Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಸಂದರ್ಶಕರಿಂದ ತಪ್ಪಿಸಿಕೊಂಡ ಕವಿ ತಿರುಮಲೇಶರ ಸ್ವಯಂ ಸಂದರ್ಶನ

ದೂರದ ಹೈದರಾಬಾದಿನಲ್ಲಿ ತಮ್ಮ ಜೀವಿತದ ಬಹುಭಾಗವನ್ನು ಕಳೆದಿರುವ ಕನ್ನಡದ ಹಿರಿಯ ಕವಿ ಕೆ.ವಿ. ತಿರುಮಲೇಶರು ತಮ್ಮ ಕುರಿತು ಬಹಳ ಕಮ್ಮಿ ಮಾತನಾಡಿದವರು. ಬರಹಗಾರನಿಗಿಂತ ಬರಹದ ಕುರಿತು ಹೆಚ್ಚು ಚರ್ಚೆಯಾಗಬೇಕೆಂದು ಹೇಳುತ್ತಲೇ ಬಂದವರು. ಬರಹಗಾರ ಆತ್ಮ ಚರಿತ್ರೆಯನ್ನೂ ಕೂಡಾ ಬರೆಯಬಾರದು ಎಂದು ಪ್ರತಿಪಾದಿಸುವವರು. ಆದರೆ ಇತ್ತೀಚೆಗೆ ಕೊಂಚ ಮನಸ್ಸು ಬದಲಿಸಿ ತಮ್ಮದೊಂದು ಕಲ್ಪಿತ ಸಂದರ್ಶನವನ್ನು ತಾವೇ…

Read More

ಕೆ.ವಿ. ತಿರುಮಲೇಶ್‌ ಅನುವಾದಿಸಿದ ಎಮಿಲಿ ಡಿಕಿನ್ಸನ್‌ಳ ಕವಿತೆಗಳು

ಅಮೆರಿಕದ ಕವಯಿತ್ರಿ ಎಮಿಲಿ ಡಿಕಿನ್ಸನ್ (೧೮೩೦-೮೬) ತುಂಬಾ ಸೆನ್ಸಿಟಿವ್ ಕವಿತೆಗಳನ್ನು ಬರೆದವಳು.  ಬದುಕಿನ ಸೂಕ್ಷ್ಮ ವಿಚಾರಗಳೇ ಹೆಚ್ಚಾಗಿ ಅವಳ ಕವನದ ವಸ್ತುಗಳಾಗಿದ್ದವು. ತನ್ನ ಜೀವಿತಕಾಲದಲ್ಲಿ ಅವಳು ಪ್ರಕಟಿಸಿದ್ದು ಆರೋ ಏಳೋ ಕವಿತೆಗಳನ್ನು ಮಾತ್ರ. ಚಿಕ್ಕ ಚಿಕ್ಕ ಕಾಗದದ ತುಂಡುಗಳಲ್ಲಿ ಅವಳು ಬರೆದು ಬಂಡಲುಗಳಾಗಿ ಇರಿಸಿದ ಕವಿತೆಯ ಕಟ್ಟುಗಳು ಅವಳ ಮರಣಾನಂತರ ಸಿಕ್ಕವು. ಇಂದು ಡಿಕಿನ್ಸನ್ ಇಂಗ್ಲಿಷ್ ಸಾಹಿತ್ಯದಲ್ಲಿ ಪ್ರಸಿದ್ಧ ಹೆಸರು. ಡಿಕಿನ್ಸನ್ ಕವಿತೆಗಳಿಗೆ ಶೀರ್ಷಿಕೆಗಳಿಲ್ಲ.  ಆಕೆಯ ಎರಡು ಕವನಗಳನ್ನು ಹಿರಿಯ ಬರಹಗಾರ ಕೆ.ವಿ.ತಿರುಮಲೇಶ್ ಅನುವಾದಿಸಿದ್ದಾರೆ. 

Read More

ಘೇಂಡಾಮೃಗ: ಕೆ.ವಿ.ತಿರುಮಲೇಶ್ ಬರೆದ ಕವಿತೆ

ಬಡ ಘೇಂಡಾದ ಅಶಕ್ತ ಬಾಹುಗಳ ಒಳಕ್ಕೆ
ಸಿಗದು ಇಹದ ಯಾವುದೇ ಸಂಪತ್ತು.
ಆದರೆ ಒಂದಿಂಚೂ ಕದಲಬೇಕಾದ್ದಿಲ್ಲ ಅನುದಾನಕ್ಕೆ
ನಮ್ಮ ಜೈ ಕನ್ನಡ ಸಾಹಿತ್ಯ ಪರಿಷತ್ತು.

Read More

ಎಫ್. ಆರ್. ಲೀವಿಸ್ ಕುರಿತು ಕೆ. ವಿ. ತಿರುಮಲೇಶ್ ಐವತ್ತೈದು ವರ್ಷಗಳ ಹಿಂದೆ ಬರೆದದ್ದು

“ಲೀವಿಸ್ ಎಂದರೆ ತುಂಬ ಹಟಮಾರಿಯೂ ಹೌದು, ತನ್ನ ತಪ್ಪನ್ನು ಒಪ್ಪಿಕೊಳ್ಳುವುದೇ ಇಲ್ಲ. ಇದರಿಂದಾಗಿ ಲೀವಿಸ್‍ ನ ಬೆಂಬಲಿಗರೇ ಅವನ ಕೈಬಿಟ್ಟದ್ದುಂಟು. ತನ್ನ ‘ಮೌಲ್ಯ’ಗಳಿಗಾಗಿ ಲೀವಿಸ್ ಹೋರಾಡಿದ್ದಾನೆ. ಲೀವಿಸ್ ತಾನೊಂದು ಸರ್ವಸಾಮಾನ್ಯ ನಿಲುಮೆ ತಳೆಯಲು ನಿರಾಕರಿಸುವುದೇ ಇದಕ್ಕೆ ಕಾರಣ. ಇದು ಲೀವಿಸ್‍ ನ ಸಾಧನೆಯ ಕೇಂದ್ರ ವಿರೋಧಾಭಾಸ. ವಿಮರ್ಶೆಯ ಪರಮತತ್ವಗಳ ಕುರಿತಾಗಿ…”

Read More

ಕೆ.ವಿ. ತಿರುಮಲೇಶ್‌ ಅವರ ಹೊಸ ಕಾದಂಬರಿಯ ಆಯ್ದ ಭಾಗ

“ಕ್ಲಾಸು ಮುಗಿದು ಮೊದಲು ಸಕಲೇಶನಿರುವ ಹಾಸ್ಟೆಲ್ ಕಡೆ ಹೋಗಬೇಕೆಂದು ಚಿಂತಿಸುತ್ತ ಕುಳಿತ. ಆಮೇಲೆ ಶೀತಲ್ ಮತ್ತು ಮೃಣಾಳಿನಿಯನ್ನು ನೋಡಿಕೊಂಡು ಬರಬೇಕು. ಪಿಕ್‍ನಿಕ್‍ ನ ಘೋರವಾದ ಅನುಭವದಿಂದ ಆತ ಇನ್ನೂ ಚೇತರಿಸಿಕೊಂಡಿರಲಿಲ್ಲ. ಒಮ್ಮೆಲೆ ಎಲ್ಲ ಪೂರ್ತಿ ಬದಲಾಗಿಬಿಟ್ಟಿತ್ತು. ಈ ಕ್ಲಾಸಿಗೂ, ಈ ಅಧ್ಯಾಪಕರಿಗೂ, ಇಲ್ಲಿ ಕೂತಿರುವ ಸಹಪಾಠಿಗಳಿಗೂ ತನಗೂ ಏನೇನೂ ಸಂಬಂಧವಿಲ್ಲದ ಹಾಗೆ ಅವನಿಗನಿಸಿತು. ಅದು ಹೇಗೋ ಕ್ಲಾಸು ಮುಗಿಯುವವರೆಗೆ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ