Advertisement

ಎಚ್. ಗೋಪಾಲಕೃಷ್ಣ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ

ಅದರ ಚಿತ್ರವನ್ನೇ ಮನದಲ್ಲಿ ತುಂಬಿಕೊಂಡು ಮನೆಗೆ ವಾಪಸ್ಸಾದೆ. ಯಾವ ಜೀವ ವಿಜ್ಞಾನಿಗಳ ಕಣ್ಣಿಗೂ ಕಾಣಿಸಿಕೊಳ್ಳದೇ ನಿಗೂಢವಾಗಿದ್ದ ಈ ಪ್ರಾಣಿ, ಕಾಡು ಬಿಟ್ಟು ನನ್ನ ತೋಟಕ್ಕೆ ಬರಲು ಕಾರಣವೇನಿರಬಹುದೆಂದು ಚಿಂತಿಸುತ್ತಾ ಹಾಸಿಗೆಯ ಮೇಲೆ ಮಲಗಿದೆ. ಹಾಗೆಯೇ ಅದರ ಆಹಾರ ಪದ್ಧತಿಗಳನ್ನು ಜ್ಞಾಪಿಸಿಕೊಳ್ಳತೊಡಗಿದೆ. ಮಲಬಾರ್ ಸೀವೆಟ್ ಕೆಲ ಚಿಕ್ಕ ಪ್ರಾಣಿಗಳನ್ನೂ, ಮೊಟ್ಟೆಗಳನ್ನೂ ಇಷ್ಟಪಟ್ಟು ತಿನ್ನುತ್ತದೆಂದು ಎಲ್ಲೋ ಓದಿದ್ದು ನೆನಪಾಯಿತು. ಸಂಜೆ ಹೆಗ್ಗಾಲುವೆಯ ಬಳಿ ಕಟ್ಟ ಹಾಕಲು ಹೋಗಿದ್ದಾಗ ಒಂದೆರಡು ಹುಂಡುಕೋಳಿಗಳು ಸರ‍್ರೆಂದು ಸದ್ದು ಮಾಡುತ್ತಾ, ನನ್ನನ್ನೇ ಗಾಬರಿಗೊಳಿಸಿ ಓಡಿಹೋಗಿದ್ದವು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವೇಣುಗೋಪಾಲ್ ಗಾಂವ್ಕರ್ ಕತೆ ‘ಅಡಿಯಪ್ಪ ಮತ್ತು ಸಿವೆಟ್’

Read More

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ನಿರಂಜನ ಕೇಶವ ನಾಯಕ ಬರೆದ ಈ ದಿನದ ಕವಿತೆ

“ನಿಲ್ಲದ ಈ ಓಡಾಟ,
ಸಮಯದೊಂದಿಗಿನ ಈ
ನಿಲ್ಲದ ಸೆಣೆಸಾಟ.

ದೀರ್ಘ ವಿರಾಮ,
ಪ್ರಕೃತಿ ಬರೆದ ನೀತಿ,
ಅನ್ವಯಿಸದು ಅಲೆಗಳಿಗೆ?” -ನಿರಂಜನ ಕೇಶವ ನಾಯಕ ಬರೆದ ಈ ದಿನದ ಕವಿತೆ

Read More

ಕನಸಾಗೇ ಉಳಿದ ಕನಸು: ಫಾತಿಮಾ ರಲಿಯಾ ಅನುಭವ ಕಥನದ ಕೆಲವು ಪುಟಗಳು

ನನ್ನ ಮಾತಲ್ಲಿ ಆತ್ಮವಿಶ್ವಾಸ, ಸತ್ಯ ಇಲ್ಲ ಅನ್ನುವುದು ತುಂಬಾ ಸ್ಪಷ್ಟವಾಗಿ ನನಗೇ ಗೊತ್ತಾಗುತ್ತಿತ್ತು, ಬಹುಶಃ ಅಮ್ಮನಿಗೂ ಗೊತ್ತಾಗಿದೆ. ನಾನು ಮಾತು ಮುಂದುವರೆಸಲಿಲ್ಲ, ಅಮ್ಮನೂ ಮುಂದುವರೆಸಲಿಲ್ಲ. ಇಬ್ಬರ ಮನದೊಳಗೂ ದುಃಖವೊಂದು ಹೊಯ್ದಾಡುತ್ತಿತ್ತು.‌ ಅಲ್ಲಿ ನೆಲೆ ನಿಂತಿದ್ದ ಮೌನ ನಮ್ಮಬ್ಬರಲ್ಲೂ ಉಸಿರುಗಟ್ಟಿಸುವ ಭಾವ ಹುಟ್ಟಿಸುತ್ತಿತ್ತು. ಅಮ್ಮನ ಕಣ್ಣು ತುಂಬಿಕೊಳ್ಳುತ್ತಿತ್ತು. ನಾನು ತೀರಾ ನಿರ್ಭಾವುಕಳಂತೆ ಅಲ್ಲಿಂದ ಎದ್ದು ಹೋದೆ, ನನಗೆ ಹಾಗೆ ಹೋಗದೆ ಬೇರೆ ದಾರಿಯೇ ಇರಲಿಲ್ಲ. ಯಾಕೆಂದರೆ ಇನ್ನೆರಡೇ ಎರಡು ನಿಮಿಷ ನಾನಲ್ಲಿ ನಿಂತಿದ್ದರೂ ಅಳು ಭೋರ್ಗರೆಯುತ್ತಿತ್ತು.
ಫಾತಿಮಾ ರಲಿಯಾ ಅನುಭವ ಕಥನ “ಕೀಮೋ” ಕೃತಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ರವಿಶಂಕರ ಪಾಟೀಲ ತೆಗೆದ ಈ ದಿನದ ಫೋಟೋ

ಈ ದಿನದ ಚಿತ್ರ ತೆಗೆದವರು ರವಿಶಂಕರ ಪಾಟೀಲ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ದವರಾದ ರವಿಶಂಕರ ಅವರು ವೃತ್ತಿಯಲ್ಲಿ ಪ್ರೌಢಶಾಲಾ ದೈಹಿಕ ಶಿಕ್ಷಕರು. ಸಣ್ಣಕತೆ ಪದ್ಯ ಅವರ ಆಸಕ್ತಿಯ ಸಾಹಿತ್ಯ ಪ್ರಕಾರಗಳು. “ದೃಷ್ಟಿಕೋನ” (2012) ಇವರ ಪ್ರಕಟಿತ ಕಥಾ ಸಂಕಲನ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ