Advertisement

ಶಿವಕುಮಾರ ಮೋಹನ ಕರನಂದಿ

ಮಗುವಿನ ಮೌನ ಹಸಿವಿನಂಥ ಕಾವ್ಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಪಾಕ್ ಚೇಯ್ಸಾಮ್ ಅವರ ಕವಿತೆಗಳು ನೇರ ಆಕ್ರಮಣ ಮಾಡುವುದಿಲ್ಲ, ಆದರೆ ವಿಷಯಗಳ ಸುತ್ತ ಸುತ್ತಾಡುತ್ತಾ ಇರುತ್ತವೆ. ಈ ಕಾವ್ಯಾತ್ಮಕ ಸುತ್ತಾಡುವಿಕೆ ಅನಿವಾರ್ಯವಾಗಿ ಅಂತರವನ್ನು ಸೃಷ್ಟಿಸುತ್ತದೆ, ಇದು ಪ್ರಿಯತಮೆಗಾಗಿ ಹಂಬಲದಂತಹ ಅನ್ಯೋನ್ಯ ವಿಷಯದ ಬಗ್ಗೆಯೂ ಸಹ ಕವಿತೆಗಳು ಮಾತನಾಡುವದರಿಂದ ಬೇರ್ಪಡುವಿಕೆಯ ನೋವನ್ನು ಸೂಚಿಸುತ್ತದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ದಕ್ಷಿಣ ಕೊರೆಯಾ ದೇಶದ ಹೆಸರಾಂತ ಕವಿ ಪಾಕ್ ಚೇಯ್ಸಾಮ್ -ರವರ
(Pak Chaesam, 1933-1997) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ತ್ಯಾಗದಿಂದ ಹುಟ್ಟಿಕೊಂಡಂಥ ಕಾವ್ಯ: ಎಸ್. ಜಯಶ್ರೀನಿವಾಸ ರಾವ್ ಸರಣಿ

“ನಾನು ಬರೆಯುವೆ ಕಣ್ಮರೆಯಾಗಲು, ಇದರಿಂದ ಜೀವನವು ನನಗೆ ಬಹಿರಂಗವಾಗುತ್ತೆ, ನಾನಿಲ್ಲದೆನೇ, ಅಂತ್ಯದಲ್ಲಿ ನನ್ನ ಮುಖವು ಕಾಗದದ ಬಿಳಿ ಬಣ್ಣಕ್ಕಿಂತ ಹೆಚ್ಚು ಮಸುಕಾಗಿರುತ್ತೆ, ಪ್ರತಿಬಿಂಬವಿಲ್ಲದೆನೇ. ತನ್ನನ್ನು ತಾನು ಮರೆಯಬಹುದಾದಂತಹ ಜಗತ್ತು. ಕನ್ನಡಿಯಾಗಲ್ಲ, ಒಂದು ಕಲ್ಲಾಗಿ.”
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಇಟಲಿ ದೇಶದ ಹೆಸರಾಂತ ಕವಿ ಆ್ಯಂಟೊನೆಲಾ ಅನೆಡಾ-ರವರ (Antonella Anedda, 1955) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

‘ರೈತ ಕವಿ’ ಲೆನಾರ್ಟ್ ಸ್ಯೋಗ್ರೆನ್ : ಎಸ್. ಜಯಶ್ರೀನಿವಾಸ ರಾವ್ ಸರಣಿ

ಈ ಕಾರ್ಯದ ವಿರೋಧಾಭಾಸದ ಸ್ವರೂಪವು ಅವರ ಕವಿತೆಗಳಿಗೆ ಒಂದು ರೀತಿಯ ಮೊಂಡುತನದ ನಿಷ್ಠುರತೆಯನ್ನು ನೀಡುತ್ತದೆ. ಮೌನದ ದಿಕ್ಕಿನಲ್ಲಿ ಮಾತನಾಡುವ ಈ ಮಾತು, ಭಾಷೆಯ ಮೂಲಕ ಭಾಷೆಯಿಲ್ಲದವರ ಜಗತ್ತನ್ನು ವ್ಯಾಖ್ಯಾನಿಸುವ ಈ ಪ್ರಯತ್ನ – ಅದರೊಂದಿಗೆ, ಯಾವಾಗಲೂ ಅಡಗಿರುವ ವೈಫಲ್ಯದ ಭಾವನೆಯ ಜೊತೆ – ಸ್ಯೋಗ್ರೆನ್ ಅವರು ಇದನ್ನು ಮುವ್ವತ್ತಕ್ಕೂ ಹೆಚ್ಚು ಕವನ ಸಂಕಲನಗಳಲ್ಲಿ ನಿರಂತರವಾಗಿ ಮತ್ತು ಸಮಚಿತ್ತದಿಂದ ನಿರ್ವಹಿಸುತ್ತಾ ಬಂದಿದ್ದಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸ್ವೀಡನ್ ದೇಶದ ಕವಿ ಲೆನಾರ್ಟ್ ಸ್ಯೋಗ್ರೆನ್-ರವರ (Lennart Sjögren, 1930) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು

Read More

ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ವರ್ತಮಾನದ ಕಾಲದೊಳಗೆ ಇಣುಕಿ ನೋಡುವ, ಜೀವನದ ಜಾಲದಲ್ಲಿ ತನ್ನ ಸ್ಥಾನವನ್ನು ನಿರ್ಧರಿಸಿಕೊಳ್ಳುವಂತಹ ತನ್ನ ಸರಳ ಶೈಲಿಗೆ ಹೆಸರುವಾಸಿಯಾಗಿದ್ದಾರೆ. ಆತುರಪಡದೆ ಸಾವಕಾಶವಾಗಿ ಎಲ್ಲವನ್ನೂ ಹತ್ತಿರದಿಂದ ನೋಡುತ್ತಾರೆ, ವಸ್ತುಗಳು, ಪರಿಕಲ್ಪನೆಗಳು, ಘಟನೆಗಳನ್ನು ಸೂಕ್ಷ್ಮವಾಗಿ ಆಲಿಸುತ್ತಾರೆ ಮತ್ತು ಪ್ರತಿಯೊಂದೂ ತನ್ನ ಜ್ಞಾನವನ್ನು ತನಗೆ ಬಹಿರಂಗಪಡಿಸಲು ಅವಕಾಶ ಮಾಡಿಕೊಡುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಬಲ್ಗೇರಿಯಾ ದೇಶದ ಕವಿ ಎಕ್ಯಾಟರೀನಾ ಯೊಸಿಫೋವಾ-ರವರ
(Ekaterina Yosifova) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

“ಧೈರ್ಯಶಾಲಿ ಮತ್ತು ಬಂಡಾಯಗಾರ ಅರಬ್ ಕವಿ”: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅಡೋನೀಸ್ ಅವರ ಕಾವ್ಯ ಮತ್ತು ವಿಮರ್ಶೆ ಅರೇಬಿಕ್ ಕಾವ್ಯದ ಬೆಳವಣಿಗೆಯ ಮೇಲೆ ದೂರಗಾಮಿ ಪ್ರಭಾವ ಬೀರಿವೆ. ಶಾಸ್ತ್ರೀಯ ಕಾವ್ಯದಲ್ಲಿ ಆಳವಾಗಿ ಬೇರೂರಿದ್ದಾಗ್ಯೂ ಸಮಕಾಲೀನ ಅರೇಬಿಕ್ ಸಮಾಜದ ಅವಸ್ಥೆ ಮತ್ತು ಪ್ರತಿಕ್ರಿಯೆಗಳನ್ನು ತೋರಿಸುವಂತಹ ಹೊಸ ಕಾವ್ಯಾತ್ಮಕ ಭಾಷೆ ಮತ್ತು ಲಯಗಳನ್ನು ಸೃಷ್ಟಿಸಿದೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿಯಲ್ಲಿ ಸಿರಿಯಾ (Syria) ದೇಶದ ಅರೇಬಿಕ್ (Arabic) ಭಾಷಾ ಕವಿ ಅಡೋನೀಸ್-ರವರ (Adonis – Ali Ahmad Said Esber) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ