Advertisement

ಕೆ. ಸತ್ಯನಾರಾಯಣ

ಹೆಣ್ಣಿನ ನೋವಿಗೂ ಬಣ್ಣವೇ ಮುಲಾಮು: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಟ್ಟೆ ಜಾರಿತೋ ಅಥವಾ ನಾನೇ ಕದಲಿಸಿದೆನೋ ಮಾಂಸವೆಲ್ಲ ತುಂಡುತುಂಡಾಗಿ ಹರಿದುಬಂತು. ಗರ್ಭದಲ್ಲಿ ಭ್ರೂಣದ ಮಾಂಸ ಉಳಿದಿತ್ತೋ ಏನೊ, ‘ನನ್ನನ್ನು ಬೇಡವೆನ್ನುವ ಮೊದಲು ನನ್ನ ಹೇಳಿ-ಕೇಳಿ ಮಾಡಿದ್ದೀಯಾ? ಇಲ್ಲ ತಾನೆ, ಮತ್ತೆ ನಾನೇಕೆ ನಿನ್ನ ಒಪ್ಪಿಗೆ ಕೇಳಲಿ?’ ಎಂಬಂತಿತ್ತು ಆ ಸನ್ನಿವೇಶ. ಹಾರಿದ ಜಾಗದ ಸುತ್ತಲೂ ಮಾಂಸ ಚೂರಾಗಿ ಚೆಲ್ಲಿಬಿದ್ದಿತ್ತು. ಏನೂ ಮಾಡಲಾರದೆ, ತೊಟ್ಟ ಬಟ್ಟೆಯನ್ನೆಲ್ಲ ಹರಡಿ ಅಲ್ಲಿಯೇ ಸುಮ್ಮನೆ ಕುಳಿತೆ. ನೇಪಥ್ಯದಲ್ಲಿ ಪರದೆ ಎಳೆಯುವವರಿಗೂ ಏನಾಗುತ್ತಿದೆ ಎಂದು ಗೊತ್ತಾಗಿತ್ತು. ಬೆಳಕನ್ನು ಆರಿಸಿ, ಪರದೆಯನ್ನು ಎಳೆದೇಬಿಟ್ಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹದಿನೈದನೆಯ ಕಂತು

Read More

ಅಲ್ಲಿಂದಿಲ್ಲಿಗೆ, ಇಲ್ಲಿಂದಲ್ಲಿಗೆ…: ಜುಲೇಖಾ ಬೇಗಂ ಜೀವನ ವೃತ್ತಾಂತ

ನನ್ನ ಬೆಳವಣಿಗೆಯನ್ನು ಅವಳಿಗಿಂತ ಚೆನ್ನಾಗಿ ಗುರುತಿಸಬಲ್ಲ ಬೇರಾರೂ ಇರಲಿಲ್ಲ. ನಾನು ಕಲಾವಿದೆಯಾಗಬೇಕೆಂದೇ ಅವಳ ಒತ್ತಾಯವೂ ಇತ್ತು. ಒಬ್ಬರಿಗಿಂತ ಇಬ್ಬರು ಲೇಸೆಂಬ ಮಾತು ನನಗೆ ಹೊಂದಿದ್ದೇ ಈಗ! ‘ಐದು ವರ್ಷದ ಹಿಂದೆಯೇ ನೀನು ಪಾತ್ರದಲ್ಲಿ ಕಳೆದುಹೋಗುತ್ತಿದ್ದೆ. ಇನ್ನು ಇಷ್ಟೆಲ್ಲ ಕಷ್ಟಪಟ್ಟು, ನಾಟಕಗಳಲ್ಲಿ ಅಭಿನಯಿಸಿ ಅನುಭವ ಪಡ್ಕೊಂಡಿದ್ದೀಯಾ. ದೊಡ್ಡ ಮಟ್ಟಕ್ಕೆ ಬೆಳೀಬೇಕು ಕಣೆ’ ಎಂದು ಬೆಂಬಲವಾಗಿ ನಿಂತು, ‘ನೀನು ಮಾಂಡ್ರೆಯಂತಹ ದೊಡ್ಡ ಕವಿಗಳ ಜೊತೆಯಲ್ಲಿ ಪಳಗಬೇಕು. ಕಲಿಯೋಕೆ ಸಾಕಷ್ಟಿರುತ್ತೆ’ ಅಂತಲೂ ದಾರಿ ತೋರಿದಳು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಹಾರಿಹೋದ ಪ್ರಾಣಪಕ್ಷಿ!: ಜುಲೇಖಾ ಬೇಗಂ ಜೀವನ ವೃತ್ತಾಂತ

ಆವತ್ತು ಸೋಮವಾರ. ಮುರುಡಯ್ಯನವರು ಸ್ನಾನ ಮುಗಿಸಿಕೊಂಡು ಕಾಲುದಾರಿಯನ್ನು ಹತ್ತಿ ಮೇಲೆ ಬರುತ್ತಿದ್ದರು. ‘ಅಂಕದ ಪರದೆ ಜಾರಿದ ಮೇಲೆ, ನಾಟಕವಿನ್ನು ಉಳಿದಿಹುದೇ?’ ಎಂದು ಹಾಡುತ್ತಾ ಮುರುಡಯ್ಯನವರು ಹೆಬ್ಬೆಟ್ಟು ಎಡವಿ ಧೊಪ್ಪೆಂದು ಕೆಳಗೆ ಬಿದ್ದಿದ್ದರು. ಅದನ್ನು ನೋಡಿದ ಕಂಪೆನಿಯ ಕೆಲವರು ಎತ್ತುವುದಕ್ಕೆಂದು ಮುಂದಾದರು. ಆಗ ಮುರುಡಯ್ಯನವರು ಏನೂ ಇಲ್ಲವೆಂಬಂತೆ ತಲೆಯಾಡಿಸುತ್ತಾ, ‘ವಹಿಸಿದ ಪಾತ್ರ ತೀರಿದ ಮೇಲೆ’ ಎಂದಿದ್ದಷ್ಟೇ, ಪ್ರಾಣಪಕ್ಷಿ ಹಾರಿಹೋಗಿತ್ತು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ

Read More

ಅಂದುಕೊಂಡಿದ್ದು ಆಗೇಹೋಯಿತು!: ಜುಲೇಖಾ ಬೇಗಂ ಜೀವನ ವೃತ್ತಾಂತ

ಜುಬೇದಾಬಾಯಿ ಅವರನ್ನು ಮಾಕನೂರು ಭರಮಣ್ಣ ಅವರು ಅಪಹರಿಸಲು ಸಾಧ್ಯವಿರಲಿಲ್ಲ. ಅವರು ಪಾತ್ರಕ್ಕಾಗಿ ಹುಡುಕಾಡುತ್ತಿದ್ದರು; ನಾನೂ ಕಾಯುತ್ತಿದ್ದೆ. ರೋಗಿ ಬಯಸುವುದಕ್ಕೂ ವೈದ್ಯ ಹೇಳುವುದಕ್ಕೂ ಸರಿ ಹೋದರೆ ಇನ್ನೇನು? ಖುಷಿಯಿಂದ ಕುಪ್ಪಳಿಸಿದೆ. ಎರಡು ನಿಮಿಷ ಭೂಮಿಕೆಯಲ್ಲಿ ಇರುತ್ತಿದ್ದೆನೊ ಇಲ್ಲವೊ, ಆದರೆ ಆನಂದಿಸಿದೆ. ಮಾತಿಲ್ಲದ ಮುಖ್ಯ ಪಾತ್ರ ನನಗೆ ಸಿಕ್ಕಿತಲ್ಲಾ ಎಂಬ ಸಂಭ್ರಮ. ಉಳಿದವರೆಲ್ಲ, ‘ನಿಂಗೆ ಕೊಂಬು ಬರಬಾರದವ್ವಾ’ ಎಂದು ಛೇಡಿಸುತ್ತಾ, ನಗಿಸುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೆರಡನೆಯ ಕಂತು

Read More

ಕನಸು, ಕನವರಿಕೆ: ಜುಲೇಖಾ ಬೇಗಂ ಜೀವನ ವೃತ್ತಾಂತ

ನಾನು ಬಹುವಾಗಿ ಇಷ್ಟಪಡುತ್ತಿದ್ದ ಜುಬೇದಾಬಾಯಿ, ನನ್ನನ್ನು ಕಂಡೊಡನೆ ‘ಎಷ್ಟು ಕ್ಯೂಟ್ ಅಯ್ತಲ್ಲ ಈ ಹುಡ್ಗಿ!’ ಎಂದು ಕೆನ್ನೆಗಿಂಡಿ, ಮುತ್ತಿಟ್ಟರು. ಕಳೆದುಹೋದೆ; ಆಕಾಶಕ್ಕೇರಿಬಿಟ್ಟೆ. ಆವತ್ತಿಡೀ ಕೆಳಗಿಳಿದಿದ್ದರೆ ಕೇಳಿ. ಹೇಮರೆಡ್ಡಿ ಮಲ್ಲಮ್ಮ ನಾಟಕವೆಂದರೆ ನನಗೂ ಉತ್ಸಾಹ ಹೆಚ್ಚಿರುತ್ತಿತ್ತು. ಏಕೆಂದರೆ ಅದೊಂದೇ ನಾಟಕದಲ್ಲಿ ನನಗೆ ವೇದಿಕೆಯೇರುವ ಅವಕಾಶ ಸಿಗುತ್ತಿದ್ದದ್ದು. ಮದುವೆ, ಉಡಿ ತುಂಬುವ ಗುಂಪು ದೃಶ್ಯಗಳಲ್ಲಿ ನಾನೂ ಇರುತ್ತಿದ್ದೆ. ಗುಂಪೋ ಪ್ರತ್ಯೇಕವೋ, ಜನ ನನ್ನ ನೋಡಿ ಗುರುತಿಸುತ್ತಾರೋ ಇಲ್ಲವೋ, ನನಗೆ ಇವೆಲ್ಲವೂ ಗೌಣ.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಹನ್ನೊಂದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ