Advertisement

ಕೋಡಿಹಳ್ಳಿ ಮುರಳಿಮೋಹನ್

ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಇನ್ನೊಂದು ಪ್ರಚಲಿತ ಇದ್ದ ಗಾಳಿಮಾತು ಎಂದರೆ ಅವರು ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್ ಬೇಕು ಅಂದರೆ ಸಿಮೆಂಟ್ ಕಾರ್ಖಾನೆಯನ್ನು ಶುರುಮಾಡುತ್ತಾರೆ, ಕಬ್ಬಿಣ ಬೇಕು ಅಂದರೆ ಕಬ್ಬಿಣ ತಯಾರಿಕೆ ಫ್ಯಾಕ್ಟರಿ ಶುರುಮಾಡ್ತಾರೆ ಎನ್ನುವಂತಹ ರೆಕ್ಕೆ ಪುಕ್ಕ ಹುಟ್ಟಿಸಿಕೊಂಡ ಸುದ್ದಿಗಳು. ಬಿಲ್ಡಿಂಗ್ ಕಟ್ಟಲು ಇಟ್ಟಿಗೆ ಬೇಕು ತಾನೇ ಇವರದ್ದು ಇಟ್ಟಿಗೆ ಉದ್ಯಮ ಇತ್ತು ಮತ್ತು ಇದರಿಂದ ಈ ಸುದ್ದಿ ಹುಟ್ಟಿತೋ ತಿಳಿಯದು. ಇದಕ್ಕೆ ಪರ್ಯಾಯವಾಗಿ ಒಂದು ಜೋಕು ಹುಟ್ಟಿತ್ತು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕೋಟಿಗೊಬ್ಬರು “ಎಂ.ಎಸ್.ರಾಮಯ್ಯ”‌: ಎಚ್. ಗೋಪಾಲಕೃಷ್ಣ ಸರಣಿ

ಮತ್ತಿಕೆರೆ ಎನ್ನುವ ಬೆಂಗಳೂರಿನ ಹೊರ ಮೂಲೆಯಲ್ಲಿದ್ದ ಒಂದು ಪುಟ್ಟ ಹಳ್ಳಿ ಇವತ್ತು ಜಗತ್ತಿನ ಒಂದು ಪ್ರಮುಖ ಸ್ಥಳವಾಗಿ ಮಾರ್ಪಾಟು ಆಗಿರುವಲ್ಲಿ ಎಂ ಎಸ್ ರಾಮಯ್ಯ ಅವರ ಕಾರ್ಯಕ್ಷೇತ್ರ ಎದ್ದು ಕಾಣುತ್ತದೆ. ಮತ್ತಿ ಕೆರೆ ಸಂಪಂಗಪ್ಪ ರಾಮಯ್ಯ ಹೀಗೆ ಜಗತ್ತಿನ ಭೂಪಟದಲ್ಲಿ ಬೆಂಗಳೂರು ಮತ್ತು ಮತ್ತಿ ಕೆರೆಗೆ ಒಂದು ವಿಶಿಷ್ಠ ಸ್ಥಾನ ದೊರಕಿಸಿ ಕೊಟ್ಟಿದ್ದಾರೆ. ಬಹುಶಃ ಜಗತ್ತಿನಲ್ಲಿ ಇಂತಹ ಉನ್ನತ ಮಟ್ಟಕ್ಕೆ ಏರಿದ ವ್ಯಕ್ತಿ ಅಪರೂಪದಲ್ಲಿ ಅಪರೂಪವೇ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಅಪ್ಪನಿಗೇ ನನ್ನನ್ನು ಪರಿಚಯ ಮಾಡಿಕೊಂಡಿದ್ದೆ!: ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ಅಪ್ಪಂಗೆ ಅವರ ಮಕ್ಕಳ ಪರಿಚಯವೇ ಇಲ್ಲ ಅಂತ ಅಮ್ಮ ಆಗಾಗ ಮನೆಗೆ ಬಂದವರೆಲ್ಲರ ಮುಂದೆ ಹೇಳುತ್ತಿದ್ದಳು. ಅಪ್ಪ ನನ್ನ ಗುರುತು ಹಿಡಿತಾನೋ ಇಲ್ಲವೋ ಅಂತ ನನ್ನ ತಲೆಗೆ ಆಗ ಹೊಳಿಬೇಕಾ..? ಅಪ್ಪ ನನ್ನನ್ನು ನೋಡಿದ್ರಾ, ಮುಂದೆ ಸರಿದೆ. ಅಪ್ಪಾ, ನಾನು ಗೋಪಿ ನಿಮ್ಮ ಕೊನೇ ಮಗ.. ಅಂತ ವಿವರಿಸಲು ಹೊರಟೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಸನ್ಯಾಸಿನ್‌ ಅಂದ್ರೆ ಯಾರು?: ಎಚ್. ಗೋಪಾಲಕೃಷ್ಣ ಸರಣಿ

ಸಂಸ್ಥೆಯ ಹಿಂದಿರುವ ವಿವೇಕಾನಂದರ ಒತ್ತಾಸೆಯ ಸ್ಪೂರ್ತಿದಾಯಕ ನಿಲುವು ಸಾರ್ವಜನಿಕರಲ್ಲಿ ಹೆಚ್ಚು ಪ್ರಚಾರ ಪಡೆದಿಲ್ಲ ಮತ್ತು ಸಹೋದರಿ ನಿವೇದಿತಾ ಅವರ ಕೊಡುಗೆಯನ್ನು ಸಂಪೂರ್ಣವಾಗಿ ಮರೆತುಬಿಡಲಾಗಿದೆ. ಅದೇ ರೀತಿಯಲ್ಲಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಗೆ ೩೭೦ಎಕರೆ ಜಮೀನು ದಾನವಾಗಿ ನೀಡಿದ ಮೈಸೂರು ಮಹಾರಾಜರಾಗಿದ್ದ ಕೃಷ್ಣರಾಜ್ ಒಡೆಯರ್ ಅವರನ್ನು ಸಹ ಸಂಪೂರ್ಣವಾಗಿ ಮರೆಯಲಾಗಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

ಕಿಶೋರ್‌ ಕುಮಾರ್‌ ಎಲ್ಲಿ ಹೋದ್ರು?: ಎಚ್. ಗೋಪಾಲಕೃಷ್ಣ ಸರಣಿ

ಆಗತಾನೇ ಅಡಿಗರ ಕವನಗಳನ್ನು ಓದಿ ಅರ್ಥ ಮಾಡಿಕೊಳ್ಳುವ ಪ್ರಯತ್ನ ಶುರು ಮಾಡಿದ್ದೆ. ಅವರ ಮತ್ತು ಇತರ ಕವಿಗಳ ಹಲವು ಪದ್ಯಗಳ ಆರಂಭಿಕ ಸಾಲು ನೆನಪಿನಲ್ಲಿ ಇತ್ತು. ಕಟ್ಟುವೆವು ನಾವು ಹೊಸ ನಾಡೊಂದನು…., ನಾನು ಮಾಯವಾದಿಯಾಗಿ ಬಂದೆ, ಇದು ನಮ್ಮ ಮನೆಯ ಕಥೆ, ಕಾಲವ ನಾನು ನಿಂತೆ, ಮರಳಿನಿಂದ ಎಣ್ಣೆ ಹಿಂಡುವ ಗಾಣ ಮೊದಲಾದ ಸಾಲುಗಳು ತಲೆಯಲ್ಲಿ ಆಳವಾಗಿ ಹುದುಗಿತ್ತು…… ಇವು ಅಲ್ಪ ಸಲ್ಪ ಬದಲಾವಣೆ ಒಂದಿಗೆ ಪೇಪರಿನ ಮೇಲೆ ಮೂಡಿದವು..
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ