ವಾರಾನ್ನದ ಅರೆ ಆತ್ಮಚರಿತ್ರೆ: ಕೆ. ಸತ್ಯನಾರಾಯಣ ಕಥಾ ಸರಣಿ
ಅರ್ಧ ಮನೆಗಳಲ್ಲಿ ವರ್ಷಕ್ಕೆ ಒಂದು ದಿನವೂ ಉಪ್ಪಿನಕಾಯಿ ಹಾಕ್ತಾ ಇರಲಿಲ್ಲ. ಆಯ್ತು ತಿಂಡಿ-ತೀರ್ಥ ಸಿಗುತ್ತಲ್ಲ ಅಂತ ಅಂದುಕೊಂಡರೆ, ವಿಪರೀತ ಪಾತ್ರೆ, ಪಡಗ, ನೆಂಟರಿಷ್ಟರ ಊಟದ ಎಲೆಗಳು. ಇಂತಹ ದಿನಗಳಲ್ಲಿ ರಾತ್ರಿ ಕೂಡ ಊಟ ಮಾಡಿಕೊಂಡು ಹೋಗು ಎಂದರೂ ಭಯವೇ! ಊಟ ಸಿಗುತ್ತೆ ಅಂತ ಉಳಿದುಕೊಂಡರೆ, ಮತ್ತೆ ಪಾತ್ರೆ, ಪಗಡಿ, ಎಂಜಲು, ಗೋಮ. ಮಕ್ಕಳೇ ಧೈರ್ಯ ಮಾಡಿ ಊಟ ಏನೂ ಬೇಡ, ಮಧ್ಯಾಹ್ನ ತಿಂದದ್ದೇ ಇನ್ನೂ ಅರಗಿಲ್ಲ ಅಂತ ಅರ್ಧ ಸುಳ್ಳು ಹೇಳೋರು.
ಕೆ. ಸತ್ಯನಾರಾಯಣ ಬರೆಯುವ ಕಥಾಸರಣಿ “ರೂಪಕಗಳಿಗೆ ಕೊರತೆಯಿಲ್ಲ”

