Advertisement

ಡಾ. ವಿನತೆ ಶರ್ಮ

ವಾರಾನ್ನದ ಅರೆ ಆತ್ಮಚರಿತ್ರೆ: ಕೆ. ಸತ್ಯನಾರಾಯಣ ಕಥಾ ಸರಣಿ

ಅರ್ಧ ಮನೆಗಳಲ್ಲಿ ವರ್ಷಕ್ಕೆ ಒಂದು ದಿನವೂ ಉಪ್ಪಿನಕಾಯಿ ಹಾಕ್ತಾ ಇರಲಿಲ್ಲ. ಆಯ್ತು ತಿಂಡಿ-ತೀರ್ಥ ಸಿಗುತ್ತಲ್ಲ ಅಂತ ಅಂದುಕೊಂಡರೆ, ವಿಪರೀತ ಪಾತ್ರೆ, ಪಡಗ, ನೆಂಟರಿಷ್ಟರ ಊಟದ ಎಲೆಗಳು. ಇಂತಹ ದಿನಗಳಲ್ಲಿ ರಾತ್ರಿ ಕೂಡ ಊಟ ಮಾಡಿಕೊಂಡು ಹೋಗು ಎಂದರೂ ಭಯವೇ! ಊಟ ಸಿಗುತ್ತೆ ಅಂತ ಉಳಿದುಕೊಂಡರೆ, ಮತ್ತೆ ಪಾತ್ರೆ, ಪಗಡಿ, ಎಂಜಲು, ಗೋಮ. ಮಕ್ಕಳೇ ಧೈರ್ಯ ಮಾಡಿ ಊಟ ಏನೂ ಬೇಡ, ಮಧ್ಯಾಹ್ನ ತಿಂದದ್ದೇ ಇನ್ನೂ ಅರಗಿಲ್ಲ ಅಂತ ಅರ್ಧ ಸುಳ್ಳು ಹೇಳೋರು.
ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ “ರೂಪಕಗಳಿಗೆ ಕೊರತೆಯಿಲ್ಲ”

Read More

ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ” ಇಂದಿನಿಂದ

ಮದುವೆ ಗೊತ್ತಾಗುವ ಮುನ್ನ ಶಿವರಾಂ ಒಂದು ಚಿತ್ರ ನಿರ್ಮಿಸಿದ್ದರು. ನೆಮ್ಮದಿ, ಸಂತೋಷ ತುಂಬಿದ ಒಂದು ಕಂಟ್ರಾಕ್ಟರ್‌ ಸಂಸಾರದ ಕತೆ ಅದು. ಸಂಸಾರದ ಯಜಮಾನ ಡ್ಯಾಂ ಸೈಟ್‌ನಲ್ಲಿ ಆದ ಅಪಘಾತದಿಂದಾಗಿ ಮಧ್ಯ ವಯಸ್ಸಿನಲ್ಲೇ ತೀರಿಕೊಂಡಾಗ, ನಾಯಕಿಯಾಗಿದ್ದ ಜಯಮ್ಮ ದುಃಖ ತೋರಿಸಿದ ರೀತಿ, ನಂತರ ಸಂಸಾರ ಕಟ್ಟಿದ ರೀತಿ, ಎಲ್ಲರನ್ನೂ ಮೂಕರನ್ನಾಗಿಸಿತ್ತು. ಜೀವನದಲ್ಲಿ ಇದ್ದರೆ ಇಂತಹ ಹೆಂಡತಿ ಇರಬೇಕು ಅಂತ ಬಯಸಿ, ಬೇಡಿ, ಪ್ರಚಾರ ನೀಡಿ, ಮದುವೆ ಮಾಡಿಕೊಂಡಿದ್ದರು.
ಕತೆಗಾರ ಕೆ. ಸತ್ಯನಾರಾಯಣ ಹೊಸ ಕಥಾ ಸರಣಿ “ರೂಪಕಗಳಿಗೆ ಕೊರತೆಯಿಲ್ಲ”, ಇಂದಿನಿಂದ, ಪ್ರತಿ ಶನಿವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ಪ್ರಯಾಣ-ಪ್ರವಾಸದಲ್ಲಿ ಓದಬೇಕೆ?: ಕೆ. ಸತ್ಯನಾರಾಯಣ ಹೊಸ ಕೃತಿಯ ಒಂದು ಬರಹ

ಪ್ರವಾಸ-ಪ್ರಯಾಣದಲ್ಲಿ ಸಹಪ್ರಯಾಣಿಕರು ನಮ್ಮ ಓದಿನ ರೀತಿಯನ್ನು ಪ್ರಭಾವಿಸುತ್ತಾರೆ. ಅಲ್ಲದೆ, ಪ್ರವಾಸ-ಪ್ರಯಾಣದ ಉದ್ದೇಶ, ಓದುವುದೇನಲ್ಲ. ರೈಲಿನಲ್ಲಾಗಲಿ, ವಿಮಾನದಲ್ಲಾಗಲಿ ನಿಮಗೆ ಊಟಕ್ಕೆ, ನಿದ್ದೆಗೆ, ಶೌಚಕ್ಕೆ ವ್ಯವಸ್ಥೆ, ಅನುಕೂಲ ಮಾಡಿಕೊಡಬಹುದೇ ಹೊರತು ಓದಿಗಲ್ಲ. ನೀವು ಓದುವುದರಿಂದ ಎಷ್ಟೋ ಸಲ ಸಹಪ್ರಯಾಣಿಕರಿಗೆ ತೊಂದರೆಯೂ ಆಗಬಹುದು. ನಿಮ್ಮನ್ನು ಒಬ್ಬ ವಿಚಿತ್ರ ಪ್ರಾಣಿಯೆಂದು ಕೂಡ ಪರಿಗಣಿಸಬಹುದು.
ಕತೆಗಾರ ಕೆ. ಸತ್ಯನಾರಾಯಣ ಬರೆದ “ಓದುವವರೆಲ್ಲ ಓದುಗರೆಲ್ಲ-ಹಾಗಾದರೆ?” ಹೊಸ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ