Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

“ನಿನ್ನದಾದ ನಂತರ
ದಯವಿಟ್ಟು ನನಗೆ ಹೇಳು
ನಾನೂ ಸುರು ಮಾಡುವೆ
ಅವಸರಿಸು ನೀನೇನಾದರೂ ನಿಧಾನಿಸಿದರೆ
ನಾನು ಮತ್ತೆ ಅವನನ್ನ ನೆನೆಯುವೆ!”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಎಮಿಲಿ ಡಿಕಿನ್ಸನ್ ಕವಿತೆ

Read More

ಪಟ್ಟಾಭಿ ಎಂಬ ಪಾಮರ: ಮೀನಾ ಮೈಸೂರು ಬರಹ

ಕೇವಲ ಕಾಲೇಜಿನಲ್ಲಿ ಪಾಠ ಮಾಡುತ್ತಾ ತನ್ನ ವಿದ್ಯಾರ್ಥಿಗಳೊಂದಿಗೆ ಸಾಹಿತ್ಯಿಕ ಚರ್ಚೆ ನಡೆಸುತ್ತಾ, ಅವರುಗಳ ಭವಿಷ್ಯ ರೂಪಿಸುವತ್ತ ಒತ್ತು ನೀಡುತ್ತಾ, ನೂರಾರು ವಿದ್ಯಾರ್ಥಿಗಳ ಪ್ರೀತಿಯ ಸರ್ ಆಗಿರುವುದರಲ್ಲೆ ತೃಪ್ತಿ ಕಂಡುಕೊಂಡಿದ್ದಾರೆ. ಅವರಿಗೊಂದು ರೀತಿಯ ದಿಟ್ಟ ಆತ್ಮವಿಶ್ವಾಸವಿದೆ. ಯಾವುದೇ ಕಾರಣಕ್ಕೂ ಯಾರಿಗೂ ತಲೆ ಬಾಗಿದವರಲ್ಲ. ಸಾಮಾಜಿಕ ಹೋರಾಟಗಾರ ಹಾಗೂ ನಿವೃತ್ತ ಪ್ರಾಧ್ಯಾಪಕರಾದ ಪಟ್ಟಾಭಿರಾಮ ಸೋಮಯಾಜಿ ನಿಧನರಾಗಿದ್ದು, ಅವರೊಂದಿಗಿನ ಒಡನಾಟದ ಕುರಿತು ಅವರ ಸ್ನೇಹಿತೆ ಮೀನಾ ಮೈಸೂರು ಬರೆದಿದ್ದ ಬರಹವೊಂದು ಇಲ್ಲಿದೆ

Read More

ಮುಳ್ಳಿನ ಮೇಲಿನ ಹೂವು: ವೇದಾ ಮನೋಹರ ಜೀವನ ಪಯಣದ ಕತೆ

ಈ ಹೋರಾಟಗಳಲ್ಲೆಲ್ಲಿಯೂ ನನಗೆ ಪಶ್ಚಾತ್ತಾಪವಿರಲಿಲ್ಲ. ಹಾಗೆ ನೋಡಿದರೆ ಇದು ನಾನೇ ಆಯ್ದುಕೊಂಡ ಬದುಕು. ನನ್ನ ಬದುಕನ್ನು ಅಪ್ಪ ಅಮ್ಮನ ಮಡಿಲಿಗೆ ಹಾಕಲಿಲ್ಲ. ಪ್ರೇಮಿಸಿ ಮದುವೆಯಾಗಿ ನನ್ನ ಹಾದಿಯನ್ನು ನಾನೇ ಕಂಡುಕೊಂಡೆ. ಮನೋಹರ್ ಅವರನ್ನು ಮದುವೆಯಾದ ಮೇಲೂ ಸಂಪೂರ್ಣವಾಗಿ ಅವರನ್ನು ಅವಲಂಬಿಸಕೂಡದು ಎಂಬ ತತ್ವ ನನ್ನದಿತ್ತು. ಅದಕ್ಕೆ ನೀರೆರೆದವರು ಮನೋಹರ್. ಅದೀಗ ಫಲ ಕೊಟ್ಟಿದೆ. ಯಾಕೆಂದರೆ ನಮ್ಮನ್ನು ನಾವು ನಂಬಿ ಮುನ್ನಡೆದಾಗ ಮಾತ್ರ ನಮಗೆ ಯಶಸ್ಸು ಸಿದ್ಧ ಎಂಬ ತತ್ವದಡಿ ಬದುಕಿದವಳು ನಾನು.
ಭಾರತಿ ಹೆಗಡೆ ನಿರೂಪಣೆಯ ವೇದಾ ಮನೋಹರ ಜೀವನ ಪಯಣದ ಕೃತಿ “ಪಂಚಮವೇದ”ದ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

“ಅಲೆಯುತ್ತಿದೆ ಗುರುತಿಲ್ಲದ ಪತ್ರ
ಹುಟ್ಟಿಗೊ ಹೊಟ್ಟು ಸುರುವಿ
ಬದುಕಿಗೊ ಕತ್ತರಿಯಾಡಿಸಿ
ಸುತ್ತ ಸುತ್ತುವ ಒಣಡಬರಿಯ ಮಾತು
ಹುಚ್ಚಾಗಿಸುತ್ತದೆ”- ಅಶೋಕ ಹೊಸಮನಿ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ