Advertisement
ವಸಂತಕುಮಾರ್‌ ಕಲ್ಯಾಣಿ

ವಸಂತಕುಮಾರ್‌ ಕಲ್ಯಾಣಿ ಹವ್ಯಾಸಿ ಬರಹಗಾರರು. ಕಥನ ಇವರ ಇಷ್ಟದ ಪ್ರಕಾರ. ಕನ್ನಡ ಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದವರು, ಗೋಕಾಕ್ ಚಳುವಳಿಯಲ್ಲಿ ಸಕ್ರಿಯರಾಗಿದ್ದರು, ಹಲವು ಕಿರುತೆರೆ, ಚಲನಚಿತ್ರಗಳಲ್ಲಿ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರ ಬರಹಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ 'ಬಾಲರಾಜನೂ ಕ್ರಿಕೆಟ್ಟಾಟವೂ' ಕಥೆಗೆ ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ ಪ್ರಶಸ್ತಿ ದೊರಕಿದೆ. 'ಕಾಂಚನ ಮಿಣಮಿಣ ' ಪ್ರಕಟಿತ ಸಣ್ಣಕಥಾ ಸಂಕಲನ. ‘ಪರ್ಯಾಪ್ತ’ ಕಥಾ ಸಂಕಲನ ಅಚ್ಚಿನಲ್ಲಿದೆ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಬೆಳದಿಂಗಳಂತೆ ತಾಗುವ ಕಥೆಗಳು

ಇಲ್ಲಿ, ಮಧ್ಯಮ ವರ್ಗದ ಕುಟುಂಬಗಳಲ್ಲಿನ ಹೆಣ್ಣು ಮಕ್ಕಳನ್ನು ಪ್ರತಿನಿಧಿಸುವ ಮತ್ತು ಬದುಕಿನ ಬಗ್ಗೆ ಭವ್ಯ ಕನಸುಗಳನ್ನು ಕಟ್ಟಿಕೊಂಡಿರುವ ‘ಪೂರ್ವಿ’ ಎಂಬ ಮಗುವಿನ ತಾಯಿಯಾದ ನಳಿನಿಯು, ತನ್ನ ಗಂಡ ಅರವಿಂದನ ದೇಹ ಬಯಕೆಯನ್ನು ಈಡೇರಿಸಲು ಪ್ರತಿ ರಾತ್ರಿಯೂ ಹಿಂದೇಟು ಹಾಕುವುದಕ್ಕೆ ಅವರ ಬದುಕನ್ನು ಮುತ್ತಿಕೊಂಡಿರುವ ಆರ್ಥಿಕ ಸಮಸ್ಯೆಗಳೇ ಕಾರಣವಾಗಿರುವುದು ಪರಿಸ್ಥಿತಿಯ ವ್ಯಂಗ್ಯದಂತಿದೆ. ಆದರೆ ಕಡೆಗೂ ನಳಿನಿಯು ಆತನ ದೇಹ ಬಯಕೆಯನ್ನು ಈಡೇರಿಸಲು ಮುಂದಾಗುವ ಸಂದರ್ಭದಲ್ಲಿ ಎದುರಿಸುವ ಸಂದಿಗ್ಧಗಳೇ ಆಕೆ ಗುಲ್ ಮೊಹರ್ ಹುಡುಗನ ಕರಾಳ ಬದುಕಿನೊಂದಿಗೆ ಮುಖಾಮುಖಿಯಾಗುವುದಕ್ಕೆ ಕಾರಣವಾಗುತ್ತದೆ!
ಕಥೆಗಾರ ಅನಿಲ್‌ ಗುನ್ನಾಪೂರ ಬರೆದ “ಕಲ್ಲು ಹೂವಿನ ನೆರಳು” ಕಥಾ ಸಂಕಲನದ ಕುರಿತು ಕಲ್ಲೇಶ್ ಕುಂಬಾರ್ ಬರಹ

Read More

ಗಾಳಿಗೆ ಜೋಗುಳವಾಗುವ ಕವಿತೆಗಳು

ಇಡಿಯಾಗಿ ಕವಿತೆ ನಮ್ಮೊಳಗಿನ ಅರಿವಿನ ಅನುಪಸ್ಥಿತಿಯ ಕಾರಣವಾಗಿ ಮನುಕುಲಕ್ಕೆ ಮಾರಕವಾಗಿರುವ, ಸ್ವಯಂ ನಾವೇ ಸೃಷ್ಟಿಸಿಕೊಂಡಿರುವ ಜಾತಿ, ಮತ, ಪಂಥಗಳೆಂಬ ರುಗ್ಣಗಳಿಂದ ಬಾಧೆಗೊಳಗಾಗಿರುವ ವ್ಯವಸ್ಥೆಯನ್ನು ಚಿಕಿತ್ಸಕ ದೃಷ್ಟಿಯಿಂದ ನೋಡಲು ಪ್ರಯತ್ನಿಸುತ್ತದೆ. ಇಡಿಯಾಗಿ ಕವಿತೆ ರೂಪಕಗಳ ಮೂಲಕವೇ ಓದುಗನೊಂದಿಗೆ ಮುಖಾಮುಖಿಯಾಗುತ್ತ, ನಾವೆಲ್ಲ ಕಂಡೂ ಕಾಣದಂತಿರುವ ಲೋಕದ ಅಸಹ್ಯಗಳನ್ನು ಕಾಣಿಸುತ್ತ ಹೋಗುತ್ತದೆ! ಹಾಗೆ ನೋಡಿದರೆ ಈ ಕವಿತೆಯಲ್ಲಿ ಬರುವ ‘ಫಕೀರ’ ಬೇರಾರೂ ಆಗಿರದೆ ಸಮಾಜವನ್ನು ನೈತಿಕತೆಯ ಪಾತಳಿಯ ಮೇಲೆ ಮುನ್ನಡೆಸಲು ಬೇಕಾಗಿರುವ ‘ಅರಿವು’ ಎಂಬ ಪ್ರಖರವಾದ ಬೆಳಕೇ ಆಗಿದೆ.
ದೇವು ಮಾಕೊಂಡ ಕವನ ಸಂಕಲನ ‘ಗಾಳಿಗೆ ತೊಟ್ಟಿಲು ಕಟ್ಟಿ’ ಪುಸ್ತಕದ ಕುರಿತು ಕಲ್ಲೇಶ್ ಕುಂಬಾರ್, ಹಾರೂಗೇರಿ ಬರಹ

Read More

ದೊಡ್ಡವರಿಗೂ ಸಲ್ಲುವ ಮಕ್ಕಳ ಕಥೆಗಳು

“ಒಂದರ್ಥದಲ್ಲಿ ಪಲ್ಲವಿಯವರು ಹೇಳುವಂತೆ ಭೂಮ್ತಾಯಿಯ ಒಡಲೆಲ್ಲ ಬರಿದಾಗಿ ನಿಜವಾಗಿಯೂ ರೋಗ ಪೀಡಿತ ಅಜ್ಜಿಯೇ ಆಗಿದ್ದಾಳೆ! ಅಂದರೆ, ಮನುಷ್ಯನ ದುರಾಶೆಯ ದೆಸೆಯಿಂದಾಗಿ ಭೂಮಿಯ ಅಂತ್ಯದ ದಿನಗಳು ಸನ್ನಿಹಿತವಾದವೆ ಎಂಬ ಆತಂಕ ಉಂಟಾಗುತ್ತದೆ! ಹೀಗೆ, ಈ ಕಥೆ ಮಕ್ಕಳಿಗೆ ಪರಿಸರ ಸಂರಕ್ಷಣೆಯನ್ನು ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಮನುಕುಲಕ್ಕೆ ಖಂಡಿತವಾಗಿಯೂ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಹಾಗೆಯೇ, ದೃಷ್ಟಾಂತವೊಂದರ ಮೂಲಕ ತೆರೆದುಕೊಳ್ಳುವ ‘ಎಂದೂ ಮುಗಿಯದ ಕಥೆ’ ಎಂಬ ಕಥೆ, ಮಕ್ಕಳ ಕಲ್ಪನೆಯ ಕ್ಷಿತಿಜವನ್ನು ವಿಸ್ತರಿಸುವ ನಿಟ್ಟಿನಲ್ಲಿದೆ.”

Read More

ಲಕ್ಷ್ಮಣ ಬಾದಾಮಿ ಅವರ ಕಥಾಸಂಕಲನ ಕುರಿತು ಕಲ್ಲೇಶ್ ಕುಂಬಾರ್ ಬರಹ

“ಈ ಸಂಕಲನದ ಶೀರ್ಷಿಕೆಯೂ ಆಗಿರುವ ‘ಒಂದು ಚಿಟಿಕೆ ಮಣ್ಣು’ ಕಥೆ, ಇಡಿಯಾಗಿ ಭೂಮಿಯನ್ನು ಕಾಂಕ್ರೀಟ್ ಕಾಡಾಗಿಸುವುದರ ಮೂಲಕ ಅದರ ಸ್ವರೂಪವನ್ನು ವಿಕಾರಗೊಳಿಸುತ್ತಿರುವ ಮನುಷ್ಯನ ಸ್ವಾರ್ಥ ಮನೋಸ್ಥಿತಿಯ ಮೇಲೆ ಬೆಳಕು ಚೆಲ್ಲುತ್ತದೆ. ಕಥೆಯಲ್ಲಿ ಬರುವ ಕಲ್ಲಪ್ಪನಿಗಿರುವ ಮಣ್ಣು ತಿನ್ನುವ ಹವ್ಯಾಸದ ಮೂಲಕ ಅನ್ನ ಬೆಳೆಯುವ ಭೂಮಿಯ ಮಹತ್ವವನ್ನು ಕಥೆಗಾರ ಸಾರುತ್ತಾನೆ. ಇಂಚಿಂಚೂ..”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ…

Read More

ಬರಹ ಭಂಡಾರ