Advertisement

ವಿನಾಯಕ ಅರಳಸುರಳಿ

ʼನೀರಿನೊಳಗಿನ ಮಂಜುʼ ಕಾದಂಬರಿಯ ಕೆಲವು ಪುಟಗಳು

ಮದುವೆಯಾಗುವಾಗ ಜಯಂತಿ ಕುಲಕರ್ಣಿ ರಾಂಪುರದ ಒಂದು ಹೈಸ್ಕೂಲಿನಲ್ಲಿ ಕನ್ನಡ ಟೀಚರಾಗಿದ್ದಳು. ಅದು ಖಾಸಗಿ ಹೈಸ್ಕೂಲಾಗಿದ್ದುದರಿಂದ ಸಂಬಳವೆನ್ನುವುದು ‘ನಾಮ್ಕಾವಸ್ಥೆ’ಯದಾಗಿತ್ತು. ಎಂ.ಎ ಓದಿ ಮನೆಯಲ್ಲಿ ಸುಮ್ಮನೇ ಕುಳಿತುಕೊಳ್ಳುವುದಕ್ಕಿಂತ ಹವ್ಯಾಸದ ಥರ ಪಾಠವನ್ನಾದರೂ ಮಾಡಿ ‘ಟೈಂಪಾಸ್’ ಮಾಡಬಹುದು ಎಂಬಂತೆ ಆಕೆ ಹೈಸ್ಕೂಲಲ್ಲಿ ದುಡಿಯುತ್ತಿದ್ದಳು. ಬಸವೇಶ್ವರ ಕಾಲೇಜಿನಲ್ಲಿರುವ ಸತೀಶ್ ಕುಲಕರ್ಣಿ ಇಂಗ್ಲೀಷ್ ಲೆಕ್ಚರರ್ ಆಗಿದ್ದಾರೆ ಎಂಬುದರಿಂದ ಮದುವೆಯ ಪೂರ್ವದಲ್ಲೇ ಆಕೆ ತಾನೂ ಆ ಕಾಲೇಜಿನಲ್ಲಿ ಸೇರಬೇಕೆಂಬ ಕನಸು ಕಂಡಿದ್ದಳು.
ಡಾ. ನಾ. ಮೊಗಸಾಲೆಯವರ “ನೀರಿನೊಳಗಿನ ಮಂಜು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ ಹಸುವಿನಂತಹ ಗುಣದ ಪುಗಸಟ್ಟೆ ಪುಟ್ಟರಾಜನ ಬಗ್ಗೆ ಊರಿನ ಜನರಿಗೆಲ್ಲಾ ಅಪಾರ ಪ್ರೀತಿ. ಏನೇ ಕೆಲಸ ಹೇಳಿದರೂ ಸಹ ಇಲ್ಲವೆನ್ನದೆ ಮಾಡುತ್ತಿದ್ದ ಪುಟ್ಟರಾಜ, ನೆರೆ ಹೊರೆಯ ಹಳ್ಳಿಗಳಿಗೆ ಹೋಗಿ ತೆಂಗಿನ ಮರ ಹತ್ತಿ ಕಾಯಿ ಕೀಳುವುದು, ಸುಲಿಯುವುದು, ಕಳೆ ಕೀಳುವುದು ಹೀಗೆ ನೂರೆಂಟು ಕೆಲಸಗಳನ್ನು ಪ್ರೀತಿಯಿಂದ ಮಾಡಿ ಬರುತ್ತಿದ್ದ. ಅವರು ಉಣ್ಣಲು ಅಥವಾ ಕುಡಿಯಲು ಏನಾದರೂ ಕೊಟ್ಟರೆ ಅದೇ ಅವನ ಪಾಲಿಗೆ ಪ್ರಸಾದವಾಗಿತ್ತು. ಡಾ. ಎನ್. ಜಗದೀಶ್ ಕೊಪ್ಪ ಬರೆದ ಕಥೆ

Read More

ಚಂದ್ರಶೇಖರ ಕಂಬಾರರ ಕಾವ್ಯಲೋಕ

ಜಗತ್ತಿನ ಬದಲಾಗಿ ಸಿಕ್ಕ ಭಾಷೆ-ಕಂಬಾರರ ಮಟ್ಟಿಗೆ ಹೇಳುವದಾದರೆ ಅವರಿಗೆ ದೊರೆತ ಜಾನಪದ ಕತೆ, ಕಾವ್ಯ, ಪುರಾಣಗಳು-ಅನೇಕ ಸಂಭಾವ್ಯತೆಗಳಿಂದ ಕೂಡಿರುತ್ತದೆ. ‘ಹೇಳತೇನ ಕೇಳ’ ಕವಿತೆಯ ಶಿವಾಪುರದಲ್ಲಿ ಹಳೆಯ ಗೌಡ ಗೌಡತಿಯರ ಆಳಿಕೆ ಮುಗಿಯುವಂತಾಗಿ ಹೊಸ ಜೀವನ ವ್ಯವಸ್ಥೆ ತಲೆಯೆತ್ತುತ್ತದೆ. ಹೊರಗಿನಿಂದ ಬಂದ ರಾಕ್ಷಸ ಗೌಡನನ್ನು ಕೊಂದು ತಾನೇ ಗೌಡನಾಗಿ ಊರಿನೊಳಗೆ ತಿರುಗಿ ಬರುತ್ತಾನೆ. ದೂರ ದೂರದವರೆಗೆ ಬೇರು ಬಿಳಲುಗಳನ್ನು ಚಾಚಿದ್ದ ಮರವನ್ನು ಕಡಿದು ಅದರ ಸ್ಥಳದಲ್ಲಿ ಹೊಸ ಶಾಲೆಯನ್ನು ಕಟ್ಟಿಸುತ್ತಾನೆ.
ಕೀರ್ತಿನಾಥ ಕುರ್ತಕೋಟಿಯವರು ಬರೆದಿದ್ದ “ಕಂಬಾರರ ಕಾವ್ಯ ಮತ್ತು ನಾಟಕಗಳು” ವಿಮರ್ಶಾ ಸಂಕಲನ ನಾಳೆ ಬಿಡುಗಡೆಯಾಗಲಿದ್ದು ಆ ಕೃತಿಯ ಒಂದು ಲೇಖನ ನಿಮ್ಮ ಓದಿಗೆ

Read More

ವ್ಯಕ್ತಿವಿಶಿಷ್ಟತೆಯೆಡೆಗಿನ ಅಸ್ಪಷ್ಟ ಹೆಜ್ಜೆಗಳು

ಚಿಂತನಶೀಲರಾದ ಹೊಸ ತಲೆಮಾರಿನ ಯುವಜನರನ್ನು ರೂಪಿಸುವ ನಿಟ್ಟಿನಲ್ಲಿ ಸದಾ ಚಟುವಟಿಕೆಯಿಂದ ಇದ್ದ ಜಿ. ರಾಜಶೇಖರ್‌ ಅವರು ತೀರಿಕೊಂಡಿದ್ದಾರೆ. ಉಡುಪಿ ಎಂದರೆ ಜಿ.ರಾಜಶೇಖರ್‌ ಎಂದು ಹೇಳುವಷ್ಟು ಪ್ರಖರವಾಗಿ ತಮ್ಮ ವಿಚಾರಗಳನ್ನು ಮಂಡಿಸುತ್ತಿದ್ದ ಅವರು ಹೊಸವಿಚಾರಗಳಿಗೆ ಸಂಬಂಧಿಸಿದ ಚರ್ಚೆಗಳಿಗೆ ಸದಾ ಮುಕ್ತರಾಗಿದ್ದರು. ಸಿದ್ಧಾಂತಗಳು ಮತ್ತು ಆದರ್ಶ, ಅವುಗಳನ್ನು ವಾಸ್ತವವಾಗಿ ಕಾಣುವಲ್ಲಿ ಎದುರಾಗುವ ಸವಾಲುಗಳ ಕುರಿತು ತಮ್ಮದೇ ಆದ ನಿಲುವುಗಳನ್ನು ಪ್ರಾಮಾಣಿಕವಾಗಿ ಮಂಡಿಸುತ್ತಿದ್ದರು. ಅವರೊಂದಿಗಿನ ಸಹಮತ  – ಭಿನ್ನಮತಗಳ ನಡುವೆ ಸ್ನೇಹದ ದಾರಿ ಸವೆಸಿದವರು ಡಿ.ಎಸ್.‌ ನಾಗಭೂಷಣ್.‌  ರಾಜಶೇಖರ್‌ ಅವರ ಅಭಿನಂದನಾ ಗ್ರಂಥಕ್ಕೆ ಅವರು ಬರೆದಿದ್ದ ಲೇಖನವೊಂದು ನಿಮ್ಮ ಓದಿಗಾಗಿ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ