ಅಂಪೈರ್ ಮೇಡಂ: ಕೆ. ಸತ್ಯನಾರಾಯಣ ಕಾದಂಬರಿಯ ಪುಟಗಳು…
ಹುಡುಗನ ತಮ್ಮನಿಗೆ ಪೋಲಿಯೋದಿಂದ ಕಾಲು ತಿರುಚಿಕೊಂಡು ಪೇಟೆ ಬೀದಿಯ ಒಳ ಓಣಿಯ ಬಲಗಡೆ ಕ್ರಾಸಿನಲ್ಲಿ ಒಂದು ಕಾಂಡಿಮೆಂಟ್ ಸ್ಟೋರ್ಸ್ ಹಾಕಿಕೊಟ್ಟಿದ್ದು ವ್ಯಾಪಾರ ಚೆನ್ನಾಗಿ ನಡೆಯುತ್ತಿತ್ತು. ಶ್ರೀದೇವಿಯ ಗಂಡನಾಗುವವನು ಕೂಡ ಲ್ಯಾಂಡ್ ಬ್ಯಾಂಕ್ ಕೆಲಸದಲ್ಲಿ ಎಷ್ಟೇ ಹೊತ್ತು ತಡವಾದರೂ ಒಂದು ಸಲ ಸಂಜೆ ಅಂಗಡಿಗೆ ಹೋಗಿ, ಸಾಮಾನು, ಕ್ಯಾಶ್ ಎಲ್ಲ ಲೆಕ್ಕ ನೋಡಿ ತಮ್ಮನಿಗೆ ಸಹಾಯ ಮಾಡುತ್ತಿದ್ದ. ನೋಡಿ, ಈಗಿನ ಕಾಲದಲ್ಲೂ ಇಂತಹ ಗುಣವಂತ, ನೀತಿವಂತ ಹುಡುಗರು ಇರುತ್ತಾರಾ ಅಂತ ಕಿರಂಗೂರಿನ ಸಮಸ್ತ ಪ್ರಜೆಗಳಿಗೆ ಕೊನೇ ಪಕ್ಷ ಮೂರು ನಾಲ್ಕು ಸಲವಾದರೂ ಗೋದಾದೇವಿ ಹರಿಕತೆ ಮಾಡಿ ತಿಳಿಸಿದ್ದಳು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ಅಂಪೈರ್ ಮೇಡಂ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

