಂತ ನಮ್ಮನ್ನು ತಡೆದರು. ಎಲೆಕ್ಟ್ರಿಕ್ ವೈರ್ ರಸ್ತೆ ಮೇಲೆ ಅಲ್ಲೆಲ್ಲಾ ಬಿದ್ದು ಕರೆಂಟ್ ಹರಿತಾ ಇದೆ. ಈ ರೋಡಿನಲ್ಲಿ ಹೋಗಬೇಡಿ ಅಂತ ಹೇಳಿ ಎಂ ಎಸ್ ಪಾಳ್ಯದ ಮೂಲಕ ಹೋಗಿ ಅಂತ ಸೂಚಿಸಿದರು. ಇದು ನಾಲ್ಕು ಕಿಮೀ ಹೆಚ್ಚು ದೂರ. ಆದರೂ ಜೀವ ನಮ್ಮದು ತಾನೇ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೦ನೇ ಬರಹ ನಿಮ್ಮ ಓದಿಗೆ

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ