Advertisement

ಕೆಂಡಸಂಪಿಗೆ

ಕರ್ವಾಲೋ ಮರು ಓದು, ಒಂದು ಧ್ಯಾನ: ದೇವಿಕಾ ನಾಗೇಶ್‌ ಬರಹ

ಇರುವೆಯಿಂದ ರಕ್ಷಿಸಿಕೊಳ್ಳಲು ಆ ಪ್ರಾಣಿ ಇದ್ದಕ್ಕಿದ್ದಂತೆ ಪಕ್ಕದ ದೊಡ್ಡ ಮರಕ್ಕೆ ಹಾರಿ ಮರ ಕೂತು ತನ್ನ ದೇಹಕ್ಕೆ ಅಂಟಿಕೊಂಡಿದ್ದ ಕೆಂಪಿರುವೆಗಳನ್ನು ತಿನ್ನತೊಡಗಿತು. ಇದು ಕಂಡು ಆಶ್ಚರ್ಯ ಚಕಿತರಾದ ಲೇಖಕರು ಹಾರೋ ಓತಿಕ್ಯಾತ ಇದು ಎಂದು ಖಾತ್ರಿಯಾದ ಖುಷಿಯಲ್ಲಿ ತನ್ನ ತಂಡದವರನ್ನು ಕೂಗಿ ಕರೆದರು. ಆದರೆ ಹಾರುವ ಓತಿಕ್ಯಾತ ಇದ್ದಲ್ಲಿ ನಿಲ್ಲುತ್ತದೆಯೇ? ಲೇಖಕರು ಅದನ್ನೇ ತದೇಕ ಚಿತ್ತರಾಗಿ ಕಣ್ಣಲ್ಲೇ ಹಿಂಬಾಲಿಸುತ್ತ ತಾವು ಕಂಡ ಈ ಅದ್ಭುತ ಸರೀಸೃಪವನ್ನು ತನ್ನ ತಂಡದವರಿಗೆ ಪರಿಚಯಿಸುವ ಆತುರದಲ್ಲಿದ್ದರು…
ಪೂರ್ಣಚಂದ್ರ ತೇಜಸ್ವಿಯವರ ಪ್ರಮುಖ ಕಾದಂಬರಿ “ಕರ್ವಾಲೋ”ದ ಮರು ಓದು, ದೇವಿಕಾ ನಾಗೇಶ್ ಬರಹ

Read More

ಅರಳುವ ಭಾವಲೋಕ: ದೀಪಾ ಗೋನಾಳ ಕವನ ಸಂಕಲನಕ್ಕೆ ಓ.ಎಲ್. ನಾಗಭೂಷಣ ಸ್ವಾಮಿ ಮಾತುಗಳು

ಪ್ರೇಮವೇ ಗೆಲುವುದು ಅನ್ನುವ ಶೀರ್ಷಿಕೆಯನ್ನೇ ನೋಡಿ. ಪ್ರೇಮ ಗೆಲ್ಲುವುದು ʻನಾನುʼ ನೋತಾಗ ಅಲ್ಲವೇ!. ಪ್ರೇಮ ಗೆದ್ದಿತು ಅನ್ನುವುದು ಬರಿಯ ಒಬ್ಬರ, ಪುಣ್ಯವಿದ್ದರೆ ಪಾಲ್ಗೊಂಡ ಇಬ್ಬರ ಮೈಮನಸುಗಳಿಗೆ ಮಾತ್ರ ಗೊತ್ತಿರುವ ಸಂಗತಿಯಾಗಬಹುದು, ಭಾಷೆಯನ್ನು ಬಲ್ಲ ಎಲ್ಲರಿಗೂ ಇದನ್ನು ಮನದಟ್ಟು ಮಾಡಿಸುವುದು ಎಷ್ಟು ಕಷ್ಟ. ಪ್ರೀತಿ ಶೃಂಗಾರದ ಬಯಕೆ, ತವಕ, ನೆನಪು, ಅವನ್ನೆಲ್ಲ ನುಡಿಯಾಗಿ ಕಾಣುವ ಹಂಬಲ ಇವೆಲ್ಲವೂ ಓದುಗರಲ್ಲೂ ಇರಬೇಕು. ಅಂದರೆ ಪ್ರೇಮವನ್ನು ಬಯಸುವ ಓದುಗ ಮನಸೂ ಬೇಕು.
ದೀಪಾ ಗೋನಾಳ ಕವನ ಸಂಕಲನ “ನಿನ್ನ ನೆನಪ ಕುಡಿದವಳು” ಕುರಿತು ಓ.ಎಲ್.‌ ನಾಗಭೂಷಣ ಸ್ವಾಮಿ ಬರಹ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ

‘ಈ ಮಹಾರಾಯನ ಕೊರೆತದಿಂದ, ನಾನು ಬೇರೆಯವರಿಗೆ ಎಷ್ಟು ಕೊರೆಯುತ್ತಿದ್ದೆ ಎಂಬ ಅರಿವಾಗಿದೆ. ಪಾಪ! ನನ್ನ ಸೊಸೆ ಚಿನ್ನದಂಥಾ ಹುಡುಗಿ. ಎಲ್ಲವನ್ನೂ ಸಹಿಸಿದ್ದಾಳೆ. ಈತನ ಕೊರೆತ ತಪ್ಪಿಸಿಕೊಳ್ಳಲು ಸೊಸೆಯನ್ನೇ ಮೊರೆ ಹೋಗಬೇಕು’ ಎಂದು ಮನದಲ್ಲೇ ನಿರ್ಧರಿಸಿದರು. ಮರುದಿನ ಬೆಳಿಗ್ಗೆ ನಂದಿನಿ ನಿತಿನ್‌ನನ್ನು ಶಾಲೆಗೆ ಒಯ್ಯಲು ಸಿದ್ಧಳಾದಾಗ ರಾಯರು ಅವಳಲ್ಲಿಗೆ ಬಂದರು. ಶಾಸ್ತ್ರಿಗಳು ಎಲ್ಲೂ ಕಾಣಿಸಲಿಲ್ಲ.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಯತಿರಾಜ್ ವೀರಾಂಬುಧಿ ಕತೆ “ಉಭಯ ಸಂಕಟ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಬೇಸಿಗೆ ತರಲಿರುವ ಅಸಹನೆ, ಆಕಾಂಕ್ಷೆ: ಡಾ. ವಿನತೆ ಶರ್ಮಾ ಅಂಕಣ

ಕ್ರಿಸ್ಮಸ್ ಲಂಚ್ ಮುಗಿಸಿಕೊಂಡು ವಾಪಸ್ ಬರುವಾಗ ನಾವು ‘ಕಂಟ್ರಿ ಸೈಡ್’ ದಾರಿ ಹಿಡಿದಿದ್ದೆವು. ನನಗೆ ಅದಾವುದರ ತಲೆಬುಡ ಗೊತ್ತಿರಲಿಲ್ಲ. ಕರೆದುಕೊಂಡು ಹೋದವರು ವಾಪಸ್ ಮನೆ ಸೇರಿಸುತ್ತಾರೆ ಎಂದು ನಿಶ್ಚಿಂತೆಯಿಂದ ಕಿಟಕಿಯಿಂದ ಕಾಣುತ್ತಿದ್ದ ಆಸ್ಟ್ರೇಲಿಯನ್ ಪೊದೆಕಾಡನ್ನು ನೋಡುತ್ತಾ ಕಳೆದುಹೋಗಿದ್ದೆ. ಇದ್ದಕ್ಕಿದ್ದಂತೆ ಕಾರಿನಲ್ಲಿ ತಾಪಮಾನ ಏರಿದಂತಾಯ್ತು. ಮುಖ ತಿರುಗಿಸಿದಾಗ ಆ ಕಡೆ ಕಂಡಿದ್ದು ಉದ್ದಾನುದ್ದಕ್ಕೆ ಹರಡಿಕೊಂಡು ಉರಿಯುತ್ತಿದ್ದ ಬೆಂಕಿಜ್ವಾಲೆ. ನಾನಿದ್ದ ಕಾರಿನಿಂದ ಸ್ಪಷ್ಟವಾಗಿ ಕಾಣುತ್ತಿದ್ದು, ಶಾಖದ ಅನುಭವವೂ ಚೆನ್ನಾಗಾಗುತ್ತಿತ್ತು. ಅಂದರೆ ಅಷ್ಟು ಹತ್ತಿರದಲ್ಲಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

 ಕನ್ನಡ ಕಲಿಕೆಯ ಮೂರು ಪ್ರಸಂಗಗಳು: ಎಲ್.ಜಿ.ಮೀರಾ ಅಂಕಣ

ನಾನು ಈ ಹುಡುಗಿಗೆ “ನಿನ್ನ ಗುರುತಿನ ಚೀಟಿ ಕೊಡಮ್ಮ” ಅಂದೆ. ಅವಳು ಗಾಬರಿಯಿಂದ “ಅದು ಇಲ್ಲ ಮ್ಯಾಮ್” ಅಂದಳು. ಪಾಪ, ಅದು ಅವಳ ಕುತ್ತಿಗೆಯಲ್ಲೇ ತೂಗುತ್ತಿತ್ತು. ಈ ಘಟನೆಯು ಘಟಿಸುತ್ತಿದ್ದಾಗ ನಮ್ಮ ಕೋಣೆಯಲ್ಲೇ ಕುಳಿತಿದ್ದ ಇಂಗ್ಲಿಷ್ ಅಧ್ಯಾಪಕಿಯೊಬ್ಬರು ಮುಗುಳ್ನಗುತ್ತಾ “ಅದು ನಿನ್ನ ಮೈಮೇಲೇ ಇದೆಯಲ್ಲಮ್ಮ” ಅಂದರು. ಆದರೂ ಆ ಹುಡುಗಿಗೆ ಗುರುತಿನ ಚೀಟಿ ಅಂದರೆ ಏನೆಂದು ಗೊತ್ತಾಗಲಿಲ್ಲ. ಏನು ಒತ್ತಡ ಇತ್ತೋ ಏನೋ ಪಾಪ ಅವಳಿಗೆ!
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂವತ್ತನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ