Advertisement

ಎಸ್. ಗಂಗಾಧರಯ್ಯ

ಪ್ರೀತಿ ಎಂಬ ಸಿಹಿಗುಳಿಗೆ ಕೊಡುವ ಚೇತನ

ಅವರು ಯಾವತ್ತು ಎಲ್ಲಿಗೇ ಬಂದರೂ ಇದುವರೆಗೆ ಅವರ ಮ್ಲಾನವಾದ ಮುಖವನ್ನು ನಾನು ನೋಡೇ ಇಲ್ಲ. ಯಾವಾಗಲೂ ನಗ್ತಾ ನಗ್ತಾ ಇರ್ತಾರೆ. ಅವರು ಮತ್ತು ಅವರ ಗೆಳತಿ ಸಂಧ್ಯಾ ರಾಣಿ ಯಾವುದೇ ಸಮಾರಂಭಕ್ಕೆ ಬಂದರೂ ಅವರು ಮುಖ ಕಳೆಗುಂದಿದ್ದನ್ನು ನಾನು ನೋಡೇ ಇಲ್ಲ. ಅವರು ಬಂದರೆ ಆ ವಾತಾವರಣವೆಲ್ಲ ಲೈಟ್ ಹೊತ್ತಿಸಿದಂತೆ… ಒಂದು ನೂರು ಕ್ಯಾಂಡಲ್ ಬಲ್ಬ್ ಹೊತ್ತಿಸಿದ ಹಾಗೆ! ಅವರನ್ನು ನೋಡ್ತಿದ್ದರೆ ನಮಗೂ ಆ ಉಲ್ಲಾಸ ವರ್ಗವಾಗಿ ಬಿಡತ್ತೆ. ಅದೇ ರೀತಿಯ ಅನುಭವ ಅವರ ಸಾಸಿವೆ ತಂದವಳು ಪುಸ್ತಕ ಓದುವಾಗಲೂ ಆಗಿತ್ತು.
ಬಿ.ವಿ. ಭಾರತಿ ಅವರ ‘ಎಲ್ಲಿಂದಲೋ ಬಂದವರು’ ಕೃತಿಗೆ ಟಿ.ಎನ್. ಸೀತಾರಾಮ್ ಬರೆದ ಮುನ್ನುಡಿ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಕಾನ್ಸ್‌ಟೇಬಲ್ಗೆ ರೈಫಲ್ಹಿಡಿದು ನಿಲ್ಲಲು ಸೂಚಿಸಿದೆ. ಮೊಬೈಲ್ ಫೋನಿನಲ್ಲಿ ತಹಶೀಲ್ದಾರರನ್ನು ಸಂಪಕಿಸಲು ನೋಡಿದೆ. ಶಿರಸ್ತೆದಾರ್ ಸಿಂಪಿಗೇರ್ ಸಿಕ್ಕ. ಎಲೆಕ್ಷನ್ ಡ್ಯೂಟಿಯಿಂದ ವಿನಾಯ್ತಿ ಕೇಳಿದ್ದಕ್ಕೆ ಬೇಕೆಂತಲೆ ನನ್ನನ್ನ ಈ ತರ್ಲೆಊರಿಗೆ ಪ್ರಿಸೈಡಿಂಗ್ ಆಫೀಸರ್ ಮಾಡಿಹಾಕಿಸಿದ್ದ ಮಹಾಶಯ ಅವ. ಪರಿಸ್ಥಿತಿ ವಿವರಿಸಿ ಹೆಚ್ಚೂಕಡಿಮೆ ಆದರೆ ಎಲೆಕ್ಷನ್ ರದ್ದುಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಅರ್ಧಗಂಟೆಯಲ್ಲಿ ಪೋಲೀಸ್ ಜೀಪು ಬಂದಿತು. ಅದರಲ್ಲೆ ನ್ಯಾಮತಿಗೆ ಹೋಗಿ ಐವತ್ತು ರೊಟ್ಟಿ ಕಟ್ಟಿಸಿಕೊಂಡು…”

Read More

ಕನ್ನಡದ ಹೊಸ ರೀತಿಯ ಕಾದಂಬರಿಗಳು: ಒಂದು ಪಕ್ಷಿನೋಟ

ಈ ಸಂಶೋಧನೆಗಳನ್ನು ಸರಿಯಾಗಿ ಗ್ರಹಿಸಿದರೆ ವಸಾಹತುಪ್ರಜ್ಞೆಯು ಕಾದಂಬರಿ ಪ್ರಕಾರದಲ್ಲಿ ಪ್ರಬಲವಾಗಿ ಬರುವ ಯುರೋಪಿನ ಕಥಾಹಂದರದ (Plot) ಮೂಲಕ ಹೇಗೆ ಭಾರತೀಯರಿಗೆ ತಮ್ಮ ಅನುಭವವನ್ನು ಹೇಳಲು ಅಡ್ಡಿಯಾಗುತ್ತದೆ ಎಂಬುದು ಅರ್ಥವಾಗುತ್ತದೆ. ಅಂದರೆ ಇಲ್ಲಿಯ ಊರು, ಕೇರಿ, ಜನ, ಜೀವನದ ಬಗ್ಗೆ ಕಾದಂಬರಿಗಳು ಹೇಳಿದರೂ ಕೂಡ ಯುರೋಪಿನ ಕಥಾಹಂದರದ ಚೌಕಟ್ಟು ಅನುಭವಗಳನ್ನು ಮಸುಕಾಗಿಸುತ್ತದೆ.”

Read More

ಮಮತಾ ಅರಸೀಕೆರೆ ದಿನದ ಕವಿತೆ

“ಆಷಾಡದ ಇದೇ ಸಂಜೆ ಋತುಘಾತಕ್ಕೆ
ಸಿಲುಕಿ ಕೆಂಪಾಗಿದ್ದಳು ಹುಡುಗಿ
ತುಡುಗು ದನ ಕೋಣಗಳ ಕಣ್ಣಲ್ಲಿನ
ದಾಹಬೆದರಿಕೆಗೆ ಬೆದರಿದ್ದಳು ಬೆಡಗಿ”- ಮಮತಾ ಅರಸೀಕೆರೆ ದಿನದ ಕವಿತೆ

Read More

ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿಯ ತುಣುಕು

ಮಲೀಕ ಮಾತಾಡಲಿಲ್ಲ. ಆಕೆಯನ್ನು ಸೆಳೆದುಕೊಂಡ. ತುಟಿಗೆ ತುಟಿ ಸೇರಿಸಿದ. ಇವನ ತುಟಿಗಳ ಕೊಂಕೋ, ಆಕೆಯ ಕೃತಕ ತುಟಿ ಕಳೆದುಕೊಂಡಿದ್ದ ತೇವವೋ, ಮುತ್ತಿಗೊಂದು ಸತ್ವವಿರಲಿಲ್ಲ, ಸೆಳೆತವಿರಲಿಲ್ಲ. ಸ್ಥಿತಿಸ್ಥಾಪಕತ್ವ ಕಳೆದುಕೊಂಡ ರಬ್ಬರಿನ ಬೊಂಬೆಯ ತುಟಿಯನ್ನು ಚುಂಬಿಸಿದಂತಾಯಿತು, ಮಲೀಕನಿಗೆ.  ಆಕೆ ಮುತ್ತಿನಿಂದಲೇ ಮಲೀಕನನ್ನು ದೂರಸರಿಸುವುದಕ್ಕೆ ಪ್ರಯತ್ನಿಸಿದಳು. -ದೇಹ ಸೌಂದರ್ಯದ ಜಿಜ್ಞಾಸೆಯನ್ನು ಕುರಿತು ಕಾದಂಬರಿಕಾರ ಗುರುಪ್ರಸಾದ್ ಕಾಗಿನೆಲೆ ಬರೆದ ಹೊಸ ಕಾದಂಬರಿ ‘ಕಾಯಾ’ ದಿಂದ ಆಯ್ದ ಒಂದು ಅಧ್ಯಾಯ ನಿಮ್ಮ ಓದಿಗಾಗಿ. 

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ