Advertisement

ಕೆ ಟಿ ಗಟ್ಟಿ

ಮರ್ಥರ್ ಟಿಡ್ ಫಿಲ್‌ನ ‘ಮನೆ’

ಚಿಕ್ಕಮ್ಮನ ಮನೆ ತಲುಪಿದ ಕೂಡಲೇ ನನಗೊಂದು ಮಹತ್ವದ ಸನ್ನಿವೇಶ ಎದುರಾಯಿತು. ಹತ್ತು ದಿನಗಳ ಹಿಂದಷ್ಟೆ ತೆರೆದ ಹೃದಯ ಚಿಕಿತ್ಸೆ ಮಾಡಿಸಿಕೊಂಡಿದ್ದ ಮೇಘರಾಜ ಚಿಕ್ಕಪ್ಪ ಹೆಚ್ಚಿನ ಪಕ್ಷ ಹಾಸಿಗೆ ಬಿಟ್ಟು ಮೇಲೆದ್ದಿರಲಾರರು ಎಂದು ಎಣಿಸಿಕೊಂಡಿದ್ದೆ. ಆದರೆ, ಮನೆಯ ಮುಂದೆ ನಮ್ಮ ಕಾರು ನಿಂತು ಕಾಲಿಂಗ್ ಬೆಲ್ ಒತ್ತುವ ಮೊದಲು ಅವರು ಬಂದು ಬಾಗಿಲು ತೆರೆದಾಗ ನನ್ನೆಣಿಕೆಯಲ್ಲ ಸುಳ್ಳಾಗಿ ಹೋಯಿತು.  ಲವಲವಿಕೆಯಿಂದ ಪುಟಿಯುತ್ತಿದ್ದ ಅವರಿಗೆ ತೆರೆದ ಹೃದಯ ಚಿಕಿತ್ಸೆ ಆಗಿದೆ ಎಂದು ಮೇಲ್ನೋಟಕ್ಕೆ ಹೇಳುವ ಸಾಧ್ಯತೆ ಇರಲಿಲ್ಲ. ಇಂಥ ಅನೇಕ ಅಚ್ಚರಿಗಳು ಒಂದಾದಮೇಲೊಂದರಂತೆ ಎದುರಾಗುತ್ತ, ನನಗೆ ‘ಯುಕೆ’ ಪರಿಚಯವಾಗತೊಡಗಿತು.
ಸತೀಶ್ ಚಪ್ಪರಿಕೆ ಬರೆದ ಥೇಮ್ಸ್ ತಟದ ತವಕ ತಲ್ಲಣ ಕೃತಿಯು ಮರುಮುದ್ರಣಗೊಂಡಿದ್ದು, ಅದರ ಒಂದು ಅಧ್ಯಾಯ ಇಲ್ಲಿದೆ. 

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಛಾಯಾ ಭಗವತಿ ಬರೆದ ಕತೆ

ಪ್ಯಾಟೀಗೆ ಬಂದಾಗ ಕರಬಸ್ಸಿಗೆ ನೆನಪಾದ್ರೂನೂ, ರೊಕ್ಕ ಕೊಡಲಾರದಂಗ ಹೊಳ್ಳಿ ಹೋಗಿರತಿದ್ದ. ಆದರ ಸಾವಕ್ಕನ ಗಂಡ ಹೇಮ್ಯಾನ್ನ ತಪ್ಪಿದ್ರ ಯಶವಂತನ್ನ ಕಳಿಸಿ ರೊಕ್ಕ ವಸೂಲ ಮಾಡಾತನಾ ಬಿಡ್ತಿರಲಿಲ್ಲ. ಈ ಮಾಬಾರ್ತದಾಗ ಗುದ್ದ್ಯಾಡಿ ಗುದ್ದ್ಯಾಡಿ ಸುಮ್ಮನಾಗಿಬಿಟ್ಟಿದ್ಲು ಸಾವಕ್ಕ. ನಡುಕ ತನಿಗೂ ಅರಿವಿ, ಪರಕಾರ ಹೊಲಸಿಗೆಣ ಹರಕತ್ತು ಇದ್ರೂನೂ ಹೊಳ್ಳಿ ಕೇಳಾದು ಬೇಶಿರಾದಿಲ್ಲ ಅನಿಸೇ ಅಕೀ ಹಿಂದಳ ಓಣಿ ಚನ್ನಮ್ಮಕ್ಕನ ಹತ್ರ ಅರಿವಿ ಕೊಟ್ಟು ತನಿಗೆ ಬೇಕಾದ್ದು ಹೊಲಸತಿದ್ಲು. ಇನ್ನ ಮಕ್ಕಳು ಅಂತೂ ಓದಾಕ….

Read More

‘ಚಾಲುಕ್ಯರ ಶಿಲ್ಪಕಲೆ’ಯೆಂಬ ಮಹಾನ್ ವೃಕ್ಷದ ಸುತ್ತ

ಬಾದಾಮಿ ಐಹೊಳೆಗಳ ಗುಹೆಗಳನ್ನು ಕಡೆಯುವ ವೇಳೆಗಾಗಲೇ ಆ ರೂವಾರಿಗಳಿಗೆ ಸುಮಾರು 800 ವರ್ಷಗಳ ಪರಂಪರೆಯ ಹಿನ್ನೆಲೆ ಇದ್ದಿತು. ಕಲ್ಪನೆ ಮತ್ತು ರೂಪಿಸುವ ಕುಶಲತೆಯೂ ಬೆಳೆಯಿತು: ಒಳ ಮತ್ತು ಹೊರ ಭಿತ್ತಿಗಳ ಅಲಂಕರಣವು ಸೇರ್ಪಡೆಗೊಂಡಿತು. ಚಾಲುಕ್ಯರ ರೂವಾರಿಗಳು ತಮ್ಮ ಪೂರ್ವಸೂರಿಗಳ ವಾರಸುದಾರರಂತೆ ತಮ್ಮ ಕರಕುಶಲತೆಯನ್ನು ಮೆರೆದರು. ಪರಂಪರೆಗೆ ಋಣಿಗಳಾಗಿಯೂ ತಮ್ಮದೇ ಆದ ಅನುಭವ, ಸ್ಥಳೀಯ ಪರಿಕರ, ಮಾಧ್ಯಮಗಳಿಂದ ಅನನ್ಯ ದೃಶ್ಯ ಲೋಕವನ್ನೇ ಸೃಷ್ಟಿಸಿದರು.
ಚಿತ್ರಕಲಾವಿದ ಪುಂಡಲೀಕ ಕಲ್ಲಿಗನೂರು ಅವರ “ಚಾಲುಕ್ಯರ ಶಿಲ್ಪಕಲೆ” ಶಿಲ್ಪಕಲಾ ಪುಸ್ತಕಕ್ಕೆ ಕೆ.ವಿ. ಸುಬ್ರಹ್ಮಣ್ಯ ಬರೆದ ಮುನ್ನುಡಿ

Read More

ಎನ್ ಎ ಎಂ ಇಸ್ಮಾಯಿಲ್ ಕವಿತೆ: ಸಂಭಾಷಣೆ

“ಅವನಂದ; ನಾನಿಲ್ಲೇ ಇರಲೇ
ಅದೆಲ್ಲಿರುವೆ ಎಂದವಳ ಕೇಳ್ವಿ
ಪಕ್ಕದಲ್ಲಿ ಎಂಬುದವನ ಹೇಳಿಕೆ
ನೀ ಚುಂಬಿಸಿದರೆ ಎಂದವಳ ಸಂಶಯ”- ಎನ್ ಎ ಎಂ ಇಸ್ಮಾಯಿಲ್ ಕವಿತೆ: ಸಂಭಾಷಣೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ