Advertisement
ಬಸವನಗೌಡ ಹೆಬ್ಬಳಗೆರೆ

ಬಸವನಗೌಡ ಹೆಬ್ಬಳಗೆರೆ  ಶಿವಮೊಗ್ಗದ ಸ.ಪ್ರೌ.ಶಾಲೆ, ಮಸಗಲ್ಲಿನಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಬಂಧ, ಲೇಖನ, ಕವನ ಹಾಗೂ ಕಥೆ ಬರೆಯುವುದು ಹಾಗೂ ಓದುವುದು ಇವರ ಹವ್ಯಾಸಗಳು. “ಬೋಳಾಯಣ” ಇವರ ಪ್ರಕಟಿತ ಹನಿಗವನ ಸಂಕಲನ.

ಕಾಣದ್ದು ಕಾಣಿಸಿದ್ದು…!: ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿಯ ಕುರಿತು ಕಲ್ಲೇಶ್ ಕುಂಬಾರ್ ಬರಹ

ಜಗತ್ತಿನ ಬಹುಮುಖ್ಯ ಕೃತಿಗಳನ್ನು ಗುರುತಿಸುವ, ಪರಿಚಯಿಸುವ, ಆ ಮೂಲಕ ಓದುಗರಿಗೆ ದಾಟಿಸುವಂಥ ಪ್ರಾಮಾಣಿಕ ಕೆಲಸವನ್ನು ಸುಭಾಷ್ ರಾಜಮಾನೆ ಅವರು ಮಾಡುತ್ತಿದ್ದಾರೆ. ಅವರ ಈ ಬರಹಗಳನ್ನು ಓದುವುದರ ಮೂಲಕ ಓದುಗನು ಸ್ವಯಂ ಮರಳಿ ಮೂಲ ಕೃತಿಗಳನ್ನು ಓದುವುದಕ್ಕೆ ಉತ್ಸುಕನಾಗುತ್ತಾನೆ ಎಂಬುದರಲ್ಲಿ ಸಂಶಯವೇ ಇಲ್ಲ! ಇನ್ನೂ ಹೇಳಬೇಕೆಂದರೆ, ಕೃತಿಕಾರ ಮರೆಯಾಗಿ ಕೃತಿಯೇ ಮುಖ್ಯವಾಗುವುದು, ಹಾಗೂ ಆ ಕೃತಿಯ ಮೂಲಕವೇ ಕೃತಿಕಾರ ಗುರುತಿಸಿಕೊಳ್ಳುವಂತಾಗುವುದು ಒಂದು ಕ್ರಿಯೆ. ಅಂಥ ಲೇಖಕ ಮತ್ತು ಆ ಲೇಖಕನ ಕೃತಿಗಳು ಶಾಶ್ವತವಾಗಿ ನಿಲ್ಲುತ್ತವೆ! ಹಾಗೆ ನಿಲ್ಲಬಹುದಾದ ಲೇಖಕರ ಕೃತಿಗಳನ್ನು ಓದುಗರಿಗೆ ಸುಭಾಷ್ ರಾಜಮಾನೆ ಅವರು ಪರಿಚಯಿಸಿದ್ದಾರೆ.
ಸುಭಾಷ್‌ ರಾಜಮಾನೆ ವಿಮರ್ಶಾ ಕೃತಿ “ಕಂಡದ್ದು ಕಾಣದ್ದು” ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ಮನುಷ್ಯ ಬದುಕಿನೊಂದಿಗೆ ಮುಖಾಮುಖಿಯಾಗುವ ಪದ್ಯಗಳು: ಕಲ್ಲೇಶ್ ಕುಂಬಾರ್ ಬರಹ

ಕವಿಯಾಗಿ ಮಾಲತಿಯವರಿಗೆ ಕತ್ತಲು ಮತ್ತು ಬೆಳಕಿನ ಕುರಿತಾಗಿ ವಿಶಿಷ್ಟವಾದ ಆಕರ್ಷಣೆಯಿದೆ ಎನ್ನಬಹುದು. ಈ ಮಾತಿಗೆ ಸಾಕ್ಷಿಯಾಗಿ ಈ ಕವನಸಂಕಲನದಲ್ಲಿ ‘ಅಜ್ಜಿ ಮತ್ತು..’ ಎಂಬ ಪದ್ಯವೊಂದಿದೆ. ಇಲ್ಲಿ, ಕತ್ತಲು–ಬೆಳಕಿನ ಆಟವನ್ನು ಕೇಂದ್ರವಾಗಿರಿಸಿಕೊಂಡು ಮನುಷ್ಯ ಬದುಕಿನ ಕ್ರಿಯೆಗಳನ್ನು ಅವರು ಶೋಧಿ‌ಸಲು ಪ್ರಯತ್ನಿಸಿದ್ದಾರೆ.‌ ಈ ಪದ್ಯದ ಶೀರ್ಷಿಕೆಯಲ್ಲಿರುವ ‘ಅಜ್ಜಿ’ ಬೇರಾರೂ ಆಗಿರದೇ ನಮ್ಮೊಳಗಿನ ಅರಿವಿನ ಕೇಡು ಕಳೆಯಲೆಂದು ನಮ್ಮ ಎದೆಯಂಗಳದಲ್ಲಿ ಮುಡಿಸಿಟ್ಟ ಅರಿವಿನ ದೀವಿಗೆಯೇ ಆಗಿದ್ದಾಳೆ!
ಮಾಲತಿ ಗೋರೆಬೈಲ್ ಬರೆದ “ಗುಬ್ಬಿ ಲಾಟೀನು” ಕವನ ಸಂಕಲನದ ಕುರಿತು ಕಲ್ಲೇಶ್‌ ಕುಂಬಾರ್‌ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಬೆಳದಿಂಗಳಂತೆ ತಾಗುವ ಕಥೆಗಳು

ಇಲ್ಲಿ, ಮಧ್ಯಮ ವರ್ಗದ ಕುಟುಂಬಗಳಲ್ಲಿನ ಹೆಣ್ಣು ಮಕ್ಕಳನ್ನು ಪ್ರತಿನಿಧಿಸುವ ಮತ್ತು ಬದುಕಿನ ಬಗ್ಗೆ ಭವ್ಯ ಕನಸುಗಳನ್ನು ಕಟ್ಟಿಕೊಂಡಿರುವ ‘ಪೂರ್ವಿ’ ಎಂಬ ಮಗುವಿನ ತಾಯಿಯಾದ ನಳಿನಿಯು, ತನ್ನ ಗಂಡ ಅರವಿಂದನ ದೇಹ ಬಯಕೆಯನ್ನು ಈಡೇರಿಸಲು ಪ್ರತಿ ರಾತ್ರಿಯೂ ಹಿಂದೇಟು ಹಾಕುವುದಕ್ಕೆ ಅವರ ಬದುಕನ್ನು ಮುತ್ತಿಕೊಂಡಿರುವ ಆರ್ಥಿಕ ಸಮಸ್ಯೆಗಳೇ ಕಾರಣವಾಗಿರುವುದು ಪರಿಸ್ಥಿತಿಯ ವ್ಯಂಗ್ಯದಂತಿದೆ. ಆದರೆ ಕಡೆಗೂ ನಳಿನಿಯು ಆತನ ದೇಹ ಬಯಕೆಯನ್ನು ಈಡೇರಿಸಲು ಮುಂದಾಗುವ ಸಂದರ್ಭದಲ್ಲಿ ಎದುರಿಸುವ ಸಂದಿಗ್ಧಗಳೇ ಆಕೆ ಗುಲ್ ಮೊಹರ್ ಹುಡುಗನ ಕರಾಳ ಬದುಕಿನೊಂದಿಗೆ ಮುಖಾಮುಖಿಯಾಗುವುದಕ್ಕೆ ಕಾರಣವಾಗುತ್ತದೆ!
ಕಥೆಗಾರ ಅನಿಲ್‌ ಗುನ್ನಾಪೂರ ಬರೆದ “ಕಲ್ಲು ಹೂವಿನ ನೆರಳು” ಕಥಾ ಸಂಕಲನದ ಕುರಿತು ಕಲ್ಲೇಶ್ ಕುಂಬಾರ್ ಬರಹ

Read More

ಗಾಳಿಗೆ ಜೋಗುಳವಾಗುವ ಕವಿತೆಗಳು

ಇಡಿಯಾಗಿ ಕವಿತೆ ನಮ್ಮೊಳಗಿನ ಅರಿವಿನ ಅನುಪಸ್ಥಿತಿಯ ಕಾರಣವಾಗಿ ಮನುಕುಲಕ್ಕೆ ಮಾರಕವಾಗಿರುವ, ಸ್ವಯಂ ನಾವೇ ಸೃಷ್ಟಿಸಿಕೊಂಡಿರುವ ಜಾತಿ, ಮತ, ಪಂಥಗಳೆಂಬ ರುಗ್ಣಗಳಿಂದ ಬಾಧೆಗೊಳಗಾಗಿರುವ ವ್ಯವಸ್ಥೆಯನ್ನು ಚಿಕಿತ್ಸಕ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತದೆ. ಇಡಿಯಾಗಿ ಕವಿತೆ ರೂಪಕಗಳ ಮೂಲಕವೇ ಓದುಗನೊಂದಿಗೆ ಮುಖಾಮುಖಿಯಾಗುತ್ತ, ನಾವೆಲ್ಲ ಕಂಡೂ ಕಾಣದಂತಿರುವ ಲೋಕದ ಅಸಹ್ಯಗಳನ್ನು ಕಾಣಿಸುತ್ತ ಹೋಗುತ್ತದೆ! ಹಾಗೆ ನೋಡಿದರೆ ಈ ಕವಿತೆಯಲ್ಲಿ ಬರುವ ‘ಫಕೀರ’ ಬೇರಾರೂ ಆಗಿರದೆ ಸಮಾಜವನ್ನು ನೈತಿಕತೆಯ ಪಾತಳಿಯ ಮೇಲೆ ಮುನ್ನಡೆಸಲು ಬೇಕಾಗಿರುವ ‘ಅರಿವು’ ಎಂಬ ಪ್ರಖರವಾದ ಬೆಳಕೇ ಆಗಿದೆ.
ದೇವು ಮಾಕೊಂಡ ಕವನ ಸಂಕಲನ ‘ಗಾಳಿಗೆ ತೊಟ್ಟಿಲು ಕಟ್ಟಿ’ ಪುಸ್ತಕದ ಕುರಿತು ಕಲ್ಲೇಶ್ ಕುಂಬಾರ್, ಹಾರೂಗೇರಿ ಬರಹ

Read More
  • 1
  • 2

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ