Advertisement

ಎಚ್. ಗೋಪಾಲಕೃಷ್ಣ

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

“ಬಾಂಬೆ ಬದುಕೆಂಬ
ರಣಭೀಕರ ಮಳೆಗೆ,
ನಾಳೆ ನಮ್ಮದೆನ್ನುವ
ಕನಸೇ ಛತ್ರಿ.
ಉತ್ತರವಿಲ್ಲದ ಪ್ರಶ್ನೆ
ಮರೆತು ನಿದ್ರೆ
ಬಂದರೆ ಸಾಕು,
ಈ ರಾತ್ರಿ!” -ಎಚ್. ವಿ. ಶ್ರೀನಿಧಿ ಬರೆದ ಈ ದಿನದ ಕವಿತೆ

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ

ಲ್ಲಯ್ಯ, ನಮ್ಮ ಅಜ್ಜಿಮನೆಯ ಮಾವಿನ ಮರದ ಕೆಳಗೆ ಸೈಕಲ್ ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೆ ಮಾರಾಯ? ನಾನು ಪಿಯುಸಿ ಓದುತ್ತಿದ್ದ ಒಂದು ಮೇ ರಜೆಯ ಮಧ್ಯಾಹ್ನ ಚಿಪ್ಪಿಕಲ್ಲಿನ ಸಾರು ಕುದಿಸ್ತಾ ಇರುವಾಗ- ಅಮ್ಮ ದಿಕ್ಕಬಳ್ಳಿ ಮೆಟ್ಟಿ ಬಂದವಳಂತೆ ಬಂದು ‘ಹಡಬೆ ಹೆಣ್ಣೆ! ಮರ್ಯಾದೆ ಕಳೀತಿಯೇನೇ?’ ಎಂದವಳೇ ಒಲೆಮೇಲಿನ ಸಾರೆತ್ತಿ ತೊಡೆ ಮೇಲೆ ಸುರಿದುಬಿಟ್ಟಳು! ನನ್ನ ನೋವುಗಳೇ ಹೀಗೆ. ಇಲ್ಲಿದೆ ಅಂತ ತೋರಿಸಿಕೊಳ್ಳಲು ಆಗದೆ ಹಾಗೆ! ಹೇಳು, ನಾ ಮಾಡಿದ ತಪ್ಪೇನು?
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವಿನಯಾ ಒಕ್ಕುಂದ ಕತೆ “ಒಂದು ಖಾಸಗಿ ಪತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಟೊಟೊ ಪುರಸ್ಕಾರ 2026: ಕನ್ನಡ ಸೃಜನಶೀಲ ಸಾಹಿತ್ಯ ಬರಹಗಳಿಗೆ ಆಹ್ವಾನ

ಕನ್ನಡ ಸೃಜನಶೀಲ ಸಾಹಿತ್ಯ ವಿಭಾಗ ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾದ 2026 ನೇ ಸಾಲಿನ ಟೊಟೊ ಪುರಸ್ಕಾರಕ್ಕಾಗಿ...

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ