Advertisement

ಎಚ್. ಗೋಪಾಲಕೃಷ್ಣ

ಸವಿಯ ಬನ್ನಿ ಮಲೆನಾಡ ಊಟವ…: ರೂಪಾ ರವೀಂದ್ರ ಜೋಶಿ ಸರಣಿ

ನಮ್ಮನೆಯ ಬೇಸಿಗೆಯ ಹಿತ್ತಲಲ್ಲಿ ಆಯಿ, ಹೂ ಕೋಸು, ಗಡ್ಡೆ ಕೋಸು ಮೂಲಂಗಿ, ಬೀಟ್ರೂಟ್‌ಗಳನ್ನು ಕೂಡಾ ಸಮೃದ್ಧವಾಗಿ ಬೆಳೆಸುತ್ತಿದ್ದಳು. ಮುಂದಿನ ಮೂರು ತಿಂಗಳು ನಾವೆಲ್ಲ ಯಥೇಚ್ಛವಾಗಿ ತರಕಾರಿಯನ್ನು ಉಪಯೋಗಿಸಬಹುದಾಗಿತ್ತು. ಎಲ್ಲಕ್ಕಿಂತ ವಿಶೇಷವಾಗಿ ಮೊಗೇ ಕಾಯಿ ಬೆಳೆಸುವುದು ಬೇಸಿಗೆಯ ಹಿತ್ತಲಿನ ವಿಶೇಷ. ಈ ಮೊಗೆ ಕಾಯಿ (ಬಣ್ಣದ ಸೌತೆ ಕಾಯಿ) ಯೆಂಬುದು ಮಲೆನಾಡಿಗರ ಆಪದ್ಬಾಂಧವನಿದ್ದಂತೆ.
ರೂಪಾ ರವೀಂದ್ರ ಜೋಶಿ ಬರೆಯುವ “ಹಸಿರ ಮಲೆನಾಡಲ್ಲಿ ಹಸನಾದ ಬಾಲ್ಯ” ಸರಣಿಯ ಒಂಭತ್ತನೆಯ ಕಂತು

Read More

ಬಸ್ ಒಡೆಯನೆಂದು ನಂಬಿ, ನಾನು ಯಾಮಾರಿದ್ದು!!!: ಬಸವನಗೌಡ ಹೆಬ್ಬಳಗೆರೆ ಸರಣಿ

ನಾನು ಅಂದು ಪ್ರವಾಸಕ್ಕೆ ಹೊರಟಿದ್ದೆ. ನನಗಾಗಿ ಹುಡುಗರು ಕಾಯುತ್ತಿದ್ದರು. ಪದೇ ಪದೇ ಕಾಲ್ ಬೇರೆ ಮಾಡುತ್ತಿದ್ದರು. ಹೋಗುವ ಧಾವಂತ ಬೇರೆ. ಆಸಾಮಿ ಬಿಡಲೇ ಇಲ್ಲ. ಅವನ ಮಾತನ್ನು ನಿಜವೆಂದು ನಾನು ಅವನಿಗೆ ಮತ್ತೆ 500 ರುಪಾಯಿಗಳನ್ನು ಕೊಟ್ಟೆ. ಕೊಟ್ಟಾಕ್ಷಣ “ನಾಳೇನೇ ನಿಮ್ಮ ಖಾತೆಗೆ ಹಾಕ್ತೇನೆ” ಎಂದ. ನಾನು ನನ್ನ ಮೊಬೈಲ್ ಸಂಖ್ಯೆಯನ್ನೂ ಕೊಟ್ಟೆ. ಕೊಟ್ಟ ತಕ್ಷಣ ನಾನು ಕಾಯುತ್ತಿದ್ದ ಬಸ್ ಬಂತು. ಅವನು ಲಗುಬಗೆಯಿಂದಲೇ ನನ್ನನ್ನು “ಹೋಗಿ ಹೋಗಿ” ಎಂದು ಬಸ್ ಹತ್ತಿಸಿದ. ಮಾರನೇ ದಿನ ಅವನು ಕಾಲ್ ಮಾಡುತ್ತಾನೆಂದು ಕಾದೆ. ಮಾಡಲಿಲ್ಲ!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ನಮ್ಮನೆಯ ದೀಪಾವಳಿ…: ರೂಪಶ್ರೀ ಕಲ್ಲಿಗನೂರ್‌ ಬರಹ

ಕನಿಷ್ಟ ಎರಡು ವಾರಗಳ ಹಿಂದಿನಿಂದ ಕೆಲಸ ಆರಂಭಿಸಿರುತ್ತಿದ್ದ ಅಮ್ಮ, ದೀಪಾವಳಿ ಬಟ್ಟೆ ಶಾಪಿಂಗಿಗೆ ಬಂದಿದ್ದು ಕಡಿಮೆಯೇ. ಅಕ್ಕ-ನಾನು ಆಯ್ದ ಬಟ್ಟೆಗಳು ಅವರಿಗೆ ಯಾವಾಗಲೂ ಖುಷಿಯೇ. ಹಾಗಾಗಿ ನೀವೇ ಆರಿಸಿತಂದುಬಿಡಿ ಅಂತ ನಮ್ಮೆಲ್ಲರನ್ನೂ ಕಳಿಸಿಬಿಡುತ್ತಿದ್ದರು. ಹಾಗಾಗಿ ನಮ್ಮದೆಲ್ಲ ಬಟ್ಟೆ ಕೊಂಡಾದ ಮೇಲೆ, ಅಮ್ಮನಿಗೆಂದು ಚಂದದ ಸೀರೆ ಆರಿಸುವ ಜವಾಬ್ದಾರಿ ನಮ್ಮಗಳ ಮೇಲಿರುತ್ತಿತ್ತು. ಅಪ್ಪನೂ, ನಾವೂ ಎಲ್ಲರೂ ಸೇರಿ ಅಮ್ಮನಿಗೆ ಒಪ್ಪಬಹುದಾದ ಸೀರೆಯನ್ನು ಬಹಳ ಕುತೂಹಲದಿಂದ ಆರಿಸುತ್ತಿದ್ದೆವು. ದೀಪಾವಳಿಯ ಆಚರಣೆಯ ಕುರಿತು ರೂಪಶ್ರೀ ಕಲ್ಲಿಗನೂರ್‌ ಬರಹ

Read More

ದೀಪಾವಳಿ ಹಬ್ಬದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಬರಹ

ಅಂತೂ ಈಡಿಗೆ ಬೆಂಕಿ ತಾಕಿಸಿ ಅದು ಉರಿಯುವುದರೊಳಗೆ ನನ್ನನ್ನು ಅಲ್ಲಿಂದ ಮನೆಗೆ ಕಳಿಸಿದ್ದರು. ಅದಾದ ಮೇಲೆ ಎಂದೂ ನಾನು ಬಾನ ಹೊತ್ತಿದ್ದು ನೆನಪಿಲ್ಲ. ನನಗೆ ದೇವರನ್ನು ಹೊತ್ಕೋಬೇಕು ಅಂತ ಆಸೆ ಇತ್ತು. ಆದರೆ ನಾವು ದೇವರನ್ನು ತಲೆಮೇಲೆ ಹೊರಬಾರ್ದು ಅನ್ನುತ್ತಿದ್ದರು. ಅದಕ್ಕೆ ಅನೇಕ ನಿಯಮಗಳಿರುತ್ತವೆ ಅನ್ನುತ್ತಿದ್ದರು. ನಾವ್ಯಾಕೆ ಹೊತ್ಕೋಬಾರ್ದು ಎಂಬ ಪ್ರಶ್ನೆ ನನ್ನನ್ನು ಕಾಡುತ್ತಲೆ ಇತ್ತು. ಅಂತೂ ಆ ವರ್ಷದ ದೀವಣ್ಗೆ ಹಬ್ಬ ಮುಗಿದುಹೋಗಿತ್ತು. ಪ್ರತಿ ದೀಪಾವಳಿ ಹಬ್ಬದಲ್ಲೂ ಅಂತಹ ನೆನಪುಗಳು ಮತ್ತೆ ಮತ್ತೆ ಮರುಕಳಿಸುತ್ತಲೆ ಇರುತ್ತವೆ.
ಮಾರುತಿ ಗೋಪಿಕುಂಟೆ ನೆನಪುಗಳು

Read More

ತುಳುನಾಡಿನ ದೀಪಾವಳಿ: ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು

ಪಟಾಕಿ ಸುಡುವುದರ ಬಗ್ಗೆ ಕ್ಲಾಸಿನಲ್ಲಿ ಪಾಠದ ಮಧ್ಯೆ ಸುಮ್ಮನೆ ದಂಡಕ್ಕೆ ಎಂದು ಬೋಧಿಸಿದ್ದ ನಮ್ಮ ನೆರೆಮನೆಯ ದೇಜು ಮಾಸ್ಟ್ರು ತಮ್ಮ ಮಕ್ಕಳು ಕೃಷ್ಣ, ಲಕ್ಷ್ಮಣ, ಪುಟ್ಟ ಮಗು ಮಾರುತಿಯರನ್ನು ಕರೆದುಕೊಂಡು ಬಂದು ನಮ್ಮ ತಂದೆಯವರ ಜೊತೆಗೆ ನಿಂತು ಉತ್ಸವವನ್ನು ನೋಡಿದಂತಾಯಿತೆಂದು ಹೇಳಿಕೊಂಡು, ಖುಷಿ ಪಟ್ಟುಕೊಂಡು, ನಮ್ಮ ಸಂತೋಷದಲ್ಲಿ ಭಾಗಿಯಾಗಿದ್ದರು. ಸುಮಾರು ಅರ್ಧ ಗಂಟೆಗಳ ಕಾಲ ನಮ್ಮ ಸುಡು ಮದ್ದು ಬಿರುಸು ಬಾಣಗಳ ವೈಭವವನ್ನು ಸವಿದ ಊರವರು ಮುಂದೆ ವರ್ಷಗಟ್ಟಲೆ ಈ ದೀಪಾವಳಿಯನ್ನು `ಗುರುಕುಲೆ ಇಲ್ಲದ ದೀಪೋಲಿ’ ಎಂತಲೇ ನೆನಸಿ ಕೊಳ್ಳುತ್ತಿದ್ದರು.
ತುಳುನಾಡಿನ ದೀಪಾವಳಿಯ ಆಚರಣೆಗಳ ಕುರಿತು ಫಕೀರ್ ಮುಹಮ್ಮದ್ ಕಟ್ಪಾಡಿ ನೆನಪುಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ