Advertisement

ಕೆಂಡಸಂಪಿಗೆ

ಟು ಡು ಲಿಸ್ಟ್‌ ಹಾಗೂ ರದ್ದಿ ಹಾಳೆಯ ಕತೆಗಳು….: ಎಚ್‌. ಗೋಪಾಲಕೃಷ್ಣ ಸರಣಿ

ನನ್ನ ಅನುಭವಗಳನ್ನು ಕೊಂಚ, ಕೊಂಚ ಏನೂ ತುಂಬಾ ಹೆಚ್ಚಾಗಿಯೇ ಉತ್ಪ್ರೇಕ್ಷಿಸಿ ಬುರುಡೆ ಅಂದರೆ ಸಖತ್ ಬುರುಡೆ ಬಿಡುತ್ತಿದ್ದೆ. ಈ ಬುರುಡೆಯಲ್ಲಿ ಬಹಳ ಮುಖ್ಯವಾಗಿ ಬ್ಯಾಂಕ್ ಡೈರೆಕ್ಟರ್ ಜತೆ ಇಂಟರ್ವ್ಯೂ ಮಾಡಿಸಿಕೊಂಡು ಸಾಲವನ್ನು ಮೂವತ್ತು ಸಾವಿರದಿಂದ ಮೂವತ್ತ ಮೂರು ಸಾವಿರ ಹೆಚ್ಚಿಸಿದ್ದು, ಬೇವಿನ ಮರದ ಹಳೇ ಬಾಗಿಲು ಕೊಂಡು ಟೋಪಿ ಬಿದ್ದದ್ದು, ಕುಬೇರಪ್ಪ ಹಳದಿ ಇಂಗಿನ ಬ್ಯಾಗ್‌ನಲ್ಲಿ ಕೇಜಿ ಅಷ್ಟು ಚಿನ್ನ ತುಂಬಿಕೊಂಡು ಯಶವಂತ ಪುರಕ್ಕೆ ನಡೆದುಕೊಂಡು ಹೋಗಿ ಚಿನ್ನ ಮಾರಿದ್ದೂ, ನನ್ನ ಹತ್ತಿರ ಊಹೂಂ ನನ್ನ ಹತ್ತಿರ ಅಲ್ಲ, ನನ್ನಾಕೆ ಹತ್ತಿರ ಮುಕ್ಕಾಲು ಗ್ರಾಮ್‌ನ ತಾಳಿ ಇರೋದು…. ಇವೆಲ್ಲಾ ಸೇರಿರುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪೆಟ್ಟುಮಾಡಿಕೊಂಡ ಕಿಟ್ಟಪ್ಪನಿಗೆ ಸಂದ ಪೂಜೆ…: ಎಚ್. ಗೋಪಾಲಕೃಷ್ಣ ಸರಣಿ

ಇಲ್ಲಿ ನನ್ನ ಸಂಪೂರ್ಣ ತಲಾಶ್ ನಡೆಯಿತು. ಎಡಗೈ ಇನ್ನೂ ನೇತಾಡುತ್ತಾ ಇತ್ತಲ್ಲ. ಅದನ್ನ ಹೇಗೋ ಮಡಿಸಿ ಒಂದು ಪಂಚೆಯನ್ನ ಸ್ವಿಂಗ್ ತರಹ ಮಾಡಿ ಕೊರಳಿಗೆ ನೇತು ಹಾಕಿದ್ದಳು. ಇಷ್ಟು ಹೊತ್ತಿಗೆ ಮೈಮೇಲೆ ಬಂದಿದ್ದ ಚಾಮುಂಡಿ ದೇವತೆ ಕೊಂಚ ಶಾಂತವಾಗಿತ್ತು. ತಟ್ಟೆಯಲ್ಲಿ ಅನ್ನ, ದಂಟಿನ ಸೊಪ್ಪಿನ ಹುಳಿ ಕಲಸಿ ಕೊಟ್ಟಳು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೆರಡನೆಯ ಕಂತು

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ಮೇಸ್ತ್ರಿಯೊಂದಿಗೆ ಗೆದ್ದ ಯುದ್ಧ…: ಎಚ್. ಗೋಪಾಲಕೃಷ್ಣ ಸರಣಿ

ನನ್ನ ತಲೆಯಿಂದ ದೊಡ್ಡ ಹೊರೆ ಇಳಿದ ಹಾಗನ್ನಿಸಿತು. ಸಾವಿರಾರು ರುಪಾಯಿ ಮಿಗಿಸಿದ ಸಂತೋಷ ಆಯ್ತು. ರೂಪಿ ಸೆವ್ಡ್ ಈಸ್ ರೂಪಿ ಅರ್ನ್‌ಡ್ ಎನ್ನುವ ಫಿಲಾಸಫಿ ನನ್ನದು ಆ ಕಾಲದಿಂದಲೇ…….! ಈ ಸಂತೋಷ ಒಂದುಕಡೆ ಮತ್ತು ಇಡೀ ಜೀವಮಾನ ಅನುಭವಿಸಬೇಕಿದ್ದ ಮಾನಸಿಕ ಒತ್ತಡ ಒಂದುಕಡೆ ನಿವಾರಣೆ ಆದ ಖುಷಿ ಸಿಕ್ತಾ?
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತನೆಯ ಕಂತು

Read More

ಕೋಟಿಕೋಟಿ ಕೈಜಾರಿದ ದುಃಖ…: ಎಚ್.ಗೋಪಾಲಕೃಷ್ಣ ಸರಣಿ

ಇಡೀ ಬೆಂಗಳೂರಿನ ಉಳ್ಳವರು ಅಂದರೆ ರಿಚ್ ಜನ ಇವರ ಮೋಡಿಗೆ ಒಳಗಾದರು. ಇಡೀ ಬೆಂಗಳೂರು ಒಂದು ರೀತಿಯ ಸಾಮೂಹಿಕ ಸನ್ನಿಗೆ ಒಳಗಾಯಿತು, ಐದು ಹತ್ತು ವರ್ಷ ಹಿಂದೆ ಮನೆ ಕಟ್ಟಿಸಿದವರೂ ಕೊಂಡವರೂ ಸೇರಿದಹಾಗೆ ಹಲವು ತಲೆಮಾರುಗಳಿಂದ ಇದ್ದ ಮನೆಗಳು ನೆಲಸಮ ಆದವು. ವಾಸ್ತು ಸರಿ ಇಲ್ಲ ಎಂದು ವಾಸ್ತು ಶಿಲ್ಪಿ ಹೇಳುವುದು ಮತ್ತು ಅಂತಹ ತಜ್ಞರ ಸಲಹೆ ಮೇರೆಗೆ ಮನೆ ಕೆಡವಿ ಕಟ್ಟುವ ಆಟ ಸುಮಾರು ಎರಡು ದಶಕ ನಡೆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಐವತ್ತೊಂಭತ್ತನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ