Advertisement
ಡಾ. ಅಜಿತ್ ಹರೀಶಿ

ಡಾ. ಅಜಿತ್ ಹರೀಶಿ ಪ್ರಸ್ತುತ ಹರೀಶಿಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಳಿಮಲ್ಲಿಗೆಯ ಬಾವುಟ, ಸೂರು ಸೆರೆಹಿಡಿಯದ ಹನಿಗಳು, ಕನಸಿನ ದನಿ ಪ್ರಕಟಿತ ಕವನ ಸಂಕಲನಗಳು; ಪರಿಧಾವಿ, ಕಾಮೋಲ ಮತ್ತು ಮೂಚಿಮ್ಮ ಪ್ರಕಟಿತ ಕಥಾಸಂಕಲನಗಳು. ಆರೋಗ್ಯದ ಅರಿವು (ವೈದ್ಯಕೀಯ ಸಾಹಿತ್ಯ) ಕೃತಿಕರ್ಷ (ವಿಮರ್ಶಾ ಕೃತಿ) ಕಥಾಭರಣ (ಸಂಪಾದಿತ ಕಥಾಸಂಕಲನ) ಪ್ರಕಟಗೊಂಡಿವೆ. ಇವರ ಕನಸಿನ ದನಿ ಕವನ ಸಂಕಲನಕ್ಕೆ ಕಸಾಪ ದತ್ತಿ ಪ್ರಶಸ್ತಿ ದೊರೆತಿದೆ.

ಇಲ್ಲಿ ಸೋಲೂ ಇದೆ, ಗೆಲುವೂ ಇದೆ…: ಕಾರ್ತಿಕ್ ಕೃಷ್ಣ ಸರಣಿ

ಅಂಕಗಳು ಸೋರಿಹೋಗುತ್ತಿದ್ದರೂ ಎದೆಗುಂದದೆ ಆಡುತ್ತಿದ್ದ ಮೆರಿನ್ ಕೆಲವೇ ಘಳಿಗೆಯಲ್ಲಿ ನೋವನ್ನು ತಾಳಲಾರದೆ ಮತ್ತೆ ಕುಸಿದಳು. ಈ ಬಾರಿ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಅವಳ ನೋವಿಗೆ ಇಡೀ ಕ್ರೀಡಾಂಗಣ ಮರುಗುತ್ತಿತ್ತು. ಕುಸಿದಲ್ಲೇ ಅಳುತ್ತಿದ್ದ ಮೆರಿನ್‌ಳನ್ನು ತಬ್ಬಿ ಸಮಾಧಾನ ಮಾಡುತ್ತಿದ್ದ ಅವಳ ಕೋಚ್‌ಗೂ ಕೂಡ ತನ್ನ ಕಣ್ಣೀರನ್ನು ತಡೆಹಿಡಿಯಲಾಗಿರಲಿಲ್ಲ. ಎದುರಾಳಿ ಹೇ ಗೆ ತಾನು ಫೈನಲ್ ತಲುಪಿದ್ದಕ್ಕೆ ಖುಷಿಪಡುವುದೋ, ಅಥವಾ ಮೆರಿನ್‌ಳ ಸ್ಥಿತಿಯನ್ನು ನೋಡಿ ಮರುಗುವುದೋ, ಒಂದೂ ತಿಳಿಯದೆ ಮೆರೀನಳ ಬಳಿ ಬಂದು ವಿಷಾದದ ನೋಟ ಬೀರುತ್ತಾ ನಿಂತಿದ್ದಳು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಕಾರ್ತಿಕ್ ಕೃಷ್ಣ ಬರೆದ ಈ ದಿನದ ಕವಿತೆ

“ಇನ್ನೂ ಕೊಂಚ ಸುರಿಯಲಿ ಬಿಡು,
ಮಣ್ಣಿನ ಕೆಂಪು ಹರಡಲಿ ಬಿಡು,
ಇನ್ನೇನು ಬಾಡುವ ದಾಸವಾಳಕೆ
ಸಿಹಿಮುತ್ತಿನ ವಿದಾಯವ ಹೇಳಲು ಬಿಡು!”-ಕಾರ್ತಿಕ್ ಕೃಷ್ಣ ಬರೆದ ಈ ದಿನದ ಕವಿತೆ

Read More

ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ

ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್‌ನ ಆ ಘಟನೆ, ರೆಡ್ಮಂಡ್‌ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಛಲದ ಮುಂದೆ ನ್ಯೂನತೆಗಳು ನಿಲ್ಲೋಲ್ಲ: ಕಾರ್ತಿಕ್ ಕೃಷ್ಣ ಸರಣಿ

ನನಗೆ ಎಲ್ಲಕ್ಕಿಂತ ಇಷ್ಟವಾದದ್ದು ಲೈಲ್ಸ್‌ನ ಖತರ್ನಾಕ್ ಎಂಟ್ರಿ. ಅವನು ಟ್ರ್ಯಾಕ್‌ಗೆ ಬರುವ ಕಾನ್ಫಿಡೆನ್ಸನ್ನು ನೀವೊಮ್ಮೆ ನೋಡಬೇಕು. ಆ ಕಾಂಫಿಡೆನ್ಸಿನಿಂದಲೇ ಅವನು ಅರ್ಧ ಪಂದ್ಯವನ್ನು ಗೆಲ್ಲುತ್ತಾನೆ ಎಂದು ನನಗನ್ನಿಸುತ್ತದೆ. ಹೆಸರು ಕೂಗಿದೊಡನೆ ವೇಗವಾಗಿ ಓಡಿ ಬಂದು, ಕುದುರೆಯಂತೆ ನೆಗೆದು ಇಡೀ ಪ್ರಪಂಚದ ಗಮನವನ್ನು ತನ್ನತ್ತ ಸೆಳೆಯುವ ಅವನ ಆತ್ಮವಿಶ್ವಾಸ ಎಂತವರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ನೂತನ ಒಲಿಂಪಿಕ್ ಚಾಂಪಿಯನ್ ನೋಅ ಲೈಲ್ಸ್ ನಮ್ಮ ಆತ್ಮವಿಶ್ವಾಸವನ್ನೂ ಒಂದಷ್ಟು ಹೆಚ್ಚಿಸಲಿ ಅಲ್ಲವೇ?
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಗೋ ಮಾಂಡೋ…. ಗೋ…!!: ಕಾರ್ತಿಕ್‌ ಕೃಷ್ಣ ಸರಣಿ

ಮೊದಲ ಪ್ರಯತ್ನ…. ಕೋಲನ್ನು ಹಿಡಿದು ಅಷ್ಟು ದೂರದಿಂದ ಓಡುತ್ತಾ ಬಂದ ಡೂಪ್ಲ್ಯಾಂಟೀಸ್‌ನನ್ನು ಎರಡನೇ ಸ್ಥಾನದಲ್ಲಿದ್ದ ಅಮೆರಿಕಾದ ಕೆಂಡ್ರಿಕ್ಸ್ ಹುರಿದುಂಬಿಸುತ್ತಿದ್ದ… ಪ್ರೋತ್ಸಾಹಿಸುತ್ತಿದ್ದ… ಎಲ್ಲರದ್ದೂ ಒಂದೇ ಚೀತ್ಕಾರ… “ಗೋ ಮಾಂಡೋ… ಗೋ..” ಮಾಂಡೋ… ಕೋಲನ್ನು ಬಾಕ್ಸ್‌ಗೆ ನೆಟ್ಟು ಗಾಳಿಯಲ್ಲಿ ಗಿರಕಿ ಹೊಡೆದು, ಅಡ್ಡ ಕೋಲನ್ನು ದಾಟಿ, ಇನ್ನೇನು ಕೈಯನ್ನು ಮೇಲೆತ್ತಬೇಕು.. ಮಾಂಡೋನೊಡನೆ ಅಡ್ಡ ಕೋಲೂ ಕೆಳಗುರುಳಿತ್ತು… ನಿಶ್ಯಬ್ದ… ಲಯಬದ್ಧವಾಗಿ ಚೀರುತ್ತಿದ್ದವರೆಲ್ಲಾ ‘ಓ….’ ಎಂದು ನಿಟ್ಟುಸಿರುಬಿಟ್ಟಿದ್ದರು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More
  • 1
  • 2

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ