Advertisement

ಕ್ಷಮಾ ವಿ. ಭಾನುಪ್ರಕಾಶ್

“ಮಿಡಲ್”‌ ನಾಮದವನಾದ ನಾನು…: ಎಚ್. ಗೋಪಾಲಕೃಷ್ಣ ಸರಣಿ

ಈ ಮಿಡಲ್ ಬಂದ ಒಂದು ತಿಂಗಳಲ್ಲಿ ಅಂತ ಕಾಣ್ಸುತ್ತೆ ಹೆಗಡೆ ಸಾಹೇಬರು ಎಲ್ಲೋ ಭಾಷಣ ಮಾಡುತ್ತಾ ಶೇಖಡಾ ಹತ್ತರಷ್ಟು ಉಳಿಸಿ ಸರ್ಕಾರದಲ್ಲಿ ಇಡಿ ಅಂತ ಹೇಳಿದರೆ ಜನ ತಮಾಷೆ ಮಾಡ್ತಾರೆ ಅಂತ ಹೇಳಿದ್ದರು. ಸರ್ಕಾರದ ವರಿಷ್ಠರು ಸಹಾ ಈ ಮಿಡಲ್‌ಗಳನ್ನೂ ಆಸಕ್ತಿಯಿಂದ ಓದುತ್ತಾರೆ ಅಂತ ಗೊತ್ತಾಗಿತ್ತು. ಮಿಡಲ್ ಮೋಡಿಯಲ್ಲಿ ಕತೆ ನಿಂತೆ ಬಿಡ್ತು ಅಂತ ಅನಿಸಲಿಲ್ಲ. ಕಾರಣ ಮನಸು ಪೂರ್ತಿ ಮಿಡಲ್ ಹಾಗೂ ಹಾಸ್ಯ ಲೇಖನಗಳತ್ತ ಪೂರ್ಣ ವಾಲಿಬಿಟ್ಟಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೪ನೇ ಬರಹ ನಿಮ್ಮ ಓದಿಗೆ

Read More

ಬರವಣಿಗೆಯ ಹುಚ್ಚು ಹತ್ತಿದ್ದ ದಿನಗಳು…: ಎಚ್. ಗೋಪಾಲಕೃಷ್ಣ ಸರಣಿ

ಪತ್ರಿಕೆಗಳಿಗೆ ಬರಹ ರವಾನೆ ಆದಾಗ ಅಸ್ವೀಕೃತ ಆದರೆ ವಾಪಸ್ ಕಳಿಸಲು ಅಂಚೆ ಚೀಟಿ ಹಚ್ಚಿದ ಕವರ ಸಂಗಡ ಹೋಗುತ್ತಿತ್ತು. ಆಗ ಅರವತ್ತು ಎಪ್ಪತ್ತರ ದಶಕದಲ್ಲಿ “ಅಸ್ವೀಕೃತ ಲೇಖನಗಳನ್ನು ವಾಪಸ್ ಪಡೆಯಲು ಅಂಚೆ ಚೀಟಿ ಹಚ್ಚಿದ ಸ್ವ ವಿಳಾಸದ ಕವರ್ ಸಂಗಡ ಇರಲಿ” ಎಂದು ಎಲ್ಲಾ ಪತ್ರಿಕೆಗಳೂ ಬರಹಗಾರ ಪ್ರಭುಗಳಿಗೆ ವಿನಂತಿ ಮಾಡುತ್ತಿದ್ದರು. ಅದರಂತೆ ನಾವು ಬರಹಗಾರ ಪ್ರಭುಗಳು ಅವರ ವಿನಂತಿಯನ್ನು ಶಿರಸಾ ವಹಿಸಿ ಪಾಲಿಸುತ್ತಿದ್ದೆವು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೭೨ನೇ ಬರಹ ನಿಮ್ಮ ಓದಿಗೆ

Read More

ಆಪತ್ಬಾಂಧವನಿಂದ ಕರಗಿದ ಕಾರ್ಮೋಡ: ಎಚ್. ಗೋಪಾಲಕೃಷ್ಣ ಸರಣಿ

ಹೆಂಡತಿ ನೂರು ಕ್ಯಾಂಡಲ್ ಕೆಂಪು ಬಲ್ಬಿನ ಹಾಗೆ ಕಂಡಳು. ಅವಳನ್ನು ಒಳಗೆ ಕರೆದು ಸಮಾಧಾನ ಪಡಿಸಿ ಓನರಿಣಿಯನ್ನು ಮನೆಗೆ ಸಾಗಹಾಕುವ ಪ್ಲಾನ್ ತಲೆಯಲ್ಲಿ ಮೊಳಕೆ ಹೊಡೆಯುತ್ತಿತ್ತು. ಎಂಟ್ರಿ ಹೇಗಾಯಿತು ಅಂದರೆ ರಾತ್ರಿ ಒಂಬತ್ತರ ಕತ್ತಲು, ಹತ್ತಿರದ ಕೆರೆಯಿಂದ ಕಪ್ಪೆಗಳ ವಟಗುಟ್ಟುವಿಕೆ, ಜೀರುಂಡೆ ಧ್ವನಿ ಮತ್ತು ಮನೆಯಿಂದ ಮೂರುನಾಲ್ಕು ಕಿಮೀ ದೂರದ ರೈಲು ಹಳಿ ಮೇಲೆ ರೈಲು ಹೋಗುತ್ತಿರುವ, ಎಂಜಿನು ವಿಶಲ್ ಹಾಕುವ ಶಬ್ದ. ನರಿ ಕೂಗು ಕೇಳುತ್ತೆ ಅಂತ ನನಗಿಂತ ಮೊದಲು ಬಂದವರು ಹೇಳುತ್ತಿದ್ದರು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸರ್ಕಾರಿ ಸಿಬ್ಬಂದಿಯೊಂದಿಗೆ ನಡೆದ ಜಟಾಪಟಿ: ಎಚ್. ಗೋಪಾಲಕೃಷ್ಣ ಸರಣಿ

ಬೆಳಿಗ್ಗೆಯಿಂದ ಸುತ್ತಿದ್ದು, ಹಸಿವಿನ ಹೊಟ್ಟೆ, ನಾಲ್ಕು ಮಹಡಿ ಹತ್ತು ಎರಡು ಮಾಡಿ ಇಳಿ… ಬಿಪಿ ಏರಿತು ಕಾಣಿರಿ… ವಾಚಾಮಗೋಚರ ಪುಂಖಾನು ಪುಂಖವಾಗಿ ಬಾಯಿಂದ ಬೈಗುಳ ಹೆಂಗೆ ಯಾವ ಡೆಸಿಮಲ್‌ನಲ್ಲಿ ಉಕ್ಕಿತು ಅಂದರೆ ಮೇಲಿನ ಮಹಡಿ ಕೆಳಗಿನ ಮಹಡಿ ನಾನು ನಿಂತಿದ್ದ ಮಹಡಿ ಜನ ಸುತ್ತಲೂ ಸೇರಿಬಿಟ್ಟರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆಂಟನೆಯ ಕಂತು

Read More

ಗೃಹಪ್ರವೇಶದ ಸೀನುಗಳು….: ಎಚ್. ಗೋಪಾಲಕೃಷ್ಣ ಸರಣಿ

ಬೆಳಕಿಗೆ ಅಂತ ಲಾಟೀನು, ಮೊಂಬತ್ತಿ ಬೆಂಕಿ ಪೆಟ್ಟಿಗೆ ತಂದಿಟ್ಟು ಪೆಟ್ರೋಮಾಕ್ಸ್‌ಗೆ ಹೊರಟೆ. ಅದು ಮೂರುನಾಲ್ಕು ಕಿಮೀ ದೂರದಲ್ಲಿ ನೋಡಿದ್ದೆ. ಆದರೆ ಅದನ್ನ ಯಾವತ್ತೂ ಹಚ್ಚಿ ಉಪಯೋಗಿಸಿರಲಿಲ್ಲ. ಅಂಗಡಿಗೆ ಹೋಗಿ ನಾಲ್ಕು ಪೆಟ್ರೋಮಾಕ್ಸ್ ಬಾಡಿಗೆ ತಗೊಂಡೆ. ಹೇಗೆ ಹಚ್ಚೋದು ಅಂತ ಅವನು ಅಂದರೆ ಅಂಗಡಿ ಓನರ್ ತೋರಿಸಿಕೊಟ್ಟ. ನಾಲ್ಕೂ ತಗೊಂಡು ಎರಡು ಶೌರಿ ನಮ್ಮ ವಾಚ್ಮನ್ನು, ಎರಡು ಸೈಕಲ್ ಹ್ಯಾಂಡಲ್‌ಗೆ ನೇತು ಹಾಕಿ ಮನೆ ಸೇರಿದೇವಾ? ಅವತ್ತು ರಾತ್ರಿ ಎಂಟಕ್ಕೆ ಎಲ್ಲರೂ ಸೇರಿ ನಮ್ಮ ಕಲಿತ ವಿದ್ಯೆ ಎಲ್ಲವನ್ನೂ ಖರ್ಚು ಮಾಡಿದರೂ ಒಂದೇ ಒಂದು ಪೆಟ್ರೋಮಾಕ್ಸ್ ಹತ್ತಲಿಲ್ಲ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ