ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ…: ಜುಲೇಖಾ ಬೇಗಂ ಜೀವನ ವೃತ್ತಾಂತ
ನನ್ನ ಬೆಳವಣಿಗೆಯನ್ನು ಅವಳಿಗಿಂತ ಚೆನ್ನಾಗಿ ಗುರುತಿಸಬಲ್ಲ ಬೇರಾರೂ ಇರಲಿಲ್ಲ. ನಾನು ಕಲಾವಿದೆಯಾಗಬೇಕೆಂದೇ ಅವಳ ಒತ್ತಾಯವೂ ಇತ್ತು. ಒಬ್ಬರಿಗಿಂತ ಇಬ್ಬರು ಲೇಸೆಂಬ ಮಾತು ನನಗೆ ಹೊಂದಿದ್ದೇ ಈಗ! ‘ಐದು ವರ್ಷದ ಹಿಂದೆಯೇ ನೀನು ಪಾತ್ರದಲ್ಲಿ ಕಳೆದುಹೋಗುತ್ತಿದ್ದೆ. ಇನ್ನು ಇಷ್ಟೆಲ್ಲ ಕಷ್ಟಪಟ್ಟು, ನಾಟಕಗಳಲ್ಲಿ ಅಭಿನಯಿಸಿ ಅನುಭವ ಪಡ್ಕೊಂಡಿದ್ದೀಯಾ. ದೊಡ್ಡ ಮಟ್ಟಕ್ಕೆ ಬೆಳೀಬೇಕು ಕಣೆ’ ಎಂದು ಬೆಂಬಲವಾಗಿ ನಿಂತು, ‘ನೀನು ಮಾಂಡ್ರೆಯಂತಹ ದೊಡ್ಡ ಕವಿಗಳ ಜೊತೆಯಲ್ಲಿ ಪಳಗಬೇಕು. ಕಲಿಯೋಕೆ ಸಾಕಷ್ಟಿರುತ್ತೆ’ ಅಂತಲೂ ದಾರಿ ತೋರಿದಳು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”
