Advertisement

ವಿನಾಯಕ ಅರಳಸುರಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಇಂದ್ರಕುಮಾರ್‌ ಎಚ್.ಬಿ. ಬರೆದ ಕತೆ

ತನ್ನ ಮೇಲಿನ ಕೆಟ್ಟ ದೃಷ್ಟಿಗೆ ಹೊಲಸು ಮಾತಿಗೆ ತಕ್ಷಣವೇ ರಣಚಂಡಿಯಾಗಿ ಬಿಡುತ್ತಿದ್ದವಳು ಇತ್ತೀಚೆಗೆ ಮೌನಕ್ಕೆ ಶರಣಾಗತೊಡಗಿದ್ದು ಸರ್ಕಲ್ಲಿನಲ್ಲಿನ ಖಾಲಿ ತಿರುಗುವ ಜೀವಗಳಿಗೆ ಹೊಸ ಟಾಪಿಕ್ಕು ತಂದುಕೊಟ್ಟಿತ್ತು. ಕರಿಯಮ್ಮನ ಜೀವನದ ಅತಿ ಸಂಕಷ್ಟದ ದಿನಗಳು ಪ್ರಾರಂಭವಾಗಿಯೇ ಬಿಟ್ಟಂತೆ ಆಕೆಯ ಮಾತು ನಿಲುವು ಕೈಚಳಕ ಎಲ್ಲದರಲ್ಲೂ ಒಡಕು ಎದ್ದಿತ್ತು. ಹೋರಾಟದಿ ಕಟ್ಟಿಕೊಂಡ ಬಾಳು ವಿಲವಿಲ ಒದ್ದಾಡಿ ಸಾಯುತ್ತಿರುವಂತೆ ಆಕೆಗೆ ಭಾಸವಾಗತೊಡಗಿತು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಇಂದ್ರಕುಮಾರ್ ಎಚ್.ಬಿ. ಬರೆದ “ಚಾಕರಿಯಮ್ಮ” ಕಥೆ

Read More

ಹೂ ನೋಡಿ ಗಿಡದ ಪರೀಕ್ಷೆ

ಹಕ್ಕಿ ಗರಿಗಳ ರಮ್ಯಲೋಕವನ್ನು ಚಿತ್ರಿಸುವ ‘ಹಕ್ಕಿಪುಚ್ಚವೆನ್ನುವ ಬೆಚ್ಚಾನೆ ತಾವು’ ಪ್ರಬಂಧ ಹಕ್ಕಿಪುಕ್ಕವೊಂದು ಹಾರಿಬಂದು, ಪ್ರಾರ್ಥನೆಗೆ ನಿಂತಿರುವ ಮಗುವಿನ ಕೈ ಸೇರಿ, ಆ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವ ಪ್ರಸನ್ನಚಿತ್ರದೊಂದಿಗೆ ಆರಂಭವಾಗುತ್ತದೆ. ಪುಕ್ಕ ಹಿಡಿದ ನಗುಮುಖದ ಮಗುವಿನ ಚಿತ್ರದೊಂದಿಗೆ ದ.ರಾ. ಬೇಂದ್ರೆ ಅವರ ‘ಗರಿ’ ಕವಿತೆಯನ್ನು ನೆನಪಿಸಿಕೊಳ್ಳಬೇಕು. ‘ಹಾರಲೆಂದು ಹುಟ್ಟಿದ ಹಕ್ಕಿ ಮೈಯ ಬದುಕು’ ಎಂದು ಕವಿ ಉದ್ಗರಿಸುವ, ಪುಕ್ಕದ ಮೂಲಕ ಹಕ್ಕಿಯ ಬದುಕಿನ ಘನತೆಯನ್ನು ಸೂಚಿಸುವ ‘ಗರಿ’ ಬೇಂದ್ರೆಯವರ ಅದ್ಭುತ ಕವಿತೆಗಳಲ್ಲೊಂದು. ಆ ಕವಿತೆ ಕಾಣಿಸುವ ಹಕ್ಕಿಯ ಬದುಕಿನ ಘನತೆ, ಆಶಾ ಅವರ ಪ್ರಬಂಧದಲ್ಲಿ ಹಲವು ರೂಪಗಳಲ್ಲಿ ಚಿತ್ರಣಗೊಳ್ಳುತ್ತದೆ.
ಆಶಾ ಜಗದೀಶ್‌ ಹೊಸ ಪುಸ್ತಕ “ಕಾಣೆಯಾದವರು” ಪ್ರಬಂಧಗಳ ಸಂಕಲನಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More

ಗಾಂಧಿ ಎಂಬ ಕಾಡುವ ನೆನಪು…ಕತೆಗಳಲ್ಲಿ ಮರುಹುಟ್ಟು ಪಡೆದಾಗ…

ಇಲ್ಲಿನ ಇತರ ಕತೆಗಳಲ್ಲೂ ಗಾಂಧಿಯ ಪ್ರತಿರೂಪಗಳು ಬರುತ್ತವೆ. ಇದು ಕುತೂಹಲಕಾರಿ. ಗಾಂಧಿ ಬಯಸಿದ, ಅನ್ವೇಶಿಸಿದ ಆಯಾಮಗಳಲ್ಲೆಲ್ಲಾ ಗಾಂಧಿಯನ್ನೇ ಕಾಣುವ ಒಂದು ತಾಂತ್ರಿಕ ಕೌಶಲ್ಯ ಈ ಕತೆಗಳಲ್ಲಿದೆ. ಇದೇ ಜಾಡಿನಲ್ಲಿರುವ ಗಾಂಧಿಯೊಂದಿಗೆ ಮಾತಾಡುವೆ ಮತ್ತು ಆಲದ ಮರದಲ್ಲಿ ಒಂದು ಹಕ್ಕಿ ಕತೆಗಳು ಕಥಾವಸ್ತುವಿನ ಸ್ವರೂಪ ಮತ್ತು ಶೈಲಿಯಲ್ಲಿ ಕೊಂಚ ಭಿನ್ನ. ಗಾಂಧಿ ಅನುಯಾಯಿಯ ಮಕ್ಕಳು ತಮ್ಮ ತಾಯಿ/ತಂದೆ ಪ್ರಭಾವಕ್ಕೊಳಗಾದ ಶಕ್ತಿಯನ್ನು ಮರುಭೇಟಿಮಾಡುವ, ಆ ಮೂಲಕ ಗಾಂಧಿಯನ್ನು ಮುಖಾಮುಖಿಯಾಗುವ ಪರಿಯನ್ನು ಅನಾವರಣಮಾಡುತ್ತವೆ.
ಕೆ. ನಲ್ಲತಂಬಿ ಅನುವಾದಿಸಿದ ಮಹಾತ್ಮನ ಬದುಕಿನ ಕೆಲವು ಆಯ್ದ ಕತೆಗಳ ಸಂಕಲನ “ಮತ್ತೊಂದು ರಾತ್ರಿ” ಕೃತಿಗೆ ಕೆ.ಪಿ. ಸುರೇಶ ಬರೆದ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಗುರುರಾಜ್ ಸನಿಲ್ ಬರೆದ ಕತೆ

ಅಷ್ಟು ಕೇಳಿದ್ದೇ ತಡ, ಇಬ್ಬರ ಮುಖಗಳೂ ಕಳೆಗುಂದಿದುವು. ವಿಶ್ವನನ್ನು ತಿರಸ್ಕಾರದಿಂದ ನೋಡಿ ಕೋಪದಿಂದ ಮುಖ ಗಂಟಿಕ್ಕಿದ ಮುಖ್ಯಸ್ಥ ರಪ್ಪನೇ ತಿರುಗಿ ಯಂತ್ರದತ್ತ ನಡೆದರೆ, ಸ್ಥಳಪುರಾಣ ಓದಿದವನೂ ಕೆಂಪಗಾಗಿ ‘ಓ ಅಲ್ಲಿ ಕಾಣಿಸ್ತಿದೆಯಲ್ಲಾ ಹೊಳೆ… ಅದರಾಚೆಗಿಂದು ರಿಜರ್ವ್ ಫಾರೆಸ್ಟ್ ಇವ್ರೇ! ಈ ಜಾಗವೂ ಅದ್ರೊಳಗೆ ಬರುತ್ತೆ ಹೌದಾದ್ರೂ ಆ ಕಾನೂನು ಬರೋ ಎಷ್ಟೋ ಮೊದ್ಲಿಂದ್ಲೂ ಈ ದೇವಸ್ಥಾನ ಇಲ್ಲಿತ್ತೆಂಬುದು ನಿಮ್ಗೆ ಗೊತ್ತಿತ್ತಾ…?
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಗುರುರಾಜ್ ಸನಿಲ್ ಬರೆದ “ಗುಡಿ ಮತ್ತು ಬಂಡೆ” ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ