Advertisement

ಶ್ರೀಧರ್‌ ಎಸ್.‌ ಸಿದ್ದಾಪುರ

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಉದ್ದೇಶಪೂರ್ವಕವಲ್ಲದ ಒಂದು ಮಾತು ಕೊಲ್ಲಬಹುದು

ನಮ್ಮಲ್ಲಿನ್ನೂ ಮಾನವೀಯ ಸಂಬಂಧಗಳಿಗೆ ಬಹಳಷ್ಟು ಮೌಲ್ಯವಿದೆ, ಅರ್ಥವಿದೆ. ಯಾವುದೋ ಒಂದು ಅಪನಂಬಿಕೆ, ತಪ್ಪುಕಲ್ಪನೆ, ಅಪಾರ್ಥ ಎಲ್ಲವನ್ನು ಮುರಿದು ಹಾಕಬಾರದು. ಸಂಬಂಧಗಳೇನು ಪಟಕ್ಕನೇ ಕತ್ತರಿಸುವಷ್ಟು ತೆಳುವಾಗಿರುತ್ತವೆಯೇ? ತಾಳ್ಮೆಯಿಂದ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಯುದ್ಧಗಳೆ ನಿಂತಿರುವ ಉದಾಹರಣೆಗಳು ಕಣ್ಣಮುಂದಿವೆ. ಸಣ್ಣ ಪುಟ್ಟ ತಪ್ಪುಗಳಿಗೆ, ಜಗಳಗಳಿಗೆ, ಮುನಿಸುಗಳಿಗೆ ಮತ್ಯಾವುದೋ ಉದ್ದೇಶಪೂರ್ವಕವಲ್ಲದ ಮಾತಿಗೆ ಸಂಬಂಧಗಳು ಮುರಿದು ಬೀಳುತ್ತವೆ ಎಂದರೆ ಸಂಬಂಧಗಳಿಗೆ ಬೆಲೆ ಏನು?
ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ಅವಳನ್ನು ಅನ್ಯಗ್ರದ ಏಲಿಯನ್‌ಳಂತೆ ನೋಡತೊಡಗಿದ್ದರು

ಆಧುನಿಕತೆಯ ಬಣ್ಣ ಅಷ್ಟೊಂದು ಮೆತ್ತಿಕೊಂಡಿರದಿದ್ದ ನಮ್ಮ ಕಾಲೇಜಿಗೆ ಆಗ ಒಂದು ಹುಡುಗಿ ಜೀನ್ಸ್ ತೊಟ್ಟು ಬಂದಿರುವುದೇ ದೊಡ್ಡ ವಿಷಯ ಆಗಿಹೋಯಿತು. ಅಂದು ಅವಳನ್ನು ಯಾವುದೋ ಅನ್ಯಗ್ರಹವೊಂದರಿಂದ ಬಂದಿಳಿದ ಏಲಿಯನ್‌ಳಂತೆ ಎಲ್ಲಾ ಹುಡುಗರು ಅವಳನ್ನೆ ದಿಟ್ಟಿಸತೊಡಗಿದ್ದರು. ಅವಳ ಆ ಬಟ್ಟೆ ಕಂಡು ಆಡಿಕೊಂಡು ನಗುವುದು ಕೊಂಕು ಮಾತನಾಡುವುದು ಶುರು ಮಾಡಿದ್ದರು. ಹುಡುಗರ ವರ್ತನೆ ಎಷ್ಟು ಅತಿರೇಕಕ್ಕೆ ಹೋಯಿತೆಂದರೆ ಆ ಹುಡುಗಿ ತಾನೇನೋ ಮಹಾಪರಾಧ ಮಾಡಿ ಸಿಕ್ಕಿಬಿದ್ದಳೇನೋ ಎನ್ನುವ ಮನೋಭಾವನೆಯಲ್ಲಿ ಕಾಲೇಜು ಮುಗಿಯುವವರೆಗೂ ತಲೆ ತಗ್ಗಿಸಿಕೊಂಡೆ ಕೂಡಬೇಕಾಯಿತು.
ಇಸ್ಮಾಯಿಲ್‌ ತಳಕಲ್‌ ಅಂಕಣ

Read More

ಒನ್ಸ್ ಅಪಾನ್ ಎ ಟೈಮ್ ಇನ್ ಮುಂಬೈ

ನಾವಿದ್ದ ಅಪಾರ್ಟ್‌ಮೆಂಟಿನ ಮನೆಯನ್ನು ಸ್ವಚ್ಛ ಮಾಡಲು ಬರುತ್ತಿದ್ದ ಹದಿನೈದೋ ಹದಿನಾರೋ ಪ್ರಾಯದ ಬೆಂಗಾಲಿ ಹುಡುಗಿಯ ಬದುಕುವ ದರ್ದಿಗೆ ನಾನು ಬೆರಗಾಗಿದ್ದೆ. ಮಾತನಾಡಿಸಿದರೆ ಏನೊಂದೂ ಮಾತನಾಡದ, ಏನಾದರೂ ಪ್ರಶ್ನೆ ಕೇಳಿದರೆ ಸುಮ್ಮನೆ ನಕ್ಕುಬಿಡುತ್ತಿದ್ದ ಆ ಹುಡುಗಿ ತನ್ನ ತಾಯಿಯ ಜೊತೆಗೆ ಇಬ್ಬರು ತಂಗಿಯರನ್ನೂ ಬಂಗಾಳದ ಯಾವುದೋ ಹಳ್ಳಿಯಿಂದ ಕರೆದುಕೊಂಡು ಬಂದು ತಾನೊಬ್ಬಳೇ ದುಡಿಯುತ್ತಾ ಅವರನ್ನೆಲ್ಲಾ ಸಾಕುತ್ತಿದ್ದ ಪರಿ ನನ್ನಲ್ಲಿ ಸೋಜಿಗ ಹುಟ್ಟಿಸುತ್ತಿತ್ತು. ಮುಂಬೈಯಂತಹ ನಗರಗಳಲ್ಲಿ ಒಂಟಿ ಮಹಿಳೆಯರು ಒಂಟಿ ಹುಡುಗಿಯರು ಜೀವ ಕೈಯಲ್ಲಿ ಹಿಡಿದೆ ದುಡಿಯುತ್ತಿರುತ್ತಾರೆ.
ʻತಳಕಲ್‌ ಡೈರಿʼಯಲ್ಲಿ ಮುಂಬೈ ಮಹಾನಗರಿಯ ಬೆರಗಿನ ದಿನಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಕುದ್ರಿ ಕುದ್ರಿನ…ಕತ್ತಿ ಕತ್ತಿನ….!

ಬೀಜಗಣಿತವನ್ನು ಕಲಿಸುತ್ತಿದ್ದಾಗ ಮೇಷ್ಟ್ರು 4x ಗೆ 3y ಸೇರಿಸಿದರೆ ಎಷ್ಟಾಗುತ್ತದೆ ಎನ್ನುವುದನ್ನು ಅವರೆಷ್ಟು ಬಾರಿ ಅರ್ಥ ಮಾಡಿಸಲು ಪ್ರಯತ್ನಿಸಿದ್ದರು. ಆದರೆ ನಿಷ್ಕ್ರಿಯಗೊಂಡಂತಿದ್ದ ನಮ್ಮ ಮೆದುಳೊಳಗೆ ಇಳಿಯದೆ ನಮ್ಮೆಲ್ಲರ ಉತ್ತರ ‘ಏಳು’ ಎಂದೇ ಇರುತ್ತಿತ್ತು.  ಅವರಿಗೆ ಕೊನೆ ಕೊನೆಗೆ ಕೋಪ ಬಂದರೂ ಅದನ್ನು ತೋರಿಸಿಕೊಳ್ಳದೇ ಭಿನ್ನವಾದ ಉದಾಹರಣೆಯನ್ನು ನೀಡುತ್ತಾ “ಹೆಲೊ ಜೆಂಟಲ್‌ಮೆನ್ಸ್, ನಾಲ್ಕು ಕುದ್ರಿಗಳೊಳಗ ಮೂರು ಕತ್ತಿಗಳನ್ನ ಕುಡಿಸಿದ್ರ ಎಷ್ಟ್ ಆಗ್ತೆತಿ” ಅಂದಾಗಲೂ ನಾವು ಏಳು ಅಂತಲೇ ಒದರಿಬಿಡುತ್ತಿದ್ದೆವು. ನಮ್ಮ ದಡ್ಡತನಕ್ಕೆ ಅವರು ಹಣಿ ಹಣಿ ಜಜ್ಜಿಕೊಂಡು ಮರುಕಪಟ್ಟು “ನಾಲ್ಕು ಕುದ್ರಿಗೆ ಮೂರು ಕತ್ತಿ ಸೇರಿದ್ರ ಏಳು ಆಗಲ್ಲ ಕಣ್ರಲೇ, ಕುದ್ರಿ ಕುದ್ರಿನ… ಕತ್ತಿ ಕತ್ತಿನ…. ಅವು ಯಾವತ್ತು ಒಂದ ಅಲ್ಲ ಎನ್ನುತ್ತಿದ್ದರು. ʻತಳಕಲ್‌ ಡೈರಿʼಯಲ್ಲಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ ಇಸ್ಮಾಯಿಲ್‌ ತಳಕಲ್‌

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ