Advertisement

ವಿನಾಯಕ ಅರಳಸುರಳಿ

ಗಡಂಗು ಹೋಗಿ ಶರಾಬು ಬಂತೂ….

ತಮ್ಮ ಹೊಸ ಗಡಂಗನ್ನು ಜನಪ್ರಿಯಗೊಳಿಸುವ ನಿಟ್ಟಿನಲ್ಲಿ ಯಾದವ ಶೆಟ್ಟರ ಎರಡು ಪ್ರಯತ್ನಗಳು ಇತಿಹಾಸದಲ್ಲಿ ದಾಖಲಾಗತಕ್ಕವೇ ಆಗಿವೆ. ಅವುಗಳಲ್ಲಿ ಮೊದಲನೆಯದು, ಒಂದು ನಿಗದಿತ ದಿನ ತಮ್ಮ ಗಡಂಗಿಗೆ ಯಾರೇ ಬಂದರೂ ಶರಾಬು ಕುಡಿಯುವವರಿಗೆ ಅವರು ಕುಡಿಯುವಷ್ಟು ಶರಾಬನ್ನು ಉಚಿತವಾಗಿ ಕೊಡಲಾಗುವುದೆಂದು ಯಾದವ ಶೆಟ್ಟಿಯವರು ಘೋಷಿಸಿದ್ದು. ಅದೊಂದು ಸ್ಮರಣೀಯ ಮದ್ಯಪಾನೋತ್ಸವವಾಗಿತ್ತು. ಶರಾಬು ಸಮಾರಾಧನೆಯ ದಿನ ಬೆಳಗಿನಿಂದಲೇ ಶರಾಬು ಅಂಗಡಿಗೆ ನುಗ್ಗಲಾರಂಭಿಸಿದ ಊರಿನ ಶರಾಬು ಪ್ರಿಯರು ಬಹಳ ಬೇಗನೇ ‘ಟೈಟ್’ ಆದರು (ಮತ್ತೇರಿಸಿಕೊಂಡರು). ಆಮೇಲೆ ಪರಸ್ಪರ ಬೈದಾಡುತ್ತಾ, ದೂಡಿಕೊಳ್ಳುತ್ತಾ, ಬಡಿದಾಡುತ್ತಾ ಮನಸ್ಸಿನಲ್ಲಿದ್ದ ಕಲ್ಮಶಗಳನ್ನೆಲ್ಲ ಹೊರಗೆ ಹಾಕುತ್ತಾ ಮೆರೆದಾಡಿದರು.
ಬಿ. ಜನಾರ್ದನ ಭಟ್ ಹೊಸ ಕಾದಂಬರಿ “ಗಮ್ಯ”ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಮೀನು ಕುಡಿದ ಕಡಲಿನ ವಿಷಯ

ಲೋಕವನ್ನು ಕವಿತೆಯ ಮೂಲಕ ಅಸಾಮಾನ್ಯವಾಗಿ ಮರು ರೂಪಿಸುವ ಸೂರ್ಯಕೀರ್ತಿಯವರು, ಅದೇ ಹೊತ್ತಲ್ಲಿ ಸಾಂಪ್ರದಾಯಕ ಸಂಕೇತಗಳನ್ನು ನಿರ್ದಯವಾಗಿ ನಾಶಗೊಳಿಸುತ್ತಾರೆ. ಅವರು ಕಾಣುವ ಹಸಿವಿನ ಅನ್ನದ ಮುಂದೆ ಶಿವನ ಧ್ಯಾನ, ಮುದ್ರಿಕೆ, ನಾಥ ಪಟ್ಟಗಳೂ ಶೂನ್ಯವಾಗುತ್ತವೆ. ದೈವ ಕಲ್ಪನೆಯೇ ವ್ಯರ್ಥವಾಗುತ್ತದೆ. ಗಾಂಧಿಯ ಕನ್ನಡಕವು ಕೂಡಾ ಪಾಚಿಗಟ್ಟಿದ ಕಣ್ಣುಗಳಲ್ಲಿ ಮರೆಯಾಗುತ್ತದೆ. ಬಾಗಿಲ ಸಂದುಗೊಂದುಗಳಲ್ಲಿ ಚಂದ್ರಮತಿಯರು ನಡುಗುತ್ತಾರೆ, ಜನ್ನನ ಸುನಂದೆ, ಅಮೃತಮತಿಯರು ಪಿಸುಗುಡುತ್ತಾ ನರಳುತ್ತಾರೆ.
ಸೂರ್ಯಕೀರ್ತಿ ಬರೆದ “ಮೀನು ಕುಡಿದ ಕಡಲು” ಕವನ ಸಂಕಲನಕ್ಕೆ ಪ್ರೊ. ಪುರುಷೋತ್ತಮ ಬಿಳಿಮಲೆ ಬರೆದ ಮಾತುಗಳು

Read More

ಎಸ್. ಗಂಗಾಧರಯ್ಯ ಅನುವಾದಿಸಿದ ಹೆಮಿಂಗ್ವೆ ಕಥೆ “ಕನೇರಿ”

ಕನೇರಿ ತನ್ನ ಪುಕ್ಕಗಳನ್ನೊಮ್ಮೆ ಕೊಡವಿತು. ನಂತರ ಅವುಗಳನ್ನು ಕುಕ್ಕತೊಡಗಿತು. `ನಂಗೆ ಯಾವಾಗಲೂ ಹಕ್ಕಿಗಳೆಂದರೆ ಪಂಚ ಪ್ರಾಣ. ನಾನು ಈ ಕನೇರಿ ಹಕ್ಕೀನಾ ನನ್ನ ಪುಟ್ಟ ಮಗಳಿಗಾಗಿ ತಗಂಡು ಹೋಗ್ತಿದೀನಿ. ಹಾ, ಅಲ್ಲಿ ನೋಡಿ. ಅವನು ಈಗ ಹಾಡ್ತಾ ಇದಾನೆ,’ ಅಂದಳು ಅಮೇರಿಕನ್ ಹೆಂಗಸು. ಕನೇರಿ ಚಿಲಿಪಿಲಿಗುಟ್ಟತೊಡಗಿತು. ಅದರ ಗಂಟಲ ಮೇಲಿನ ಪುಕ್ಕಗಳು ನಿಮಿರಿ ನಿಂತವು. ನಂತರ ಅದು ತನ್ನ ಕೊಕ್ಕನ್ನು ಕೆಳಕ್ಕಾಕಿಕೊಂಡು ಪುಕ್ಕಗಳನ್ನು ಹೆಕ್ಕತೊಡಗಿತು.
ನೊಬೆಲ್‌ ಪ್ರಶಸ್ತಿ ಪುರಸ್ಕೃತ ಅರ್ನೆಸ್ಟ್‌ ಹೆಮಿಂಗ್ವೆಯ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದಿದ್ದು, ಈ ಸಂಕಲನದ ಒಂದು ಕಥೆ “ಕನೇರಿ” ನಿಮ್ಮ ಓದಿಗೆ

Read More

‘ಮುಖ್ಯಮಂತ್ರಿ’ಯ ಬದುಕಿನ ಪುಟಗಳು….

ಆಗ ಮುಖ್ಯಮಂತ್ರಿ ಪಾತ್ರದ ಕುರಿತು ಚರ್ಚೆ ಶುರುವಾಗಿ, ರಾಜಾರಾಂ ಅವರನ್ನು ಮುಖ್ಯಮಂತ್ರಿ ಪಾತ್ರ ಮಾಡಲು ಒತ್ತಾಯಿಸಿದಾಗ ಅವರು ಒಪ್ಪಲಿಲ್ಲ. ಬೇರೆ ತಂಡಗಳ ಪ್ರಮುಖ ಕಲಾವಿದರ ಕುರಿತು ಚರ್ಚಿಸಿದರೂ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ನನ್ನ ತಲೆಗೇ ಬಂತು. ನಾಟಕ ಕೆಟ್ಟರೂ ಚಿಂತೆಯಿಲ್ಲ, ಪ್ರದರ್ಶನ ನಿಲ್ಲಿಸುವುದು ಬೇಡವೆಂದಾಯಿತು. ಭಂಡ ಧೈರ್ಯ ನನಗಿದ್ದುದರಿಂದ ಒಪ್ಪಿದೆ. ಆದರೆ ನಿರ್ದೇಶನಕ್ಕೆ ಒಪ್ಪಲಿಲ್ಲ. ರಾಜಾರಾಂ ಅವರು ಇಬ್ಬರೂ ಸೇರಿ ನಿರ್ದೇಶಿಸೋಣವೆಂದರೂ ಬೇಡವೆಂದೆ. ಎಂಟತ್ತು ದಿನಗಳಲ್ಲಿ ನಾಟಕ ಪ್ರದರ್ಶನ ಇರುವುದರಿಂದ ನಾನು ಒಪ್ಪಲಿಲ್ಲ. ಆದರೆ ಕರಾರೊಂದು ಹಾಕಿದೆ.
ನಟ ಮುಖ್ಯಮಂತ್ರಿ ಚಂದ್ರು ಬರೆದ “ರಂಗವನದ ಚಂದ್ರತಾರೆ” ಆತ್ಮಕಥನದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ