Advertisement

ವಿನಾಯಕ ಅರಳಸುರಳಿ

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

“ರಕ್ತದ ಮಳೆ ಬರುತ್ತೈತಣ್ಣ ಕಾಲಜ್ಞಾನಿಯ ಮಾತು
ಮುಕ್ತತೆಯ ಬೆಳೆಯ ನುಂಗಿ ನೀರ ಕುಡಿಯಬಹುದು
ಮಗ್ದತೆಯ ನಗುವ ಬಾಚಿ ಮೋಜು ನೋಡಬಹುದು
ಶಕ್ತತೆಯಲಿ ದುಡಿಯುವವನ ಹೆಣ ತೇಲಬಹುದು
ಅತಂತ್ರವಾಗಬಹದು ಸ್ವಾತಂತ್ರ್ಯ ಹಳದಿ ಮೇಘಗಳ ಹುಚ್ಚಾಟಕೆ”- ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು ಎಂಬುದನ್ನು ಅವರು ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

“ನೆಟ್ಟ ಮರ ಬಳ್ಳಿ
ಹಣ್ಣು ಕಾಯಿಗಳ ಸಿಹಿಯೊಗರು
ಹದವಾಗಿ ಬೆಂದ ಅಗುಳು
ನೈವೇದ್ಯಕ್ಕೆ ನಡೆದು
ಮೋಕ್ಷದ ಸುಖ”- ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

Read More

ಇವಾನ್ ಬುನಿನ್: ಭೌತ ವಸ್ತುಗಳ ಭಾವಗೀತಕಾರ

ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ ಮೂಲಪುರುಷರಾಗಿದ್ದಾರೆ. `ಎ ಹಿಸ್ಟರಿ ಆಫ್ ರಷ್ಯನ್ ಲಿಟರೇಚರ್’ನಲ್ಲಿ ಮರ್‍ಸ್ಕೀ ಅನ್ನುವವನು ಹೇಳುವಂತೆ: ಬುನಿನ್ನನ ಭಾಷೆ `ಕ್ಲಾಸಿಕಲ್’, ಮಿತವಾದ್ದು, ಸಮಚಿತ್ತವಾದ್ದು, ಮೂರ್ತವಾದದ್ದು…
ರಷ್ಯಾದ ಹೆಸರಾಂತ ಲೇಖಕ ಇವಾನ್‌ ಬುನಿನ್‌ನ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದದ್ದು, ಈ ಸಂಕಲನಕ್ಕೆ ಬುನಿನ್‌ ಕುರಿತಾಗಿ ಬರೆದ ಅವರ ಮಾತುಗಳು ಇಲ್ಲಿವೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ