Advertisement

ಎಚ್. ಗೋಪಾಲಕೃಷ್ಣ

ಪ್ರವೀಣ್‌ ಕುಮಾರ್‌ ಜಿ. ಬರೆದ ಈ ಭಾನುವಾರದ ಕತೆ

ರಾಜಣ್ಣನ ಕೊನೆಯ ಮಾತುಗಳನ್ನು ಕೇಳಿಸಿಕೊಂಡು ಕವಿತಾಳ ಕಣ್ಣುಗಳು ಗಾಬರಿಯಲ್ಲಿ ಅಗಲವಾದವಾ? ಅವನಿಗದು ಗೊತ್ತಾಗಲಿಲ್ಲವಾದರೂ ಉಸಿರು ಎಳೆಯುತ್ತಿದ್ದ ಕವಿತಾ “ನೀನಾದ್ಮ್ಯಾಲೆ ನನ್ನ ಯಾರೂ ಮುಟ್ಟಿಲ್ಲ.” ಎಂದು ಗೊಗ್ಗರು ದನಿಯಲ್ಲಿ ಹೇಳಿದ ಮಾತಿಗೆ ಬೇಕಾದ ಉಸಿರು ಪೂರ್ತಿ ಗಂಟಲಿನಿಂದಲೇ ಹೊರಗೆ ಹೋಗುತ್ತಿತ್ತು. “ನೀನಾದ್ಮ್ಯಾಲೆ ನನ್ನ…” ಎಂಬ ಶಬ್ದವೊಂದೇ ಅವನಿಗೆ ಅರ್ಧಂಬರ್ಧ ಕೇಳಿಸಿದ್ದು, ಅದೂ ಬರೀ ಗೊರಗೊರ. ಅವಳನ್ನೇ ದಿಟ್ಟಿಸುತ್ತಿದ್ದ ರಾಜಣ್ಣ ಕೆಲವೇ ಕ್ಷಣಗಳಲ್ಲಿ ಅವಳ ಉಸಿರು ನಿಂತಿದ್ದನ್ನು ಗೊತ್ತುಮಾಡಿಕೊಂಡು ತನ್ನ ಕುತ್ತಿಗೆಗೂ ಚಾಕು ಹಾಕಿಕೊಂಡ.
ಪ್ರವೀಣ್‌ ಕುಮಾರ್‌ ಜಿ. ಕಥಾ ಸಂಕಲನ “ಬಯಲು” ಕೃತಿಯ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಮುಕ್ತ ಹಾಜರಿ: ಮುಕುಂದ ಜೋಷಿ: ಜಯಂತ ಕಾಯ್ಕಿಣಿ ಕೃತಿಯ ಬರಹ

ಅವರ ಆ ಪುಸ್ತಕಕ್ಕೆ ಅವರ ಹಕ್ಕೊತ್ತಾಯದ ಮೇಲೆ ನಾನು ಬ್ಲರ್ಬ್ ಬರೆದಿದ್ದೆ. ಈ ಬಗ್ಗೆ ನಮ್ಮ ನಡುವೆ ಒಂದು ಜೋಕ್ ಇತ್ತು. ಏನೆಂದರೆ ಆ ಪುಸ್ತಕ ಮುದ್ರಣ ಶುರುವಾಗುವ ಹಂತದಲ್ಲಿದೆ ಎಂದು ತಿಳಿದು ಅಜಿತ್ ಪಂಜಾಬ್‌ನಲ್ಲಿ ಸೇರಿ ನಾವು ಬೀರೋಚಿತವಾಗಿ ಸಿಲೆಬ್ರೇಟ್ ಮಾಡುವಾಗ, ಅವರು ಚೂರು ತೊದಲುತ್ತ, “ಈ ಪುಸ್ತಕ ಯಾವಾಗರೆ ಬರ್ಲಿ, ಅದಕ್ಕೆ ಬಲ್ಬ್ ಮಾತ್ರ ನೀವೇ ಬರೀಬೇಕ್ರಿ’’ – ಎಂದರು. ಅಂದಿನಿಂದ ಬ್ಲರ್ಬ್ ಪದಕ್ಕೆ ಪರ್ಯಾಯವೆಂಬಂತೆ ನಾವು ಬಲ್ಬ್ ಎಂದೇ ಬಳಸುತ್ತಿದ್ದೆವು. ಎಷ್ಟು ಕ್ಯಾಂಡಲಿಂದು ಇತ್ಯಾದಿ ವಿವರಗಳೊಂದಿಗೆ. ಯಾವುದಾದರೂ ಹೊಸ ಪುಸ್ತಕದ ಹಿನ್ನುಡಿಯಲ್ಲಿ ಹುರುಳಿಲ್ಲದಿದ್ದರೆ, ‘‘ಝೀರೋ ಕ್ಯಾಂಡಲ್ ಬಲ್ಬ್ರೀ” ಅಂತಿದ್ರು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಮತ್ತೊಂದು ಬರಹ ನಿಮ್ಮ ಓದಿಗೆ

Read More

‘ಮಾವಿನ ತುಮಕಿʼ: ಮಾಮಾ ಶಾಂತಾ: ಜಯಂತ ಕಾಯ್ಕಿಣಿ ಕೃತಿಯ ಬರಹ

ಯಾವುದೇ ಬಸ್ಸು ಹಿಡಿಯಲು ಸರಿಯಾದ ಸಮಯಕ್ಕೆ ಅಥವಾ ಚೂರು ಮುಂಚಿತವಾಗಿ ಆಕೆ ಹೋಗಿದ್ದೇ ಇಲ್ಲ. ಬಸ್ಸು ಹೊರಡುವ ಟೈಮಿಗೆ ಆಕೆ ಮಹಾರಾಣಿಯಂತೆ ನಿಧಾನಕ್ಕೆ ಮನೆಯಿಂದ ಹೊರಡುತ್ತಿದ್ದಳು. ಮತ್ತು ಮನೆಯಲ್ಲಿದ್ದ ನನ್ನನ್ನೋ ರಾಜೇಂದ್ರನನ್ನೋ ರಮಾನಂದನನ್ನೋ “ಹೋಗು ಬಸ್ ನಿಲ್ಲಿಸು” ಎಂದು ಬಸ್ ಸ್ಟ್ಯಾಂಡಿಗೆ ಅಟ್ಟುತ್ತಿದ್ದಳು. ನಾವ್ಯಾರೂ ಇರದಿದ್ದರೆ ಹಾದಿಯಲ್ಲಿ ಸಿಗುವ ಯಾವುದಾದರೂ ಸೈಕಲ್ ಸವಾರರನ್ನು ಓಡಿಸುತ್ತಿದ್ದಳು. ಸಣ್ಣ ಊರಿನ ಬಸ್‌ಸ್ಟ್ಯಾಂಡ್ ಕಂಟ್ರೋಲರ್ ಎಲ್ಲರಿಗೂ ಪರಿಚಿತರಾಗಿದ್ದರಿಂದ ಒಮ್ಮೊಮ್ಮೆ ನಿಲ್ಲಿಸುತ್ತಿದ್ದರು. ಕೆಲವೊಮ್ಮೆ ಬಸ್ಸು ಹೋಗಿಬಿಟ್ಟಿರುತ್ತಿದ್ದವು. ಆಗ ಎಲ್ಲರೂ ಬೈಸಿಕೊಳ್ಳುತ್ತಿದ್ದೆವು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಬರಹ ನಿಮ್ಮ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

“ಮಿಥ್ಯಸುಖ”: ಕಾವ್ಯಾ ಕಡಮೆ ಹೊಸ ಕಾದಂಬರಿಯ ಆಯ್ದ ಭಾಗ

ಖಾಲಿ ಡಬರಿಯಲ್ಲಿ ಕಲ್ಲು ಗಲಗಲಿಸಿದಂತೆ ವಟವಟ ಎನ್ನುವ, ಹೊಕ್ಕಿದ ಕೋಣೆಯಲ್ಲೆಲ್ಲ ಹೀರೋ ಆಗುವ ಶತಪ್ರಯತ್ನ ನಡೆಸುತ್ತಲೇ ಒದ್ದಾಡುವ ಗಂಡಸರಿಂದ ನಾನು ಎಂದಿಗೂ ದೂರವೇ ಸರಿದಿದ್ದೇನೆ. ನಿಮಗೆ ನನ್ನ ಮೇಲೆ ಪ್ರಭಾವ ಬೀರುವುದಿದೆಯೇ? ಹಾಗಿದ್ದರೆ ದಯವಿಟ್ಟು ಮಾತು ನಿಲ್ಲಿಸಿ. ಪ್ರಪಂಚದಲ್ಲಿ ಹೇಳಲೇ ಬೇಕಿರೋದನ್ನೆಲ್ಲ ಶಬ್ದಗಳಿಲ್ಲದೇ ಸಂವಹಿಸಬಹುದು ಎಂಬುದನ್ನು ಮನಸಾ ಪಾಲಿಸಿದ್ದೇನೆ. ಸುಹಾಸನ ಬಳಿ ಮೊದಲ ಸಲ ಫೋನಿನಲ್ಲಿ ಮಾತನಾಡಿದಾಗ ಅವನು ಇಂಟರ್‌ವ್ಯೂಗೆ ತಯಾರಿ ಮಾಡಿಕೊಂಡು ಬಂದವನ ಹಾಗೆ ಒಂದು ಕ್ಷಣವನ್ನೂ ಬಿಡದೇ ತನ್ನ ಬದುಕಿನ ಎಲ್ಲ ಮೈಲುಗಲ್ಲುಗಳ ಪ್ರವರ ಒಪ್ಪಿಸಿದ್ದ.
ಕಾವ್ಯಾ ಕಡಮೆ ಹೊಸ ಕಾದಂಬರಿ “ಮಿಥ್ಯಸುಖ” ಇದೇ ಶನಿವಾರ ಬಿಡುಗಡೆಯಾಗಲಿದ್ದು, ಈ ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ