Advertisement

ಸುಕನ್ಯಾ ಕನಾರಳ್ಳಿ

ಎಂಬತ್ತರ ದಶಕದ ಮಹತ್ವದ ಸಾಹಿತ್ಯ

ವಿಮರ್ಶಾ ಕ್ಷೇತ್ರದಲ್ಲಿ ಕಣ್ಣನ್ನು ಸೆಳೆಯುವಂತಹ ಬೆಳವಣಿಗೆ ಆಗಿದೆ. ಸೃಜನಶೀಲ ಸಾಹಿತ್ಯದ ಹಿಂದೆಯೂ ಪ್ರಜ್ಞಾಪೂರ್ವಕ ಚಿಂತನೆ ಇರುವುದು ಅನಿವಾರ್ಯವಾದ ಯುಗದಲ್ಲಿ ಸಾಹಿತ್ಯ ವಿಮರ್ಶೆ ಬೆಳೆದಷ್ಟೂ ಸೃಜನಶೀಲ ಸಾಹಿತ್ಯಕ್ಕೂ ಲಾಭ. ಜಿ.ಎಚ್. ನಾಯಕ, ಕೆ.ವಿ. ನಾರಾಯಣ, ಎಚ್.ಎಸ್. ರಾಘವೇಂದ್ರರಾವ್, ರಾಜೇಂದ್ರ ಚನ್ನಿ, ಡಿ.ಆರ್. ನಾಗರಾಜ ಮೊದಲಾದವರ ವಿಮರ್ಶೆಯ ಬರಹಗಳನ್ನು ಓದಿದಾಗ ವಿಮರ್ಶೆಯ ಉಪಕರಣಗಳು ಎಷ್ಟು ಸೂಕ್ಷ್ಮವಾಗಿವೆ ಎನ್ನುವುದು ಸಂತೋಷವನ್ನುಂಟು ಮಾಡುತ್ತದೆ. ಹಲವೊಮ್ಮೆ ಈ ವಿಶ್ಲೇಷಣೆಯಲ್ಲಿ ಬೌದ್ಧಿಕ ಅಂಶ ತಾನೇತಾನಾಗಿ, ರಸಾ ಸ್ವಾದನೆ ಹಿಂದುಳಿಯುತ್ತಿದೆಯೋ ಎಂದು ಆತಂಕವಾಗುತ್ತದೆ.
ಪ್ರೊ. ಎಲ್.ಎಸ್. ಶೇಷಗಿರಿರಾವ್ ಬರೆದ “ಆಧುನಿಕ ಕನ್ನಡ ಸಾಹಿತ್ಯ” ಕೃತಿಯಿಂದ ಒಂದು ಲೇಖನ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ದೀಪ್ತಿ ಭದ್ರಾವತಿ ಕತೆ

ಅರುಂಧತಿಗೆ ಎದೆಯೊಳಗೆ ಕೊಳ್ಳಿದೆವ್ವ ಓಡಾಡಿದಂತೆ ಭಾಸವಾಯಿತು. ನರ್ಸು ಹಲ್ಲು ಕಚ್ಚಿಕೊಂಡಳಾದರೂ, ಆಯಾ ಮಾತ್ರ ಅದನ್ನು ಸಮರ್ಥಿಸಿಕೊಳ್ಳುವವಳಂತೆ “ಅಯ್ಯಾ ಇರೋದನ್ನ ಏಳುದ್ನಪ್ಪ” ಇವ್ರು ರಾತ್ರಿ ಎಲ್ಲ ಸುಖ ಪಟ್ಕೊಂಡು ಈವಾಗ ನಮ್ ತವ ಕೂಗ್‍ಕೊಂಡ್ರೆ ಏನ್ ಬತ್ತದೆ” ಎಂದಳು. ಅರುಂಧತಿಗೆಒಮ್ಮೆ ಹಾವು ಮೆಟ್ಟಿದಂತಾಗಿ ಸುಮ್ಮನೆ ಅವಳನ್ನೇ ಒಮ್ಮೆ ನೋಡಿದಳು. ಬೋಳು ಹಣೆ, ಬರಿಗೈ, ನಿರ್ವಿಕಾರ ಭಾವ ಅವಳ ಕುರಿತಾಗಿ ಬೇರೆ ಏನನ್ನೋ ಧ್ವನಿಸಿತು. ದೀಪ್ತಿ ಭದ್ರಾವತಿ ಬರೆದ ಕತೆ ‘ಸ್ಫೋಟ’ ನಿಮ್ಮ ಈ ಭಾನುವಾರದ ಓದಿಗೆ

Read More

ಕನ್ನಡ ಕಾವ್ಯಮಾಲೆಯ ಕುಸುಮ: ಗೋಲ ಗುಮ್ಮಟ

“ಅನ್ಯ ಸಂಸ್ಕೃತಿಯ ಮಾನ್ಯ ಕಾಣ್ಕೆ ಕೃತಿ –
ಗಿಳಿಯೆ ಮೂಡಿತಿದು ಗುಮ್ಮಟ
ಸರ್ವ ಧರ್ಮದಲಿ ಒಂದೆ ಮರ್ಮವನು
ಸೂಚ್ಯಗೈದಿಹುದು ಗುಮ್ಮಟ.”- ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ಡಾ. ಡಿ.ಎಸ್.‌ ಕರ್ಕಿ ಬರೆದ “ಗೋಲ ಗುಮ್ಮಟ” ಕವನ ಇಂದಿನ ಓದಿಗಾಗಿ

Read More

ಅಜೀತ ಪಾತ್ರೋಟ ಬರೆದ ಈ ದಿನದ ಕವಿತೆ

“ನಿನ್ನ ಕಣ್ಣಿನ್ಯಾಗ
ನನಗೊಂದ ಕನಸ ಕಟ್ಟಿತ್ತ
ಬದುಕ ಆಸೆ ಹುಟ್ಟಿತ್ತ
ಚಂದದ ಮನಿಗೊಂದ ಗ್ವಾಡಿ ಕಟ್ಟಿ
ಬಣ್ಣದಾಂಗ ಮಾಡಿ ಬೆಳಗ ಮೂಡಿಸಿತ್ತ”- ಅಜೀತ ಪಾತ್ರೋಟ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ