Advertisement

ಕೆ ಟಿ ಗಟ್ಟಿ

ಸುಜನಾ ಬರೆದ ‘ವಿಳಾಸ ತಪ್ಪಿದ ಕಾಗದ’

“ಕುರುಡು ಕರು ತಾಯ ಕೆಚ್ಚಲನರಸಿ
ತುರುಮಂದೆಯಲಿ ನುಗ್ಗುತಿರೆ,
ತೊಂಡೆದನಗಳ ಕಾಲ ಒದೆತಗಳ ಮಳೆ
ಒಂದೆ ಸಮ ಮುಖದಿ ಸುರಿಯುತ್ತಿರೆ
ರಕ್ತಕಣ್ಣೀರು ಕೊಚ್ಚೆರೊಚ್ಚೆಯಲಿ
ತೊಟ್ಟ ತೊಟ್ಟಿಟ್ಟು ಕರಗುತ್ತಿದೆ.”- ಕನ್ನಡ ಕಾವ್ಯಮಾಲೆಯ ಕಾಣದ ಕುಸುಮಗಳು ಸರಣಿಯಲ್ಲಿ ಸುಜನಾ ಬರೆದ ‘ವಿಳಾಸ ತಪ್ಪಿದ ಕಾಗದ’ ಎಂಬ ಕವನ ನಿಮ್ಮ ಓದಿಗಾಗಿ.

Read More

ಲಕ್ಷ್ಮಣ ಕೆ. ಪಿ. ಬರೆದ ಈ ದಿನದ ಕವಿತೆ

“ರಾತ್ರಿಯಲ್ಲಿ
ಮುಗಿಲು ಮಲ್ಲಿಗೆ ಘಮ ಹೆಚ್ಚು
ನನಗೂ ಅವಳಿಗೂ ಘಮಲಿನ ಹುಚ್ಚು
ಬೆಳ್ಳನೆಯ ಮೈಯೊಳಗೆ ತುಸು ನೇರಳೆ ಬಣ್ಣ
ಮಲ್ಲಿಗೆ ಮತ್ತು ಅವಳು ನನ್ನ ದೇಶ”- ಲಕ್ಷ್ಮಣ ಕೆ. ಪಿ. ಬರೆದ ಈ ದಿನದ ಕವಿತೆ

Read More

ಡಾ. ಗೀತಾ ಶೆಣೈ ಅನುವಾದಿಸಿರುವ “ಅದೃಷ್ಟ” ಕಾದಂಬರಿಯ ಒಂದು ಅಧ್ಯಾಯ

ಇದನ್ನು ಯಾರು, ಯಾವಾಗ ಕಟ್ಟಿಸಿದರೋ? ಯಾವ ತಲೆಕೆಟ್ಟ ಮನುಷ್ಯ ಇದರ ವಿನ್ಯಾಸ ರೂಪಿಸಿದನೋ? ಮೂರು ಮನೆವಾಳ್ತೆಗಳು ಇರಲು ಅನುಕೂಲವಾಗುವ ಹಾಗೆ ಹೇಗೇಗೋ ಕೋಣೆಗಳನ್ನು ಹೊಂದಿಸಿ ಈ ಕಾವಲುಮನೆಯನ್ನು ಕಟ್ಟಲಾಗಿದೆ. ಆದರೆ ಇದಕ್ಕೆ ಸರಿಯಾದ ಕಿಟಿಕಿಗಳಾಗಲೀ, ಬಾಗಿಲುಗಳಾಗಲೀ ಇಲ್ಲ. ಕೆಲವು ಕೋಣೆಗಳಲ್ಲಿಯಂತೂ ನಡುಮಧ್ಯಾಹ್ನವೂ ಕತ್ತಲೆ ತುಂಬಿರುತ್ತದೆ. ಇದಕ್ಕೆ ಸುಣ್ಣಬಣ್ಣ ಬಳಿದಿರುವುದು ಯಾವ ಕಾಲಕ್ಕೋ.
ಕೊಂಕಣಿ ಲೇಖಕ ಮಹಾಬಳೇಶ್ವರ ಸೈಲ್‌ ಅವರ ಕಾದಂಬರಿಯನ್ನು ಡಾ. ಗೀತಾ ಶೆಣೈ “ಅದೃಷ್ಟ” ಎಂಬ ಶೀರ್ಷಿಕೆಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದು, ಅದರ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚೀಮನಹಳ್ಳಿ ರಮೇಶಬಾಬು ಕತೆ

ಮಳೆ ನಿಂತಿತ್ತಾದರೂ ಸಂದಿಯಲ್ಲಿರುವ ನೀರು ಖಾಲಿಯಾಗುವವರೆಗು ಮನೆಯೊಳಗೆ ನೀರು ಬರುತ್ತಲೆ ಇತ್ತು. ಹಾಗಾಗಿ ಅವಳು ಬಹುಪಾಲು ರಾತ್ರಿಯೆಲ್ಲ ಹಾಗೆ ನೀರನ್ನು ಹೊರ ಹಾಕುತ್ತಲೆ ಇದ್ದಳು. ಅದಾದ ಮೇಲೆ ಮಣ್ಣನ್ನೆಲ್ಲ ತೆಗೆದು ಒಂದಷ್ಟು ಸ್ವಚ್ಛಗೊಳಿಸಿದ್ದಳಾದರು ಮುಂಜಾವಿನವರೆಗೂ ತಾರಸಿ ಸೋರುತ್ತಲೆ ಇತ್ತು. ಅವಳು ತುಂಬಿದ ಪಾತ್ರೆಗಳಲ್ಲಿನ ನೀರನ್ನು ಆಚೆ ಚಲ್ಲಿ ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದಳು. ಹೀಗೆ ರಾತ್ರಿಯೆಲ್ಲ ಎದ್ದು ಬಗ್ಗಿ ಓಡಾಡಿ ಹೈರಾಣಾಗಿದ್ದಳು. ರಾತ್ರಿಯ ಕತ್ತಲಲ್ಲಿ ಅದುಮಿಟ್ಟುಕೊಂಡಿದ್ದ ಅವಳೆಲ್ಲ ಭಾವನೆಗಳು ಬೆಳಗಾಗುತ್ತಿದ್ದಂತೆ ಸಿಡಿದು ಸದ್ದು ಮಾಡತೊಡಗಿದವು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ