Advertisement

ಸುವರ್ಣ ಚೆಳ್ಳೂರು

ಮನೆ ಕಟ್ಟಿಸುವ ಗೋಜುಗಳು…: ಎಚ್.ಗೋಪಾಲಕೃಷ್ಣ ಸರಣಿ

ಮರದ ಪ್ರಾಬ್ಲಂ ಅಂದರೆ ಅದನ್ನು ಕೊಳ್ಳುವ ಮರದ ಅಂಗಡಿಯಲ್ಲಿ ಅದನ್ನು ಕತ್ತರಿಸುವ ಮತ್ತು ಅದನ್ನು ಸಾಗಿಸುವ ಒಂದು ದೊಡ್ಡ ತಲೆನೋವು ನಿವಾರಣೆ ಈ ಒಂದು ನಡೆಯಿಂದ ಅಂದರೆ ಸಿಂಗಲ್ ಸ್ಟ್ರೋಕ್‌ನಿಂದ ಆಗಿತ್ತು. ಆಗಿನ ಸಂದರ್ಭದಲ್ಲಿ ಮನೆಯ ಮರ ಮುಟ್ಟುಗಳ ವ್ಯಾಪಾರ ಹೇಗೆ ನಡೆಯುತ್ತಿತ್ತು ಎಂಬುದರ ಒಂದು ಕಿರು ಪರಿಚಯ ನಿಮಗೆ ಮಾಡಲೇ ಬೇಕು, ಕಾರಣ ಎಂತಹ ಮ್ಯಾಥ ಮಟಿಕ್ಸ್ ಜೀನಿಯಸ್‌ಗಳೂ ಹೇಗೆ ತಲೆಕೆಟ್ಟು ಗಬ್ಬೆದ್ದು ಹೋಗುತ್ತಾರೆ ಎಂದು ಒಂದು ಅರಿವು ಮೂಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತಾರನೆಯ ಕಂತು

Read More

ಮಲ್ಲಯ್ಯನ ಮರಳು ತಕರಾರು: ಎಚ್.ಗೋಪಾಲಕೃಷ್ಣ ಸರಣಿ

ಒಂದು ಕಾಲದಲ್ಲಿ ತಮ್ಮ ಜೀವನ ನಿರ್ವಹಣೆಗೆ ಇಲ್ಲಿನ ಕ್ವಾರಿಗಳನ್ನು ನಂಬಿದ್ದ ಹಲವಾರು ಕುಟುಂಬಗಳು ಈಗ ಬೇರೆ ಬೇರೆ ವೃತ್ತಿ ಹಿಡಿದಿದ್ದಾರೆ. ಅದರ ಜತೆಗೆ ದೇವನಹಳ್ಳಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಆದ ನಂತರ ಅಲ್ಲಿಗೆ ಹಲವು ಸಂಪರ್ಕ ರಸ್ತೆಗಳ ನಿರ್ಮಾಣ ಶುರು ಆಯಿತು. ಬೆಟ್ಟಹಳ್ಳಿ ಮೂಲಕ ಒಂದು ರಸ್ತೆ ಅಗಲ ಮಾಡುವ ಯೋಜನೆ ಹಮ್ಮಿಕೊಳ್ಳಲಾಯಿತು. BEL ವೃತ್ತದಿಂದ ಈ ರಸ್ತೆ ಬೆಟ್ಟಹಳ್ಳಿ ಹಾದು ಯಲಹಂಕದ ಬಳಿ ದೇವನಹಳ್ಳಿ ರಸ್ತೆ ಸೇರುವಂತೆ ಯೋಜನೆ ರೂಪಿಸಿದ್ದು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೈದನೆಯ ಕಂತು

Read More

ಎಲ್ಲವೂ…. ಮರಳು ಮರಳೂ…: ಎಚ್. ಗೋಪಾಲಕೃಷ್ಣ ಸರಣಿ

ಮನೆಗೆ ಬರಬೇಕಾದರೆ ಮತ್ತೊಂದು ಯೋಚನೆ ತಲೆ ಕೆಡಿಸಿತು. ಸೈಟ್ ಮಧ್ಯ ಮಾರ್ಕ್ ಮಾಡ್ತಾ ಇದಾನೆ. ಮಧ್ಯದಿಂದ ಯಾರಾದರೂ ಮಾರ್ಕ್ ಮಾಡ್ತಾರಾ? ನಾನು ದಾಖಲು ಮಾಡ್ತಿರೋ ಈ ಪ್ರಸಂಗ ನಾಲ್ಕೂ ಕಾಲು ದಶಕದ ಹಿಂದೆ. ಅಂದರೆ ಆಗಿನ್ನೂ ಮೊಬೈಲ್ ಫೋನು, ಲ್ಯಾಂಡ್ ಲೈನ್ ಫೋನು ಇವೆಲ್ಲಾ ಇರದಿದ್ದ ಕಾಲ. ಏನಾದರೂ ಸಮಸ್ಯೆ, ಅದಕ್ಕೆ ಪರಿಹಾರ ಬೇಕು ಅಂದರೆ ಒಂದು ಮುಖಾಮುಖಿ ಮಾತು, ಇಲ್ಲ ಅಂದರೆ ಪೋಸ್ಟ್ ಮೂಲಕ ಕಾರ್ಡು ಅಥವಾ ಇನ್ ಲ್ಯಾಂಡ್ ಲೆಟರ್, ಇಲ್ಲಾ ಕಾಗದದಲ್ಲಿ ಬರೆದು ಅದನ್ನ ಕವರ್‌ನಲ್ಲಿ ಇಟ್ಟು ಪೋಸ್ಟ್ ಡಬ್ಬಕ್ಕೆ ಹಾಕಿ ಉತ್ತರಕ್ಕೆ ಕಾಯೋದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ನಾಲ್ಕನೆಯ ಕಂತು

Read More

ಇದು ನಿಮ್ದೇ ಸೈಟು ತಾನೇ!: ಎಚ್. ಗೋಪಾಲಕೃಷ್ಣ ಸರಣಿ

ನಾವು ಮನೆ ಮುಗಿಸಿ ವಾಸಕ್ಕೆ ಅಂತ ಬಂದಮೇಲೂ ಸಹ ಈ ಮನೆ ಕೇಸು ತುಂಬಾ ದಿವಸ ಎಳೆಯಿತು. ಸೈಟಿನ ಮೂಲ ಓನರ್ ಪರ್ಯಾಯ ಸೈಟಿಗೆ ಒಪ್ಪಿಗೆ ಕೊಡದೇ ಇದ್ದದ್ದು ಮತ್ತು ಅದೇ ಸೈಟು ತಮಗೆ ಬೇಕು ಅಂತ ಇರಾದೆ ವ್ಯಕ್ತ ಪಡಿಸಿದ್ದು ಕೇಸು ಎಳೆಯಲು ಅವಕಾಶ ಆಯಿತು. ಸೊಸೈಟಿ ಮಧ್ಯೆ ಪ್ರವೇಶ ಮಾಡಿ ಅಲ್ಟರ್ನೇಟ್ ಸೈಟು ಕೊಡ್ತೀವಿ ಅಂದರೂ ಕೊಸರಾಟ ಮುಂದುವರೆದು ಸುಮಾರು ಇಪ್ಪತ್ತು ವರ್ಷ ಕೇಸು ನಡೆದು ಕೊನೆಗೆ ಒಂದು ಕಾಂಪ್ರಮೈಸ್ ಡೀಲ್ ಆಯ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಲೋನ್‌ ಸಿಕ್ಕಲು ಇಂಟರ್ವ್ಯೂ!: ಎಚ್. ಗೋಪಾಲಕೃಷ್ಣ ಸರಣಿ

ಮನೆ ಒಳಗೆ ಸೇರಿಕೊಂಡು ಬಿಟ್ಟರೆ ಯಾವ ಓನರಿಣಿ ಕಾಟವೂ ಇರುದಿಲ್ಲ, ರಾತ್ರಿ ಹನ್ನೆರಡಕ್ಕೆ ಯಾರೂ ಬಾಡಿಗೆ ವಸೂಲಿಗೆ ಬರುಲ್ಲ, ಬೆಳಿಗ್ಗೆ ಬೆಳಿಗ್ಗೆ ಬಂದು ಬಾಡಿಗೆ ಕೊಡಿ ಅಂತ ಕೇಳೋದಿಲ್ಲ, ಅದಕ್ಕಿಂತ ಮುಖ್ಯವಾಗಿ ಹೆಂಡತಿಯ ಒಂದೇ ಒಂದು ಆಸೆ ಸಂಬಳದ ಮೊದಲ ಹತ್ತು ರುಪಾಯಿ ದೇವರಿಗೆ ಅದರಲ್ಲೂ ರಾಘವೇಂದ್ರ ಸ್ವಾಮಿಗೆ ರಾಯರ ಮಠಕ್ಕೆ ಅಭಿಷೇಕಕ್ಕೆ ಕೊಡಬೇಕು ಅನ್ನುವುದು…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೆರಡನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ