Advertisement

ಎಸ್. ಗಂಗಾಧರಯ್ಯ

ಎಸ್.‌ ದಿವಾಕರ್‌ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

ಇಪ್ಪತ್ತನೆಯ ಶತಮಾನದಿಂದ ಹಿಂಸೆಯೇ ಸ್ಥಾಯಿಯಾಗಿ ಬದುಕೇ ಅಸಂಗತ, ಅಸಾಧ್ಯ ಸತ್ಯವಾಗಿ ಬಿಟ್ಟಿದೆ. ಇಂತಹದರಲ್ಲಿ ಕಾವ್ಯ ಏನು ಮಾಡಬೇಕು? ಉತ್ತರ ಕಾವ್ಯಕ್ಕೆ ಗೊತ್ತಿಲ್ಲ. ಕವಿ ಪ್ರಯತ್ನ, ಪ್ರಯೋಗ ಮಾಡುತ್ತಲೇ ಇರಬೇಕು. ನೋವಿನ, ಹಿಂಸೆಯ ಕ್ಷೋಭೆ, ಅಸ್ಥಿರತೆ ಅನಿಶ್ಚಿತತೆಗೆ ವಿರುದ್ಧವಾದ ಭಾಷೆಯ ಪಾರದರ್ಶಕತೆ, ಧ್ವನಿಗಳ ಲಯಗಾರಿಕೆ ಮತ್ತು ಬಿಂಬಗಳ ಖಚಿತತೆಯ ಮೂಲಕ ಹೇಳುವುದನ್ನು ಹೇಳಬೇಕು. ಅಸಹಜವಾದ ಅನುಭವವನ್ನು ಅಪಾರ ಸಹಜತೆಯ ಕಾವ್ಯಭಾಷೆಯನ್ನು ಶೋಧಿಸಿಕೊಂಡು ಬರೆಯಬೇಕು. ಇದನ್ನು ದಿವಾಕರರ ಕಾವ್ಯವು ಸಾಧಿಸಿದೆ. ಅವರ ಈ ಸಂಕಲನದ ಒಂದು ಕವಿತೆಯು ಪ್ರಾಸದ ಬಗ್ಗೆ ಇದೆ.
ಎಸ್.‌ ದಿವಾಕರ್‌ ಬರೆದ ವಿಧಾನಸಭೆಯಲ್ಲೊಂದು ಹಕ್ಕಿ ಕವನ ಸಂಕಲನಕ್ಕೆ ರಾಜೇಂದ್ರ ಚೆನ್ನಿ ಬರೆದ ಮುನ್ನುಡಿ

Read More

ನನ್ನ ಮೆಚ್ಚಿನ ನನ್ನ ಕಥಾ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಕತೆ

ಆ ಹೆಂಗಸು ಯಾವ ಮಾತನ್ನೂ ಆಡದೆ ಸುಮಾರು ಅರ್ಧ ಗಂಟೆ ಹಾಗೆಯೇ ಕುಳಿತಿದ್ದಳು. ಅಕ್ಕನ ಕಾಲಿಗೆ ನಮಸ್ಕಾರ ಮಾಡಿ ‘ಹೋಗಿ ಬರುತ್ತೇನಮ್ಮ’ ಎಂದಳು. ನನ್ನಲ್ಲಿ ಯಾವ ಮಾತನ್ನೂ ಆಡಲಿಲ್ಲ. ಮಗುವನ್ನು ಜೋಯಿಸರ ಕುರ್ಚಿಯ ಎದುರು ಸಾಷ್ಟಾಂಗ ನಮಸ್ಕಾರ ಮಾಡಿಸಿದಳು. ತಾನೂ ಆ ಕುರ್ಚಿಗೆ ನಮಸ್ಕರಿಸಿದಳು. ‘ಬಸ್ಸಿಗೆ ತಡಾವಾಯಿತೋ ಏನೋ’ ಎಂದು ತನ್ನಷ್ಟಕ್ಕೆ ಎಂಬಂತೆ ಅಕ್ಕನಿಗೆ ಮತ್ತೊಮ್ಮೆ ಹೇಳಿ ಅವಸರದಲ್ಲಿ ನಡೆದು ಹೋದಳು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಬೆಳಗೋಡು ರಮೇಶ ಭಟ್ ಬರೆದ ಕತೆ ಜೋಯಿಸರ ಕುರ್ಚಿ ಈ ಭಾನುವಾರದ ನಿಮ್ಮ ಓದಿಗೆ

Read More

ಪನೆಯಾಲ ರವಿರಾಜ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ಪನೆಯಾಲ ರವಿರಾಜ. ಯಕ್ಷಗಾನ ಕಲಾವಿದರಾಗಿದ್ದು ದಕ್ಷಿಣ ಕನ್ನಡದ  ಜೋಗಿಮೂಲೆ ಎಂಬಲ್ಲಿ ಕೃಷಿ ಮಾಡುತ್ತಿದ್ದಾರೆ. ಓದುವುದು ಮತ್ತು ಫೋಟೋಗ್ರಫಿ ಅವರ ಆಸಕ್ತಿ.‌ ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್‌ ವಿಳಾಸ: ks.kendasampige@gmail.com

Read More

ಜಿತೇಂದ್ರ ಬೇದೂರು ಬರೆದ ‘ಆಷಾಢ’ದ ಕವಿತೆ

“ಗೋಡೆ ಮೇಲೆ ತೆವಳುತಿದೆ ಬಸವನಹುಳು,
ಕೊನೆ ಕಾಣದ ಅಂಟು ರೇಖೆಯ ರಂಗವಲ್ಲಿ,
ಬಸವನ ಹುಳುವಿಗೆ ಸೆಡ್ಡು ಹೊಡೆದಂತೆ
ಆಷಾಢವೂ ತೆವಳುತಿದೆ.”- ಜಿತೇಂದ್ರ ಬೇದೂರು ಬರೆದ ಆಷಾಢದ ಕವಿತೆ

Read More

ಧರ್ಮಯುದ್ಧ ಕಾದಂಬರಿಯ ಕೆಲವು ಪುಟಗಳು

ಸುಕ್ಕ ಯಾನೆ ಸುಕುಮಾರನಿಗೆ ಶೇಂದಿ ಶರಾಬು ಕುಡಿಯುವ ಅಭ್ಯಾಸ ಆ ದಿನಗಳಲ್ಲಿ ಇರಲಿಲ್ಲ. ಆದರೆ ಒಮ್ಮೆಲೇ ಕುಳಿತು ಎರಡು ಬಾಟ್ಲಿ ಬಿಯರ್ ಕುಡಿಯುವ ತಾಕತ್ತು ಅವನಲ್ಲಿತ್ತು. ಅವನಂಥವನನ್ನು ಜನ ‘ಕುಡುಕ’ ಎನ್ನುತ್ತಿರಲಿಲ್ಲ. ‘ದೊಡ್ಡವರು ಕುಡಿಯುವುದಿಲ್ಲವೇ ಆರೋಗ್ಯಕ್ಕೆ’ ಎನ್ನುತ್ತಿದ್ದರು. ಸುಕ್ಕನಿಗೆ ಇದು ಗೊತ್ತಿತ್ತು. ಕಂಟ್ರಿ ಜನಗಳ ಹಾಗೆ ಕುಡಿದರೆ ತಾನೂ ಅವರಲ್ಲೊಬ್ಬನಾಗುತ್ತೇನೆ. ತಾನು ಅವರ ಹಾಗೆ ಆಗಬಾರದು, ಜನರನ್ನೆಲ್ಲ ನಿಯಂತ್ರಿಸುವ ಜನಪ್ರತಿನಿಧಿಯಾಗಬೇಕು ಎಂದು ಆತ ಬಹಳ ದಿನಗಳಿಂದ ಯೋಚಿಸುತ್ತಿದ್ದ. ಆ ಯೋಚನೆ ಕಳೆದ ಬಾರಿಯ ಪಂಚಾಯತ್ ಚುನಾವಣೆಯಲ್ಲಿ ಕಾರ್ಯಗತವಾಗಿತ್ತು.
ನಾ. ಮೊಗಸಾಲೆಯವರ ಹೊಸ ಕಾದಂಬರಿ ‘ಧರ್ಮಯುದ್ಧ’ದಿಂದ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ