Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ದೀಪಕ್ ಬೈಪುರಾ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ದೀಪಕ್ ಬೈಪುರಾ. ಸುತ್ತಾಟ ಮತ್ತು ಛಾಯಾಗ್ರಹಣ ದೀಪಕ್ ಅವರ ಹವ್ಯಾಸಗಳು.  ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

“ಆ ದೇವಸ್ಥಾನ
ಈ ಮಸೀದಿಯ ಹೊರಗೆ
ಅಸ್ಪೃಶ್ಯತೆಯ ಸೋಂಕಲಿ
ಕಪ್ಪಗೆ ಕರಗಿ ಹೋಗುತ್ತಿರುವ ಕೈಗಳ
ಬೆವರ ಕಮಟು ಕವಿತೆಯಲ್ಲವೇ”- ನೂರುಲ್ಲಾ ತ್ಯಾಮಗೊಂಡ್ಲು ಬರೆದ ಈ ದಿನದ ಕವಿತೆ

Read More

ವಿಪಿನ್‌ ಬಾಳಿಗಾ ತೆಗೆದ ಈ ದಿನದ ಚಿತ್ರ

ಈ ದಿನದ ಚಿತ್ರ ತೆಗೆದವರು ವಿಪಿನ್ ಬಾಳಿಗಾ. ನ್ಯಾಚುರಲಿಸ್ಟ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿಪಿನ್ ಅವರಿಗೆ ಪರಿಸರ ಸಂರಕ್ಷಣೆ ಇಷ್ಟದ ವಿಷಯ. ಉಭಯಚರ ಪ್ರಾಣಿಗಳು ಹಾಗೂ ಕೀಟಗಳ ಛಾಯಾಗ್ರಹಣದಲ್ಲಿ ಆಸಕ್ತಿ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.

ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

ಹಿಂದೆ ಅವನು ಜಬರದಸ್ತಿಯಲ್ಲ ಇಸಿದುಕೊಂಡಿದ್ದ ಇನ್ನೂರು ರೂಪಾಯಿಗಳನ್ನು ಜ್ಞಾಪಿಸಿ, ಈಗ ಬಂದಿರುವುದು ಎಪ್ಪತ್ತೈದೆಂದು ಹೇಳಿ, ಇದು ಜಾತ ಒಂದುನೂರ ಇಪ್ಪತ್ತೈದು ನಿನ್ನಿಂದ ಬರಬೇಕೆಂದು ಕ್ಲೇಮು ಮಾಡಿದೆ. ಕೊಡುವನೇನೊ ಎಂಬ ದೂರದ ನಿರೀಕ್ಷೆಯಲ್ಲಿ. ಆದರೆ ಅವನು ಹೂಡಿದ ತರ್ಕವೆ ಆ ನಿರೀಕ್ಷೆಗೆ ಮಣ್ಣು ಹಾಕಿತು. ‘ಕ್ಯಾಸ್ಟು ಸರ್ಟಿಪೇಟುಕೇ ಇನ್ನೂರಾಗದೆ. ಅದನ್ಯಾರು ಕೊಡೋರು’ ಅಂದ.
ʼನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಸ. ರಘುನಾಥ ಬರೆದ ಕತೆ

Read More

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು ಹಾಗೆ ಚಿತ್ರಿಸಲು ಪ್ರಯತ್ನಿಸುವುದು, ಚಂದಮಾಮ ಪತ್ರಿಕೆಯ ಚಿತ್ರಗಳನ್ನು ಚಿತ್ರಿಸುವುದು, ಪತ್ರಿಕೆಗಳಲ್ಲಿ ಬರುವ ಗಾಂಧಿ, ಶ್ರವಣಬೆಳಗೊಳದ ಬಾಹುಬಲಿ ಮೊದಲಾದ ಚಿತ್ರಗಳನ್ನು ನೋಡಿ ನಕಲು ಮಾಡಿ ಚಿತ್ರಿಸುವುದರ ಮೂಲಕ ನಡೆದಬಂದರು. ಕೆ. ವಿ. ಸುಬ್ರಹ್ಮಣ್ಯಂರವರಿಗೆ ಈ ಆಸಕ್ತಿ 7-8ನೇ ತರಗತಿಗಳಲ್ಲಿ ಶುರುವಾಗಿತ್ತು.
ಕಲಾ ವಿಮರ್ಶಕ ಕೆ.ವಿ. ಸುಬ್ರಮಣ್ಯಂ ಅವರ ಕುರಿತು ಹರಿಶ್ರೀ ವೈ.ಜೆ. ಬರೆದ “ಚಿತ್ರಾಕ್ಷರ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ