Advertisement

ಎಸ್. ಗಂಗಾಧರಯ್ಯ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕಥೆ

ಶರಾಬು ಪಾಕೀಟು ಸಿಗೋದು ಶೆಟ್ರು ತೋಟದಿಂದ ಬರೋಬ್ಬರಿ ಐದು ಮೈಲಿ ದೂರ. ಮಳೆ ಬೇರೆ. ನಡ್ಕಂಡು ಹೋಗಿ ಇವಳು ಶರಾಬು ಕುಡ್ದು ಏಡಿ ಹಿಡಿದು ತರೋ ಹೊತ್ಗೆ ಕತ್ತಲು ಕವಿದಿರುತ್ತೆ. ಹಂಗಾದ್ರೆ ರಾತ್ರಿ ಮಿಣಕ ಮಿಣಕ ಅನ್ನೊ ದೀಪದ ಬೆಳಕಲ್ಲಿ ಒಲೆ ಮುಂದೆ ಹೋಗೋದು ಸಾಧ್ಯವಿಲ್ಲ ಅಂತ ಎಣಿಸಿ ಶೆಟ್ರ ಹೆಂಡ್ತಿ ಬರ ಬರ ಒಳಗೋದ್ಲು. ಅಟ್ಟದ ಮೇಲಿಟ್ಟಿದ್ದ ಶೆಟ್ರ ಬಾಟ್ಲಿಲಿ ಅರ್ಧ ಇನ್ನೊಂದು ಬಾಟ್ಲಿಗೆ ಸುರ್ಕಂಡು ಅಮ್ಮಯ್ಯಂಗೆ ತಂದುಕೊಟ್ಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೇಲೂರು ರಘುನಂದನ್‌ ಬರೆದ ಕತೆ ‘ಏಡಿ ಅಮ್ಮಯ್ಯ’

Read More

ಸಂಪತ್ ಕುಮಾರ್ ದುರ್ಗೋಜಿ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಸಂಪತ್ ಕುಮಾರ್ ದುರ್ಗೋಜಿ. ಸಂಪತ್ ಕುಮಾರ್ ಹರಿಹರದವರು, ಹುಬ್ಬಳ್ಳಿಯಲ್ಲಿ ಈಗ ಕನ್ಸಲ್ಟಂಟ್. ಫೋಟೋಗ್ರಫಿ ಇವರ ಹವ್ಯಾಸ. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಗಿಣಿಬಿಸ್ಕತ್ತು ಕಾದಂಬರಿಯ ಒಂದೆಸಳು

ನಾವು ಮಕ್ಕಳು ಒಂದು ಕಡೆ ಆಡುತ್ತಿದ್ದೆವು. ಮೋಡ ಕಪ್ಪಾಯಿತು. ಮೀನು ಸಾರಿನ ಸಂಭ್ರಮದ ಮಧ್ಯ ಮಳೆ ಬರುವುದು ಚಿಂತೆಗೀಡು ಮಾಡಿತ್ತು. ಸಂದಿಗೊಂದಿಗಳಲ್ಲಿ, ಮೂಲೆಮುಡುಕುಗಳಲ್ಲಿ ಇದ್ದ ಪುಳ್ಳೆ ಸೌದೆಗಳನ್ನು ಅಜ್ಜಿ ಅದೇನೇನೋ ಗೊಣಗುತ್ತಾ ಎತ್ತಿ ತಂದು ಒಳಗೆ ಹಾಕುತ್ತಿದ್ದಳು. ಅಜ್ಜ ರಾತ್ರಿ ಕತ್ತಲಾದಾಗ ಬೆಳಕು ಮಾಡಲು ಸೀಮೆ ಎಣ್ಣೆ ದೀಪದ ಬತ್ತಿಗಳನ್ನು ಹಿಚುಕಿ ಸರಿಪಡಿಸುತ್ತಿದ್ದ. ಚಿಕ್ಕಪ್ಪ, ಅಪ್ಪ ಎಲ್ಲಿ ಮನೆ ಸೋರುತ್ತದೆಯೋ ಅಲ್ಲಿಗೆ ಕಾತಾಳೆ ಪಟ್ಟೆ, ಅಡಿಕೆ ಪಟ್ಟೆಗಳನ್ನು ತೂರಿಸುತ್ತ ಸೂರನ್ನು ಸರಿಪಡಿಸುತ್ತಿದ್ದರು. ಅಜ್ಜ ಮಾತ್ರ ‘ಈ ಹಾಳಾದ್ದು ಎಲ್ಲೋಯ್ತೋ ಕಾಣೆ… ಹೊತ್ನಂತೆ ಮನೆಗೆ ಬರಬ್ಯಾಡ್ವ’ ಅಂತ ಕೆಂಪಿಯನ್ನು ನೆನಪು ಮಾಡಿಕೊಳ್ಳುತ್ತಿದ್ದನು.
ಆಲೂರು ದೊಡ್ಡನಿಂಗಪ್ಪ ಬರೆದ ‘ಗಿಣಿ ಬಿಸ್ಕತ್ತು’ ಹೊಸ ಕಾದಂಬರಿಯ ಕೆಲ ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ