ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ
ವರ್ತಮಾನದ ಕಾಲದೊಳಗೆ ಇಣುಕಿ ನೋಡುವ, ಜೀವನದ ಜಾಲದಲ್ಲಿ ತನ್ನ ಸ್ಥಾನವನ್ನು ನಿರ್ಧರಿಸಿಕೊಳ್ಳುವಂತಹ ತನ್ನ ಸರಳ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಆತುರಪಡದೆ ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುತ್ತಾರೆ, ವಸ್ತುಗಳು, ಪರಿಕಲ್ಪನೆಗಳು, ಘಟನೆಗಳನ್ನು ಸೂಕ್ಷ್ಮವಾಗಿ ಆಲಿಸುತ್ತಾರೆ ಮತ್ತು ಪ್ರತಿಯೊಂದೂ ತನ್ನ ಜ್ಞಾನವನ್ನು ತನಗೆ ಬಹಿರಂಗಪಡಿಸಲು ಅವಕಾಶ ಮಾಡಿಕೊಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಬಲ್ಗೇರಿಯಾ ದೇಶದ ಕವಿ ಎಕ್ಯಾಟರೀನಾ ಯೊಸಿಫೋವಾ-ರವರ
(Ekaterina Yosifova) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ
