ಅಪರೂಪದ ಗ್ರೂಪ್ ಫೋಟೋ: ಜಯಂತ ಕಾಯ್ಕಿಣಿ ಬರಹ
ವ್ಯಕ್ತಿಗತವಾಗಿ ವಿಭಿನ್ನ ಹುಡುಕಾಟ, ನೋಟ, ನಿಲುವುಗಳಿದ್ದರೂ, ಒಟ್ಟಾರೆ ಸೇರಿ ಏನೋ ಒಂದು ಒಳ್ಳೆಯದರಲ್ಲಿ ತೊಡಗಿರುವ ಭಾವವೊಂದು ಇಲ್ಲಿ ನಿಚ್ಚಳವಾಗಿದೆ. ‘ಬೇಂದ್ರೆ-ತರಾಸು ತೊಡೆನಾಟʼ ಇದಕ್ಕೆ ಸೊಗಸಾದ ಸಾಕ್ಷಿ. ಬೇಂದ್ರೆ ಮತ್ತು ಅಡಿಗರ ನಡುವೆ ಕಾಯ್ಕಿಣಿ, ಎಕ್ಕುಂಡಿ, ಶರ್ಮ ಇರುವುದೇ ಒಂದು ರೂಪಕ. ಬಹುಶಃ ಇದು ಆಗ ನಡೆದಿದ್ದ ಕುಮಟಾ ಸಾಹಿತ್ಯ ಸಮ್ಮೇಳನಕ್ಕೆ ಬಂದ ಕೆಲವು ಅತಿಥಿಗಳು ಗೋಕರ್ಣವನ್ನೂ ನೋಡಿಕೊಂಡು ಹೋಗಲು ಬಂದಾಗ ನಡೆದ ಕೂಟ ಕಲಾಪ….
ಕವಿ, ಕತೆಗಾರ, ಸಿನಿಮಾ ಹಾಡುಗಳ ಸರದಾರ, ಜಯಂತ ಕಾಯ್ಕಿಣಿ ತಮ್ಮ ತಂದೆ; ವಿದ್ವಾಂಸ, ವಿಮರ್ಶಕ, ಸಂಶೋಧಕ ಗೌರೀಶ ಕಾಯ್ಕಿಣಿ ಮತ್ತು ಅವರ ಸಮಕಾಲೀನ ಬರಹಗಾರರರನ್ನು ಅಪರೂಪದ ಫೋಟೋವೊಂದರ ಮೂಲಕ ನೆನಪಿಸಿಕೊಂಡಿದ್ದಾರೆ.