Advertisement

ಕೆ ಟಿ ಗಟ್ಟಿ

ಕಾವ್ಯಮಾಲೆಯ ಕಾಣದ ಹೂಗಳು

ಕನ್ನಡ  ಕಾವ್ಯ ಲೋಕದಲ್ಲಿ ಪ್ರಸಿದ್ಧರ ಕವನಗಳು, ಪ್ರಸಿದ್ಧವಾದ ಕವನಗಳನ್ನು ಆಗಾಗ ಕೇಳುತ್ತಿರುತ್ತೇವೆ. ಆದರೆ ಎಷ್ಟೋ ಅತ್ಯುತ್ತಮವಾದ ಕವನಗಳು ಕಂಡೂ ಕಾಣದಂತೆ ಮರೆಯಾಗಿವೆ.  ಗದ್ಯಪ್ರಕಾರದಲ್ಲಿ ಹೆಚ್ಚು ಬರಹಗಳನ್ನು ಬರೆದವರೂ ಒಳ್ಳೆಯ ಪದ್ಯಗಳನ್ನು ಬರೆದುದುಂಟು. ಅಂತಹ ಅಪರೂಪದ ಕವನಗಳನ್ನು ಹುಡುಕಿ ನಿಮ್ಮ ಮುಂದೆ ಇರಿಸುವ ಪ್ರಯತ್ನವನ್ನು ಕೆಂಡಸಂಪಿಗೆ ಮಾಡಲಿದೆ. ಈ ಸರಣಿಯಲ್ಲಿ ಮೊದಲ ಕವನವಾಗಿ ಸೋಮಶೇಖರ ಇಮ್ರಾಪೂರ ಅವರು ಬರೆದ ‘ಗಂಡ ಹೆಂಡಿರ ಜಗಳ ಗಂಧ ತೀಡಿದ್ಹಾಂಗ’ ಎಂಬ ಕವನ ನಿಮ್ಮ ಓದಿಗಾಗಿ ಇಲ್ಲಿದೆ. ಪ್ರತೀ ಗುರುವಾರ ಹೀಗೊಂದು ಕವನದ ಪುಟವಿಲ್ಲಿ ಅರಳಿಕೊಳ್ಳಲಿದೆ.

Read More

ಬಿ.ಎಸ್.ವಿನಯ್ ತೆಗೆದ ಈ ದಿನದ ಫೋಟೋ

ಬಿ.ಎಸ್.ವಿನಯ್ ವೃತ್ತಿಯಿಂದ ಶಿಕ್ಷಕರು. ನೀನಾಸಂ ಹಿರಿಯ ವಿದ್ಯಾರ್ಥಿ. ಕವನಗಳು, ನಾಟಕಗಳ ರಚನೆ, ನಿರ್ದೇಶನ, ನಟನೆ, ಚಾರಣ, ಅನುವಾದಗಳಲ್ಲಿ ಆಸಕ್ತಿ ಹೊಂದಿದ್ದಾರೆ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕಣ್ಮರೆಯಾಗುತ್ತಿರುವ ದೇಸೀ ಕಥನ, ಕಸುಬು ಹಾಗೂ ಅವುಗಳು ಪೊರೆದ ನುಡಿಸಂಪತ್ತು

ಒಂದು ದಿನ ಸಂಜೆ ಬುಡುಗೊಚ್ಚ ಕೊಪ್ಪಲಿನ ಮೆದೆಯಲ್ಲಿ ಹುಲ್ಲು ಹಿರಿಯುತ್ತಿದ್ದನಂತೆ. ಆಗ ಆಕಾಶದ ಕಡೆಯಿಂದ ಬೆಳ್ಳನೆಯ ಬೆಳಕೊಂದು ಇಳುಕಂಡು ಬಂದು ಅವನೆದುರಿನ ಬೇಲಿಯನ್ನು ಹೊಕ್ಕಿತ್ತಂತೆ. ಕಣ್ಮುಚ್ಚಿ ಬಿಡುವುದರೊಳಗೆ ಆ ಬೆಳಕು ಬೇಲಿಯನ್ನೆಲ್ಲಾ ಆವರಿಸಿಕೊಂಡು ಆ ಇಡೀ ಬೇಲಿಯನ್ನು ಬೆಳಗಿಸತೊಡಗಿತ್ತಂತೆ. ಗಾಬರಿಗೊಂಡ ಬುಡುಗೊಚ್ಚ ಹುಲ್ಲು ಹಿರಿಯುವುದನ್ನು ಬಿಟ್ಟು ಬೇಲಿಯನ್ನೇ ದಿಟ್ಟಿಸತೊಡಗಿದ್ದನಂತೆ.
ಎಸ್. ಗಂಗಾಧರಯ್ಯ ಬರೆದ ‘ಮಣ್ಣಿನ ಮುಚ್ಚಳ’ ಹೊಸ ಕಥಾ ಸಂಕಲನಕ್ಕೆ ಬರೆದುಕೊಂಡಿರುವ ಮಾತುಗಳು

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ

ಚಿಕ್ಕವನಿದ್ದಾಗ ತನ್ನನ್ನು ಎಲ್ಲರೂ ಅದೆಷ್ಟು ಕಾಳಜಿಯಿಂದ ಮಾತನಾಡಿಸುತ್ತಿದ್ದರೆಂದರೆ, ಗೆಳೆಯರೆಲ್ಲ ಹೊಟ್ಟೆಕಿಚ್ಚು ಪಡುವಷ್ಟು. ಶಾಲೆಗೆ ಹೋಗಿ ಬರುವಾಗ ‘ಮಾಳಿಗಿ ಶಂಕರಪ್ಪನಂತ ಗಟ್ಟಿ ಕುಳ ತನ್ನ ಕರೆದು ಮಾತಾಡದಂದ್ರ ಹುಡುಗಾಟ್ಕೀನ?’ ಅಂದುಕೊಳ್ಳುತ್ತಿದ್ದ. ಬೇರೆಯವರು ನಕ್ಕೊಂಡೇ ಕೇಳುತ್ತಿದ್ದರು “ಏನ್ಲೇ ಶಿದ್ಲಿಂಗ, ನಿಮ್ಮ ಶಂಕರಪ್ಪ ಏನಂದ?” ತಮ್ಮತಮ್ಮಲ್ಲೇ ಕಣ್ಣು ಮಿಟುಕಿಸುತ್ತಿದ್ದರು. “ನೀ ಹಾಕ್ಕೊಂಡ ಅಂಗಿ ಸರಿಯಾಗೇತೇನ್ಲೆ? ಚೊಣ್ಣ ಬರೋಬರಿ ಆಗೇತಿಲ್ಲ? ನಿಮ್ಮವ್ವ ಮನ್ಯಾಗ ಇದ್ಲೇನು?”
‘ನಾನು ಮೆಚ್ಚಿನ ನನ್ನ ಕತೆ’ಯ ಸರಣಿಯಲ್ಲಿ ಚನ್ನಪ್ಪ ಅಂಗಡಿ ಬರೆದ ಕತೆ ‘ಪಿರಾಮಿಡ್ಡಿನಿಂದೆದ್ದು ಬಂದವನು’

Read More

ಶರೀಫ್ ಕಾಡುಮಠ ಬರೆದ ಕವಿತೆ ಉರೂಸ್

ಮೊದಲ ನೋಟಕ್ಕೇ
ಫಿದಾ ಆಗಿ
ಖುದಾನ ಬಳಿ
ಮೊಹಬ್ಬತ್ತಿನ ಮೊರೆಯಿಟ್ಟಿದ್ದೇನೆ
ಭಾಷಣದ ವೇದಿಕೆ ಮುಂದೆ
ಬಿಳಿಗೂದಲ ಹಲ್ಲಿಲ್ಲದ
ಉಪ್ಪಾಪಗಳು ಸಾಲಾಗಿ
ಕಿವಿ ಹಿರಿದಾಗಿಸಿ
ಮುದುಡಿ ಕುಳಿತಿವೆ- ಶರೀಫ್ ಕಾಡುಮಠ ಬರೆದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ