Advertisement

ಎಚ್. ಗೋಪಾಲಕೃಷ್ಣ

ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

“ಕತ್ತರಿಸಿ ಹೋದ ಕರುಳಬಳ್ಳಿ
ಅದ್ಯಾರದೋ ತಾಯಿಯ ರಕ್ತ ಕುಡಿದ
ಇಳೆಯು ರುಚಿಯೇರಿ ಮತ್ತದೇ ಬಳ್ಳಿಗಾಗಿ
ಕಾಯ್ದು ಕುಳಿತಂತಿದೆ!
ಒಂದು ಎರಡು ಹೀಗೆ ಅಗಣಿತ
ಆಗಷ್ಟೇ ಚಿಗುರಿದ ನಳನಳಿಸುವ ಚಿಗುರನ್ನು ಚಿವುಟಿ
ಮರದ ಬುಡವೇ ಬಾಡಿ ನೆಲವನ್ನಪ್ಪಿದೆ”-ಸೌಮ್ಯಶ್ರೀ ಎ.ಎಸ್. ಬರೆದ ಈ ದಿನದ ಕವಿತೆ

Read More

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ಅಂತ್ಯವಿಲ್ಲದೊಂದು ಕತೆ: ನಿ”ಶಾಂತ” ಬರಹ

ಆಮೇಲೆ ಬರುಬರುತ್ತಾ ನಮ್ಮ ಭೇಟಿಯ ದಿನಗಳು ಕ್ಷೀಣಿಸಿದವು. ಆದರೂ ಯಾಕೋ ಆ ಕಾರಣಕ್ಕೆ ಇಬ್ಬರೂ ಜಗಳ ತೆಗೆಯುವುದನ್ನು ನಿಲ್ಲಿಸಿದ್ದೆವು. ಒಬ್ಬರು ಸಿಗ್ತಿಯಾ ಅಂದಾಗ, ಬೆಂಗಳೂರಿನ ಆ ತುದಿಯಲ್ಲಿದ್ದರೂ ಬಂದು ಭೇಟಿ ಮಾಡಿಹೋಗುತ್ತಿದ್ದೆವು. ಮತ್ತೆ ಮುಂದಿನ ಭೇಟಿ ಬಗ್ಗೆ ಮಾತೇ ಇಲ್ಲ… ಸುಮ್ಮನೇ ನಮ್‌ನಮ್ಮ ಕೆಲಸಗಳ ಕುರಿತು, ಮನೆಯ ಪರಿಸ್ಥಿತಿಗಳ ಕುರಿತ ಮಾತಷ್ಟೇ. ಅಲ್ಲಿ ಯಾವುದೇ ಕವಿತೆಗೂ, ಗಜಲ್‌ಗೂ ಅವಕಾಶವಿರುತ್ತಿರಲಿಲ್ಲ. ಅದು ಇಬ್ಬರಿಗೂ ಬೇಕಾಗೂ ಇರಲಿಲ್ಲವೆನ್ನಿಸುತ್ತೆ. ಹಾಗಾಗಿ ಮೂರು ವರ್ಷಗಳ ಒಡನಾಟದ ಸಲುವಾಗಿಯಾದರೂ ಒಂದು ಗುಡ್‌ಬೈ ಸಹ ಹೇಳದೇ ನಮ್ಮ ನಮ್ಮ ಬದುಕಿನ ಹಾದಿಯಲ್ಲಿ ಸಿಕ್ಕ ತಿರುವುಗಳಲ್ಲಿ ನಡೆದುಹೋಗಿಬಿಟ್ಟಿದ್ದೆವು.
 “ದಡ ಸೇರದ ದೋಣಿ” ಹೊಸ ಸರಣಿಯಲ್ಲಿ ಅಂತ್ಯ ಸಿಕ್ಕದ ಪ್ರೇಮವೊಂದರ ಕುರಿತು ನಿ”ಶಾಂತ” ಬರಹ

Read More

ಉಪ್ಪನ್ನು ಹೀರಿಕೊಂಡ ನೀರಿನಂಥ ಕತೆಗಳು: ಮುನವ್ವರ್ ಕಥಾಸಂಕಲನಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

ಎಲ್ಲರೂ ಅರ್ಥವಾದಂತೆ ನಟಿಸುವ ಆದರೆ ನಿಜದಲ್ಲಿ ಸಂಕೀರ್ಣ ಸಮೀಕರಣದಂತಿರುವ ಬಡತನವೆನ್ನುವ ಬಾಳೆ ದಿಂಡಿನ ತಿರುಳನ್ನು ಪದರ ಪದರವಾಗಿ ಬಿಚ್ಚಿಟ್ಟು ‘ಇದು ಜಗತ್ತು, ಇದೇ ಜಗತ್ತು’ ಎಂದು ದಿಟ್ಟವಾಗಿ ಹೇಳುವ ಗಟ್ಟಿತನ ಇಲ್ಲಿನ ಹಲವು ಕಥೆಗಳಲ್ಲಿದೆ.‌ ಬಲ್ಬಿಗೆ ಬೆಳಕನ್ನು ತಲುಪಿಸುವ ತಂತಿಯ ವಿದ್ಯುತ್ತಿನಲ್ಲೇ ಪ್ರಾಣ ತೆಗೆಯುವ ಕರೆಂಟೂ ಇದೆ. ದುರಂತವೆಂದರೆ ನಮ್ಮ ಸಮಾಜದ ಕತ್ತಲನ್ನು ಹೋಗಲಾಡಿಸಲು ಕಂಡು ಹಿಡಿದ ನಾನಾ ಕರೆಂಟುಗಳು ಇಲ್ಲಿಯ ತನಕ ಬೆಳಕು ಕೊಟ್ಟಿದ್ದಕ್ಕಿಂತ ಪ್ರಾಣ ತೆಗೆದಿದ್ದೇ ಹೆಚ್ಚು ಎನ್ನುವ ಸೂಕ್ಷ್ಮವನ್ನು ಉಪ್ಪನ್ನು ಹೀರಿಕೊಂಡ ನೀರಿನಂತೆ ಇಲ್ಲಿನ ಕಥೆಗಳು ಕರಗಿಸಿಕೊಂಡಿವೆ.
ಮುನವ್ವರ್ ಜೋಗಿಬೆಟ್ಟು ಹೊಸ ಕಥಾಸಂಕಲನ “ಟಚ್‌ ಮೀ ನಾಟ್”ಕ್ಕೆ ವಿನಾಯಕ ಅರಳಸುರಳಿ ಮುನ್ನುಡಿ

Read More

ನಾಗರಾಜ್ ಕಾಂಬಳೆ ಬರೆದ ಈ ದಿನದ ಕವಿತೆ

“ಕಚ್ಚದೆಯೇ ವಿಷ ಉಗುಳಿದೆ
ಬುಸುಗುಡುವ ಹಾವೊಂದು
ಗಾಯವಾಗದೇ ವಿಷವೇರಿದೆ
ನೇರವಾಗಿ ಎದೆಗೆ

ಪ್ರೇಮ ಮತ್ತು ವಾತ್ಸಲ್ಯದ ಮರಕ್ಕೆ
ನೇಣು ಹಾಕಿಕೊಳ್ಳುವ ಬಯಕೆಗೆ
ಯಾರು ಹೊಣೆ?
ಈ ಅನಿರೀಕ್ಷಿತ ಸಾವಿಗೆ
ಹೃದಯವಿಲ್ಲ, ಕನಿಕರವಿಲ್ಲ”- ನಾಗರಾಜ್ ಕಾಂಬಳೆ ಬರೆದ ಈ ದಿನದ ಕವಿತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ