Advertisement

ಕೆಂಡಸಂಪಿಗೆ

ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

“ಮಾತು ಮಾತಿನ ನಡುವಿನ ಮೌನ
ಕ್ರಿಯೆಯ ನರನಾಡಿಗಳಲ್ಲಿ
ಹರಿಯುವ ನಿಷ್ಕ್ರಿಯೆ
ರಾತ್ರಿಗಳಲ್ಲೇ ಆಳವಾಗಿ ಬೇರು ಬಿಡುವ
ಕಣ್ಣ ನೋಟದ ಬೀಜ
ಅಪ್ಪಳಿಸುವ ಮುಂಚೆ
ಹಿಂದೆ ಸರಿಯುವ ತೆರೆ
ಎಲ್ಲವೂ ನೀರವತೆಯ ಮಿಂಚುಹುಳುಗಳಾಗಿ
ಗಾಜಿನ ಡಬ್ಬಿಯಲ್ಲಿ ಕೂತು
‘ಈ ಸಂಜೆಯೂ ಅಷ್ಟೇ
ಎಲ್ಲ ಸಂಜೆಗಳಂತೆ
ಕಳೆದುಹೋಗುತ್ತದೆ’-ರಮ್ಯಾ ಶ್ರೀಹರಿ ಬರೆದ ಈ ದಿನದ ಕವಿತೆ

Read More

ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

ನಮ್ಮ ಪುರಾಣಗಳನ್ನು ಕೆದಕುತ್ತಾ ಹೋದರೆ ಇಂತಹ ಬಹಳಷ್ಟು ಮಾದರಿಗಳು ಸಿಗಬಹುದು. ಪ್ರತಿಯೊಬ್ಬರ ಪರಿಸ್ಥಿತಿಗಳು ಪ್ರತಿಯೊಬ್ಬರ ಋಣದ ಬೇರುಗಳು ಭಿನ್ನವಾಗಿರಬಹುದು. ಆದರೆ ಧರ್ಮಸಂಕಟದ ಆ ಉತ್ಕಟ ಕ್ಷಣಗಳಲ್ಲಿ ಅವರು ತೆಗೆದುಕೊಂಡ ನಿರ್ಧಾರಗಳು ಖಂಡಿತವಾಗಿಯೂ ನಮ್ಮ ಬದುಕಿನ ಸಮಸ್ಯೆಗಳಿಗೂ ಒಂದು ದಾರಿಯನ್ನು ತೋರಿಸಬಹುದು. ಬದುಕಿನ ಅನಾಮಿಕ ತಿರುವಿನಲ್ಲಿ ಎದುರಾಗುವ ದ್ವಂದ್ವಗಳಲ್ಲಿ ಇಲ್ಲಿದ್ದು ಇಲ್ಲಿಲ್ಲ; ಅಲ್ಲಿದ್ದು ಅಲ್ಲಿಲ್ಲ ಅನ್ನುವಂತಾಗಿ ಇದು ಅಥವಾ ಅದು ಅನ್ನುವ ಆಯ್ಕೆ ಮಾಡಲೇಬೇಕಾದ ಪರಿಸ್ಥಿಗಳಲ್ಲಿ ನಮ್ಮ ಮುಂದೆ ಇವರು ಕೊಟ್ಟು ಹೋದ ಮಾದರಿಗಳಿವೆ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹೊಸ ಅಂಕಣ “ಇನ್ನೊಂದು ಬದಿ” ಇಂದಿನಿಂದ

Read More

ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ

‘ನಿಮ್ಮ ಮನೆಯಲ್ಲೂ ಪಾತಿ ಮಾಡಿದಾರಾ?’ ಎಂದು ಸುಮ್ಮನೆ ಮಾತಿಗೆ ಒಮ್ಮೆ ಕೇಳಿದ್ದೆ. ‘ನಮ್ಮನೆ ಮುಂದೆ ಲಾಲ್ ಬಾಗೇ ಇದೆಯಲ್ಲ?’ ಎಂದು ಫಟ್ಟನೆ ಹೇಳಿದಾಗ ಬೆಚ್ಚಿಬೀಳುವ ಹಾಗಾಯಿತು. ಅದೊಂದು ಮಹಾವಾಕ್ಯದಂತೆ ಕೇಳಿಸಿತ್ತು. ಲಾಲ್ ಬಾಗಿನ ಎದುರು ಇರುವ ಸ್ಲಮ್ಮಿನಲ್ಲಿ ಅವರದ್ದು ಜೋಪಡಿ ವಾಸ. ಹೈದರ್ ಅಲಿ ಟಿಪ್ಪು ಸುಲ್ತಾನರು ದೇಶ ವಿದೇಶಗಳಿಂದ ತರಿಸಿ ಬೆಳೆಸಿರುವ ಅಪರೂಪದ ವೃಕ್ಷಗಳ ನಡುವೆಯೇ ಬೆಳೆಯುತ್ತಿರುವ ಮಗು ಅವಳು.
ಖ್ಯಾತ ಲೇಖಕಿ, ಅನುವಾದಕಿ ಸುಕನ್ಯಾ ಕನಾರಳ್ಳಿ ಹೊಸ ಅಂಕಣ “ಕಡೆಗಣ್ಣಿನ ಬಿಡಿನೋಟ” ಇಂದಿನಿಂದ ಪ್ರತಿ ಬುಧವಾರಗಳಂದು ನಿಮ್ಮ ಓದಿಗೆ…

Read More

ನಾಯಿಕುರ್ಕನ ನೆರಳಿನಲ್ಲಿ: ವಿಜಯಶ್ರೀ ಹಾಲಾಡಿ ಕೃತಿಯ ಒಂದು ಪ್ರಬಂಧ

ಎಲ್ಲರೂ ಒಟ್ಟಾಗಿ ಅನ್ನ, ತಿಂಡಿ ತಿನ್ನುವಾಗ ಕರಿಯನ ಗಲಾಟೆಯೇ ಗಲಾಟೆ. ಯಾರಿಗೂ ತಿನ್ನಲು ಬಿಡದೆ ತಾನೇ ಎಲ್ಲವನ್ನೂ ಮುಕ್ಕಬೇಕೆನ್ನುವುದು ಅವಳ ಆಸೆ. ಎಂಥಾ ಬೊಬ್ಬೆ! ನನಗೆ ಏನು ಮಾಡಬೇಕೆಂಬುದೇ ತಿಳಿಯುತ್ತಿರಲಿಲ್ಲ. ಒಬ್ಬೊಬ್ಬರಿಗೆ ಒಂದೊಂದು ಕಡೆ ಊಟ ಹಾಕುವ ವ್ಯವಸ್ಥೆ ಮಾಡಿಕೊಂಡೆ. ಆದರೆ ಎಲ್ಲ ಕಡೆಯೂ ಹೋಗಿ ತಾನೇ ಬಾಯಿಹಾಕಿ ಯಾರಿಗೂ ಸರಿಯಾಗಿ ತಿನ್ನಲು ಬಿಡದೆ, ಕರಿಯ ಅವಸ್ಥೆ ಕೊಡುತ್ತಿದ್ದಳು. ಕೊನೆಕೊನೆಗೆ ಕೋಲು ಹಿಡಿದು ಊಟ ಹಾಕುವ ಪರಿಸ್ಥಿತಿ ಬಂದಿತು. ಈ ನಡುವೆ ಪಾಪದ್ದು ದಾಸುಮರಿ ತುಂಬಾ ಕಷ್ಟ ಅನುಭವಿಸಿತು. ಅದಕ್ಕೆ ಬೇಗ ಬೇಗ ತಿನ್ನಲು ಆಗುತ್ತಿರಲಿಲ್ಲ. ಎಲ್ಲವನ್ನೂ ಕರಿಯನೇ ತಿಂದುಹಾಕುತ್ತಿತ್ತು. ಇಷ್ಟೇ ಆಗಿದ್ದರೆ ಹೋಗಲಿ ಅನ್ನಬಹುದಿತ್ತು.
ವಿಜಯಶ್ರೀ ಹಾಲಾಡಿ ಪ್ರಬಂಧಗಳ ಸಂಕಲನ “ಕಾಡಿನ ಸಂಗೀತ” ಕೃತಿಯ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ