Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಬಿಸಿಲುಕೋಲು – ಮಾತು, ಸ್ಪರ್ಶ, ಓದು, ಕಲಿಕೆ ಮತ್ತು ಬದುಕು

ನಿಸರ್ಗದ ಬಗ್ಗೆ, ಪರಿಸರದ ಬಗ್ಗೆ, ನಮ್ಮ ಇವತ್ತಿನ ಜೀವನದ ಬಗ್ಗೆ ಏನೇನೂ ಗೊತ್ತಿಲ್ಲದ ಮಕ್ಕಳ ಸಂಖ್ಯೆ ಬಹಳ ದೊಡ್ಡದಿದೆ. ಮನೆಯಲ್ಲಿರುವ ಹೊತ್ತಿನಲ್ಲಿ ಒಬ್ಬ ಬಾಲಕನ ದಿನ ಹೇಗೆ ಹೋಗುತ್ತದೆ ನೋಡಿ. ಕಂಪ್ಯೂಟರಿನಲ್ಲಿ ಅದೇನೇನೋ ಮೌನದಾಟ.

Read More

ಕೆ ಟಿ ಗಟ್ಟಿ ಬರೆಯುವ ಬಿಸಿಲುಕೋಲು- ಶನಿವಾರವೂ ಯಾಕೆ ಭಾನುವಾರವಾಗಬಾರದು?

ಅಮೆರಿಕದಲ್ಲಿ, ಇಂಗ್ಲೆಂಡಿನಲ್ಲಿ, ನಮ್ಮ ಕೇಂದ್ರ ಸರಕಾರದ ಆಫೀಸುಗಳಲ್ಲಿ ವಾರದಲ್ಲಿ ಐದು ದಿನ ಕೆಲಸ. ‘ವೀಕ್ ಎಂಡ್’ ಎನ್ನುವುದು ಎರಡು ದಿನ. ಇದರಿಂದಾಗಿ ನಾನಾ ವಿಧ ಆಫೀಸು ಕಚೇರಿ ಕಾರ್ಯಾಲಯಗಳಲ್ಲಿ ಕೆಲಸ ಮಾಡುವವರಿಗೆ ತಮ್ಮ ಮಕ್ಕಳ ಜೊತೆಯಿರಲು ಎರಡು ದಿನ ಸಿಗುತ್ತದೆ.

Read More

ಕೆ.ಟಿ ಗಟ್ಟಿ ಬರೆಯುವ ಬಿಸಿಲುಕೋಲು -ಭೂಮಿಯ ದುಃಖಗಳ ಲೆಕ್ಕಾಚಾರ

ಈ ಆತಂಕಕ್ಕೆ ಕಾರಣ? ಮುಂಬಯಿಯಲ್ಲಿ ಮತ್ತೆ ಮತ್ತೆ ಉಂಟಾಗುತ್ತಿರುವ ‘ಜಲಪ್ರಳಯ’ವೆ? ಬೆಂಗಳೂರಿನಲ್ಲಿ ಆಗಾಗ ಸಂಭವಿಸುವ ಮೇಘಸ್ಫೋಟಗಳೆ? ಸಮುದ್ರ ತನ್ನ ನಿಲ್ಲದ ಕೊರೆತಕ್ಕೆ ಹೊಸ ಹೊಸ ಕಿನಾರೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದೆ?

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ