ಬದುಕಿನ ನಾಟಕ ನೋಡಿ…: ಜುಲೇಖಾ ಬೇಗಂ ಜೀವನ ವೃತ್ತಾಂತ
ಈ ಗಂಡಾಂತರವೊಂದು ಕಳೆಯುತ್ತಿದ್ದಂತೆ ನನ್ನನ್ನು ಬೇರೆ ಕಂಪೆನಿಗೆ ಸದ್ದಿಲ್ಲದೆ ಕರೆದೊಯ್ದಿದ್ದರು. ಲಕ್ಷ್ಮೀಬಾಯಿಯವರ ಗಂಡ ವೆಂಕಟ ರೆಡ್ಡಿ ಅವರ ಜೊತೆ ನಂಜಪ್ಪ, ಜಕ್ಲಿ ಈಶ್ವರ ಎಲ್ಲ ಸೇರಿಕೊಂಡು ಬೇರೆ ಕಂಪೆನಿಗೆ ಹೋಗೋಣ ಎಂದು ಸೂರ್ಯಬಾನುಗೆ ಕರೆದುಕೊಂಡು ಹೋದರು. ಹೋದದ್ದೇ, ಇನ್ನು ಐದೇ ದಿನಗಳಲ್ಲಿ ನಾಟಕ ಶುರು ಮಾಡುತ್ತೇವೆ ಎಂದರು. ಇನ್ನೂ ಐದು ದಿನಗಳು! ಹಾಗಿದ್ದರೆ ಊರಿಗೆ ಹೋಗಿ ಬರಬಹುದಲ್ಲಾ ಎನಿಸಿತು. ತಕ್ಷಣ ಮಾಲೀಕರಲ್ಲಿ ಹೋಗಿ ಕೇಳಿದೆ. ಊರಿಗೆ ಹೋಗಿಬರಬೇಕಿದೆ. ನಾಟಕ ಶುರುವಾಗುವುದರೊಳಗೆ ಇಲ್ಲಿಗೆ ಬಂದು ಸೇರುವಂತೆ ನೋಡಿಕೊಳ್ಳುವ ಹೊಣೆ ನನ್ನದು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

