Advertisement
ರವಿ ಮಡೋಡಿ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ರವಿ ಮಡೋಡಿ ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿಟ್ಟೂರು ಬಳಿಯ ಮಡೋಡಿ ಗ್ರಾಮದವರು. ಹವ್ಯಾಸಿ ಯಕ್ಷಗಾನ ಕಲಾವಿದರಾಗಿ ಕಳೆದ 15 ವರ್ಷಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಪ್ರದರ್ಶನಗಳನ್ನು ತಮ್ಮ ತಂಡದೊಂದಿಗೆ ನೀಡಿದ್ದಾರೆ. ‌‘ಯಕ್ಷಸಿಂಚನ’ ಎನ್ನುವ ಹವ್ಯಾಸಿ ಯಕ್ಷಗಾನ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರಾದ ಅವರು ಸಂಸ್ಥೆಯ ಈಗಿನ ಅಧ್ಯಕ್ಷರೂ ಹೌದು.  ಯಕ್ಷಗಾನ ಕ್ಷೇತ್ರಕ್ಕೆ ತಂತ್ರಜ್ಞಾನದ ಲಾಭ ದೊರಕಿಸಿಕೊಡುವಲ್ಲಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿಯೂ ಕೆಲಸ ಮಾಡುತ್ತಿರುವ ಇವರು ಮಲೆನಾಡಿನ ಒಂದು ಶತಮಾನದ ಯಕ್ಷಗಾನ ಇತಿಹಾಸವನ್ನು ತಿಳಿಸುವ  ‘ಮಲೆನಾಡಿನ ಯಕ್ಷಚೇತನಗಳು’  ಎಂಬ ಪುಸ್ತಕವನ್ನು ಹೊರತಂದಿದ್ದಾರೆ. ಇದರ ಜೊತೆಗೆ ʼನಮ್ಮಲ್ಲೇ ಮೊದಲು’, ’ಪ್ರಸಂಗಕರ್ತ ಶ್ರೀಧರ ಡಿ.ಎಸ್’ ಇವರ ಇತರ ಕೃತಿಗಳು. ಅವರ ಹಲವಾರು ಕಥೆ, ಲೇಖನ, ಲಲಿತ ಪ್ರಬಂಧಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

ಡೋ.ರ. ಬರೆದ ಈ ದಿನದ ಕವಿತೆ

“ಇದ್ದರು ಇರದ೦ತಿರುವವರು
ಕೂಡಿಟ್ಟರು ಕೊಡದವರು
ಬೆಳೆದರೆ ಬುಡ ಕಡಿಯುವವರು
ಗೆದ್ದಾಗ ಗುಮ್ಮನಂತೆ
ಬೆನ್ನ ಹತ್ತಿ ಬರುವವರು
ಹೆಣದ ಮೇಲಿನ ಶೃಂಗಾರದಷ್ಟೆ ನಿಗೂಢವಾಗಿ ಕಾಣುವರೇಕೆ?”- ಡೋ.ರ. ಬರೆದ ಈ ದಿನದ ಕವಿತೆ

Read More

“ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌” ಕಥೆಗಳು….

ಈ ಕಥೆಗಳ ಗಮನ ಸೆಳೆಯುವ ಇನ್ನೂ ಕೆಲವು ಅಂಶಗಳೆಂದರೆ, ನಾಟಕೀಯತೆ, ಕಥಾವರಣದಲ್ಲಿ ಬಿಚ್ಚಿಕೊಳ್ಳುವ ಒಂದು ಬಗೆಯ ನಿಗೂಢತೆ ಮತ್ತು ಜನಪ್ರಿಯ ಕಥನ ಪರಂಪರೆಯಿಂದ ಪಡೆದ ಪ್ರಭಾವ. ಬೆಳೆಯುತ್ತಿರುವ ಲೇಖಕನೊಬ್ಬನಿಗೆ ಯಾವ ಅಂಶವೂ ವರ್ಜ್ಯವಲ್ಲ. ಮಾತ್ರವಲ್ಲ, ತನ್ನ ಕಥನ ಸಾಮರ್ಥ್ಯವನ್ನು ಕಂಡುಕೊಳ್ಳಲು ನಡೆಸುವ ಪ್ರಯೋಗ ಕೂಡ ಮುಖ್ಯ. ಮುನವ್ವರ್ ಅಂತಹ ಕಂಡುಕೊಳ್ಳುವಿಕೆಯ ಪ್ರಯತ್ನದಲ್ಲಿದ್ದಾರೆ.
ಮುನವ್ವರ್‌ ಜೋಗಿಬೆಟ್ಟು ಕಥಾಸಂಕಲನ”ಜಿನ್ನ್‌ ಮತ್ತು ಪರ್ಷಿಯನ್‌ ಕ್ಯಾಟ್‌”ಗೆ ಕೇಶವ ಮಳಗಿ ಬರೆದ ಪ್ರವೇಶಿಕೆ

Read More

ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

“ಕರಿಮುಸುಡಿಯ ಗಂಡಸರು
ಮುದಿ ಗಂಡಸರು
ಎಲ್ಲದರಲ್ಲೂ ಮೂಗು ತೂರಿಸುವ
ಚಿಗುರು ಮೀಸೆಯ ಗಂಡಸರು
ಸುಮ್ಮನೆ ಗಮನಿಸಿ
ಗಂಡಸರು ಸದಾ ಎಲ್ಲಿಗೋ ಹೋಗುತ್ತಲೇ ಇರುತ್ತಾರೆ
ಗೊತ್ತಿತ್ತು ಅವರಿಗೆ
ಅಲ್ಲಿಯೇ ಇದ್ದ ಹದಿಹರೆಯದ
ನಾನೊಬ್ಬಳು ಅವರಿಗಾಗಿ ಹಸಿದಿದ್ದೇನೆಂದು”- ಚೈತ್ರಾ ಶಿವಯೋಗಿಮಠ ಅನುವಾದಿಸಿದ ಮಾಯಾ ಆಂಜೆಲೋ ಮೂರು ಕವಿತೆಗಳು

Read More

ಇಲ್ಲಿ ಬಳ್ಳಿ, ಹೂವು, ಮೋಡ ಕೂಡ ಮಾತನಾಡುತ್ತವೆ: ಡಾ. ವಿಜಯಾ ಬರಹ

‘ಹೊರದಾರಿ’ಯಲ್ಲಿ ಬರುವ ದತ್ತು ಮಗುವಿನ ಸಮಸ್ಯೆ ಅನೇಕ ಸತ್ಯ ಘಟನೆಗಳನ್ನು ನೆನಪಿಸಿತು. ಇಂಥ ಸಮಸ್ಯೆಗಳಿಂದಲೇ ಇರಬೇಕು. ಈಗ ನಿಯಮಗಳು ತುಂಬಾ ಬಿಗಿಯಾಗಿವೆ. ಸುಲಭವಿಲ್ಲ ಮಗುವೊಂದನ್ನು ಪಡೆಯುವುದು. ಅದೇನೇ ಇರಲಿ ವಾಚ್ಯವಾಗಿ ಹೇಳದಿದ್ದರೂ ಹೆಣ್ಣು ಮಗುವೊಂದು ಮಾತ್ರ ಇನ್ನೊಂದು ಕರುಳಿನ ಕೂಗನ್ನು ಗ್ರಹಿಸಬಲ್ಲದು ಎಂದು ತೋರಿದ್ದೀರಿ. ಎಲ್ಲಕ್ಕಿಂತ ಮಿಗಿಲಾಗಿ ನನಗೆ ನೀವು ಕೊಡುವ ವಿವರಗಳು ಆಪ್ತವಾದವು. ಗಿಡ ಮರ ಬಳ್ಳಿಗಳ ಜೊತೆ ಮಾತಾಡಿಬಿಡುತ್ತೀರಿ!
ಎ.ಎನ್. ಪ್ರಸನ್ನ ಕಥಾ ಸಂಕಲನ “ದಾಸವಾಳ” ಕುರಿತು ಡಾ. ವಿಜಯಾ ಬರಹ

Read More

ಶ್ರೀವೆಂಕಣ್ಣಯ್ಯನವರಿಗೆ |ಕುವೆಂಪು ‘ಶ್ರೀ ರಾಮಾಯಣ ದರ್ಶನಂ’ ನ ಒಂದು ಸಂಕ್ಷಿಪ್ತ ವಾಚನ-ವ್ಯಾಖ್ಯಾನ|ಡಾ.ಕೆ ಎನ್ ಗಣೇಶಯ್ಯ

ಶ್ರೀವೆಂಕಣ್ಣಯ್ಯನವರಿಗೆ |ಕುವೆಂಪು ‘ಶ್ರೀ ರಾಮಾಯಣ ದರ್ಶನಂ’ ನ ಒಂದು ಸಂಕ್ಷಿಪ್ತ ವಾಚನ-ವ್ಯಾಖ್ಯಾನ|ಡಾ.ಕೆ ಎನ್ ಗಣೇಶಯ್ಯ

ಕೃಪೆ: ಮಾಧ್ಯಮ ಅನೇಕ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ