Advertisement

ಸುವರ್ಣ ಚೆಳ್ಳೂರು

ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ

ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.

Read More

ಶ್ರೀನಿವಾಸ ವೈದ್ಯರೆಂದರೆ….

ಅವರು ಈಸಿದಷ್ಟೂ, ಓದುಗರಾದ ನಾವು ಇದ್ದು ಜಯಿಸುತ್ತೇವೆ. ಅಂತರಂಗ-ಬಹಿರಂಗ, ವ್ಯಕ್ತಿ-ಸಮಾಜ ಎಂದೆಲ್ಲ ಕಾಲ್ಪನಿಕ ಗಡಿರೇಖೆ ಹಾಕಿಕೊಳ್ಳದೇ ಒಟ್ಟಂದದಲ್ಲಿ ಸಮಾಜವನ್ನು ತುಂಬಾ ಅಚ್ಛೆಯಿಂದ, ಅಷ್ಟೇ ಅಚ್ಚರಿಯಿಂದ ಅನುಭವಿಸಿದ ಈ ಜೀವಿಯ ಬರವಣಿಗೆಯಲ್ಲಿ ಬದುಕು ತನ್ನೆಲ್ಲ ನೆಳಲು ಬೆಳಕುಗಳೊಂದಿಗೆ ಬಸಿಯುತ್ತದೆ. ಇದು ಹೀಗೇಕೆ ಎಂದೆಲ್ಲ ಕೇಳದೇ, ಅರೆ ಇದು ಹೀಗಿದೆಯಲ್ಲ ಎಂದು ಸೋಜಿಗದಿಂದ ಇರವನ್ನು ಅನುಭವಿಸುವ ಅರಿವಿನ ದಾರಿ ಇದು. `ಅರಿವೇ ಗುರು’ ಎಂದರೆ, `ಹೌದ್ರೀ, ಆದರೆ ಅದೂ ಅಲ್ಲಲ್ಲಿ ಸ್ವಲ್ಪ ಹರಿದಿರ್ತದೆ’ ಎಂದು ಗಹಗಹಿಸಿ ನಗುವ ವೈದ್ಯರ ವಿನೋದ ಅಪ್ಪಟ.

Read More

ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ

“ಅಮ್ಮನ ಅವಮಾನವನ್ನು ಕಂಡು ನಖಶಿಕಾಂತ ಕಂಪಿಸುವ
ಎಳೆಕಂಗಳ ಎವೆಗಳನ್ನು ಯಾವ ಟಿಮ್.ಟಿಮ್.ಟಿಮ್. ಬಿಂದುಗಳೂ
ಅಭಿನಯಿಸಲಾರವು
ಕಪಾಟೇ ಇಲ್ಲದ ಗುಳೆ ಕುಟುಂಬದ ಸಣ್ಣ ಡಬ್ಬಿಯಲ್ಲಿ
ಯಾವ ಚಿನ್ಹೆಗಳನ್ನೂ ಬಚ್ಚಿಡಲಾಗದು”- ಜಯಂತ ಕಾಯ್ಕಿಣಿ ಬರೆದ ಹೊಸ ಕವಿತೆ

Read More

ಫೋಟೋ ಒಂದರ ಪ್ರತಿಫಲನ : ಜಯಂತ ಕಾಯ್ಕಿಣಿ ಬರಹ

“ವ್ಯಕ್ತಿಗತವಾಗಿ ವಿಭಿನ್ನವಾದ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಇವರೆಲ್ಲ ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ