Advertisement
ಎಸ್. ಜಯಶ್ರೀನಿವಾಸ ರಾವ್

ಜಯಶ್ರೀನಿವಾಸ ರಾವ್ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗದ್ಯ-ಪದ್ಯಗಳ ಅನುವಾದಕರು.  ‘ಚಂದ್ರಮುಖಿಯ ಘಾತವು’ (1900) ಕಾದಂಬರಿಯನ್ನು, ‘ಸ್ಟೀಲ್ ನಿಬ್ಸ್ ಆರ್ ಸ್ಪ್ರೌಟಿಂಗ್: ನ್ಯೂ ದಲಿತ್ ರೈಟಿಂಗ್ ಫ಼್ರಮ್ ಸೌತ್ ಇಂಡಿಯ’ ಸಂಕಲನದಲ್ಲಿ ಕವನಗಳು, ಕತೆಗಳು, ಹಾಗೂ ಪ್ರಬಂಧಗಳನ್ನು, ಹಾಗೂ ಕೇರೂರ ವಾಸುದೇವಾಚಾರ್ಯರ ಸ್ವರಚಿತ ‘ವಿಸ್ಮಯಜನಕವಾದ ಹಿಂಸೆಯ ಕ್ರಮವು’ ಎಂಬ ಶರ್ಲಾಕ್ ಹೋಮ್ಸ್ ಕತೆಯನ್ನು ಇಂಗ್ಲಿಷಿಗೆ ಅನುವಾದ ಮಾಡಿದ್ದಾರೆ.  “ಸುರಿದಾವೋ ತಾರೆಗಳು: ಅನುವಾದಿತ ಪೋಲಿಷ್ ಕವನಗಳು" (ಪೋಲೀಷ್‌ ಕವಿತೆಗಳ ಕನ್ನಡಾನುವಾದಿತ ಸಂಕಲನ).  ಇವರು ಇಂಗ್ಲಿಷಿಗೆ ಅನುವಾದ ಮಾಡಿದ ಶ್ರೀ ಕೆ. ವಿ. ತಿರುಮಲೇಶರ ಕವನಗಳು ಇಂಗ್ಲಿಷ್ ಸಾಹಿತ್ಯ ಪತ್ರಿಕೆಗಳಾದ ‘ಸೆಷುರೆ’ ಹಾಗೂ ‘ಮ್ಯೂಜ಼್ ಇಂಡಿಯ’ ದಲ್ಲಿ ಪ್ರಕಟವಾಗಿವೆ.  ಹೈದರಾಬಾದಿನ CIEFLನಿಂದ (ಈಗ The EFL University) ‘Translation and Transformation: The Early Days of the Novel in Kannada’ ಶೀರ್ಷಿಕೆಯಡಿಯಲ್ಲಿ ನಡೆಸಿದ ಸಂಶೋಧನೆಗಾಗಿ 2003ರಲ್ಲಿ PhD ಪದವಿ ಪಡೆದಿದ್ದಾರೆ.  ಎಸ್ಟೋನಿಯಾ, ಲ್ಯಾಟ್ವಿಯಾ ಹಾಗೂಲಿಥುವೇನಿಯಾ ದೇಶದ ಕವಿತೆಗಳ ಸಂಕಲನ 'ಬಾಲ್ಟಿಕ್ ಕಡಲ ಗಾಳಿ' ಇತ್ತೀಚೆಗೆ ಪ್ರಕಟವಾಗಿದೆ.

ಜರ್ಕುಂ ಬುರ್ಕುಂ ಏನಜ್ಜೀ?: ಕೆ.ವಿ. ತಿರುಮಲೇಶ್ ಬರಹ

“ಕೇರಳದಿಂದ ಬರುವ ಈ ಚೂರಿಗಳ ಒಂದು ಬ್ರಾಂಡಿಗೆ ಹೆಚ್ಚಿನ ಬೇಡಿಕೆಯಿತ್ತು. ‘ಮುಂದಿನ ಸಲ ಬರುವಾಗ ನನಗೊಂದು ತಂದುಕೊಡಿ’ ಎನ್ನುತ್ತಿದ್ದರು. ಬಹುಶಃ ‘ತೋಟರ’ ಎನ್ನುವ ಬ್ರಾಂಡಿನದು. ಯಾಕೆ ಇಂಥ ಬೇಡಿಕೆಯೆಂದರೆ ನಮ್ಮೂರಿನ ತಯಾರಿಕೆಗಳಿಂತ ಇದು ಎಷ್ಟೋ ಮುಂದುವರಿದಿತ್ತು. ಇದಕ್ಕೆ ಬಳಸಿದ ಕಬ್ಬಿಣಕ್ಕೆ ಬೇಗ ತುಕ್ಕು ಹಿಡಿಯುತ್ತಿರಲಿಲ್ಲ. ಬಾಯಿ ಹರಿತವಾಗಿತ್ತು. ಅಲ್ಲದೆ ಇದರ ಹಿಡಿ ಉಳೆಕ್ಕೊಂಬಿನಿಂದ ಮಾಡಿದುದಾಗಿತ್ತು.”

Read More

ನಾವು ಮತ್ತು ನಮ್ಮ ಪಾತ್ರೆ ಪಗಡೆಗಳು: ಕೆ. ವಿ. ತಿರುಮಲೇಶ್ ಬರಹ

“ಹೀಗೆ ಟೊಣೆಯುವಾಗ ಒಳ್ಳೆ ಸಂಗೀತದ ಸ್ವರ ಬರಬೇಕು! ನಾನು ಕೇವಲ ‘ಸಾಕ್ಷಿ ಪ್ರಜ್ಞೆ’. ಆಮೇಲೆ ಸುರುವಾಗುವುದು ನಿಜವಾದ ಚೌಕಾಶಿ. ಅವರು ಕೊಡರು, ಇವರು ಬಿಡರು! ಆದರೆ ಮಾತ್ರ ವ್ಯಾಪಾರ ಎರಡೂ ಕಡೆಯವರಿಗೆ ಬೇಕು. ಹೊರಗಿನಿಂದ ಬರುವವರೆಲ್ಲ ನಮ್ಮನ್ನು ಸೋಲಿಸುತ್ತಾರೆ ಎನ್ನುವುದು ಅಮ್ಮನ ಭಯವಾಗಿತ್ತು. ಇದು ಬಹುಪಾಲಿಗೆ ನಿಜವಾದರೂ, ಈ ಬಡ ಕುಂಬಾರರು ಪಾಪದವರೇ ಎನ್ನುವುದು ನನ್ನ ನಂಬಿಕೆ.”

Read More

ಕೇಶವಿನ್ಯಾಸ: ಕೆ. ವಿ. ತಿರುಮಲೇಶ್ ಬರಹ

“ಆಗ ನಮ್ಮೂರಿನಲ್ಲಿ ಕ್ಷೌರದ ಅಂಗಡಿ ಇರಲಿಲ್ಲ. ಕ್ಷೌರಿಕರಿದ್ದರು. ಕ್ಷೌರ ಮಾಡಿಸಿಕೊಳ್ಳಬೇಕಾದವರು ಒಂದೋ ಕ್ಷೌರಿಕರ ‘ಕೊಟ್ಟಿಗೆ’ಗೆ ಹೋಗಬೇಕಾಗಿತ್ತು, ಇಲ್ಲವೇ ಅವರಿಗೆ ಹೇಳಿಕಳಿಸಬೇಕಾಗಿತ್ತು. ಹಳ್ಳಿಗಳಲ್ಲಿ ಕ್ಷೌರಿಕರಿಗೆ ಪಾರಂಪರ್ಯವಾಗಿ ನಿಗದಿಯಾದ ಗಡಿಗಳಿದ್ದುವು; ಆ ಗಡಿಯೊಳಗೇ ಅವರು ತಂತಮ್ಮ ಕಾರ್ಯ ನಿರ್ವಹಿಸುತ್ತಿದ್ದುದು. ಅವರು ಕೇವಲ ವೃತ್ತಿಯಿಂದಲೇ ಜೀವನ ಸಾಗಿಸುತ್ತಿದ್ದವರೂ ಅಲ್ಲ; ಅವರಿಗೆ ಅಲ್ಪ ಸ್ವಲ್ಪ ಹೊಲ ಮನೆಗಳೂ ಇದ್ದುವು. ಕ್ಷೌರಿಕರು ಹೆಚ್ಚಾಗಿ ಹಳ್ಳಿಯಲ್ಲಿ ತಮ್ಮ ಸಲಕರಣೆ ಚೀಲಗಳನ್ನು ಕಂಕುಳಲ್ಲಿರಿಸಿಕೊಂಡು ರೌಂಡ್ ಸುತ್ತುತ್ತಿದ್ದರು.”

Read More

ಫಿಯಟ್ ಲಕ್ಸ್…. ಬೆಳಕಾಗಲಿ: ಕೆ.ವಿ. ತಿರುಮಲೇಶ್ ಲೇಖನ

“ಈಗ ಈ ಚಿಮಿಣಿ ಕೈದೀಪಕ್ಕೆ ಬಂದರೆ, ಇದು ಬಹೂಪಯೋಗಿಯಾಗಿದ್ದರೂ, ಇದಕ್ಕೆ ಕೆಲವು ಮಿತಿಗಳೂ ಇದ್ದುವು. ಇದು ಗಾಳಿಗೆ ನಿಲ್ಲುವುದಿಲ್ಲವಾದ ಕಾರಣ, ಮನೆಯ ಹೊರಗೆ ಉಪಯೋಗವಿಲ್ಲ; ಮನೆಯೊಳಗೂ ಗಾಳಿ ಹೆಚ್ಚು ಬಂದರೆ ಇದು ಇದೀಗ ನಂದೀತು ಎನ್ನುವ ಆತಂಕ ಉಂಟುಮಾಡುತ್ತ ಇರುತ್ತದೆ. ಹತ್ತಿರ ಇರಿಸಿ ಪುಸ್ತಕ ಓದಲು ಪರವಾಯಿಲ್ಲ. ರಾತ್ರಿ ಊಟದ ಸಮಯ ನಾವು ಚಿಮಿಣಿಯ ತೂಗುದೀಪವನ್ನು ಉಪಯೋಗಿಸುತ್ತಿದ್ದೆವು.”

Read More

ಕೆ. ವಿ. ತಿರುಮಲೇಶ್ ಅನುವಾದಿಸಿದ ಮಿರೋಸ್ಲಾವ್ ಹೋಲುಬ್ ನ ಐದು ಕವಿತೆಗಳು

“ಇನ್ನೂ ಎಷ್ಟು ಚೆನ್ನಾಗಿರಬಹುದು ಈಲಿಯಡ್
ಅಗಮೆಮ್ನೋನ್ ಗೆ ಅವನದೇ ಚಹರೆಯಿತ್ತೆಂದು
ಸಿದ್ಧವಾದರೆ ಅಥವ ಹೆಲೆನಳ ಜೀವಶಾಸ್ತ್ರ
ಸಮಕಾಲೀನ ವಾಸ್ತವಗಳ ಪ್ರತಿಬಿಂಬಿಸಿದರೆ.”- ಕೆ. ವಿ. ತಿರುಮಲೇಶ್ ಅನುವಾದಿಸಿದ ಮಿರೋಸ್ಲಾವ್ ಹೋಲುಬ್ ನ ಐದು ಕವಿತೆಗಳು

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ